ತೋಟಗಾರಿಕೆ ಬೆಳೆಗೂ ಬಂತು ಕುತ್ತು

1,794 ಹೆಕ್ಟೇರ್‌ ಲಿಂಬೆ ಹಾನಿ ದುಡ್ಡು ಕೊಟ್ಟು ಟ್ಯಾಂಕರ್‌ ನೀರಿಗೆ ಮೊರೆ ಹೋದ ರೈತರು

Team Udayavani, Apr 11, 2019, 10:35 AM IST

11-April-2

ಇಂಡಿ: ಹಿರೇರೂಗಿ ಗ್ರಾಮದಲ್ಲಿ ಲಿಂಬೆ ಬೆಳೆ ಒಣಗಿರುವುದು.

ಇಂಡಿ: ತಾಲೂಕಿನಾದ್ಯಂತ ಭೀಕರ ಬರಗಾಲ ಆವರಿಸಿದ್ದು ಬಿರು ಬಿಸಿಲಿಗೆ ತೋಟಗಾರಿಕೆ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ತೋಟಕಾರಿಕೆ ಬೆಳೆ ಬೆಳೆಯುವ ರೈತರಿಗೆ ನೀರಿಲ್ಲದೆ ಇರುವುದರಿಂದ ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಡುವಂತಾಗಿದೆ.

ತಾಲೂಕಿನಾದ್ಯಂತ ಒಟ್ಟು 5,418 ಹೆಕ್ಟರ್‌ ಲಿಂಬೆ, 1,784 ಹೆಕ್ಟೇರ್‌ ದ್ರಾಕ್ಷಿ, 2,294 ದಾಳಿಂಬೆ, 230 ಹೆಕ್ಟೇರ್‌ ಬಾಳೆ, 250 ಹೆಕ್ಟೇರ್‌ ಬಾರೆ, 200 ಹೆಕ್ಟೇರ್‌
ಹೂ, 147 ಹೆಕ್ಟೇರ್‌ ಹಣ್ಣಿನ ಗಿಡಗಳು ಸೇರಿ ಒಟ್ಟು 14,874 ಹೆಕ್ಟೇರ್‌ ತೋಟಗಾರಿಕೆ ಕ್ಷೇತ್ರವಿದೆ. ದೇಶದಲ್ಲಿಯೇ ಲಿಂಬೆ ಬೆಳೆಗೆ ಪ್ರಸಿದ್ಧವಾದ ಇಂಡಿ
ತಾಲೂಕಿನಲ್ಲಿ ಪ್ರತಿ ಬಾರಿಯೂ ಬೇಸಿಗೆಯಲ್ಲಿ ನೀರಿನ ಅಭಾವದಿಂದ ನೂರಾರು ಎಕರೆ ಪ್ರದೇಶದಲ್ಲಿ ಲಿಂಬೆ ಬೆಳೆ ಒಣಗಿ ಲಿಂಬೆ ಕ್ಷೇತ್ರ ಕ್ಷೀಣಿಸುತ್ತ ಹೋಗುತ್ತಿದೆ.

ಪ್ರಸಕ್ತ ವರ್ಷ 5,418 ಹೆಕ್ಟೇರ್‌ ಪ್ರದೇಶದಲ್ಲಿ ಇದ್ದ ಲಿಂಬೆ ಬೆಳೆ 1,794 ಹೆಕ್ಟೇರ್‌ ಹಾನಿಗೀಡಾಗಿ ಒಟ್ಟು 3,624 ಹೆಕ್ಟೇರ್‌ ಪ್ರದೇಶ ಮಾತ್ರ ಲಿಂಬೆ ಬೆಳೆ ಉಳಿದುಕೊಂಡಿದ್ದು ಇನ್ನೂ ನೀರಿನ ಅಭಾವದಿಂದ ಸಾಕಷ್ಟು ಹೆಕ್ಟೇರ್‌ ಕಡಿಮೆಯಾಗುವ ಸಾಧ್ಯತೆ ಇದೆ. ಇನ್ನು ದಾಳಿಂಬೆ ಬೆಳೆಯೂ ನೀರಿನ ಕೊರತೆಯಿಂದ 50 ಹೆಕ್ಟೇರ್‌ ಹಾನಿಯಾಗಿದೆ ಎಂದು ಇಲಾಖಾ
ವರದಿಯಿಂದ ತಿಳಿದು ಬಂದಿದೆ.

ಟ್ಯಾಂಕರ್‌ ನೀರು: ಇನ್ನು ಲಿಂಬೆ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ. ಬೇಸಿಗೆ ಪ್ರಾರಂಭವಾಗಿದ್ದರಿಂದ ಲಿಂಬೆ ಬೆಳೆಗೆ ಕನಿಷ್ಠ
2,500ರಿಂದ 4,000ರೂ.ವರೆಗೆ ದರ ನಿಗದಿಯಾಗಿದ್ದು ರೈತರು ಲಿಂಬೆ ಹಣ್ಣು ಮಾರಿ ಬಂದ ಹಣವನ್ನು ಆ ಗಿಡಗಳನ್ನು ಉಳಿಸಿಕೊಳ್ಳಲು ಟ್ಯಾಂಕರ್‌ ಮೂಲಕ ನೀರುಣಿಸುತ್ತಿದ್ದಾರೆ.

ಲಾರಿಯಲ್ಲಿ ತುಂಬಿಕೊಂಡು ಬರುವ ಟ್ಯಾಂಕರ್‌ ಗಳಿಗೆ 1500-1800 ಹಾಗೂ ಸಣ್ಣ ಟ್ಯಾಂಕರ್‌ಗಳಿಗೆ 700ರಿಂದ 900 ರೂ. ಕೊಟ್ಟು ಗಿಡಗಳಿಗೆ ನೀರುಣಿಸುವ
ಕಾರ್ಯ ಮಾಡುತ್ತಿದ್ದಾರೆ. ದೊಡ್ಡ ಟ್ಯಾಂಕರ್‌ಗಳ ನೀರು 20ರಿಂದ 22 ಗಿಡಗಳಿಗೆ ನೀರುಣಿಸಿದರೆ, ಸಣ್ಣ ಟ್ಯಾಂಕರಗಳಿಂದ 8-10 ಗಿಡಗಲು ನೀರುಣುತ್ತವೆ. ಸರ್ಕಾರದಿಂದ ಲಿಂಬೆ ಉಳಿಸಿಕೊಳ್ಳಲು ಸ್ವಲ್ಪ ಮಟ್ಟಿಗಾದರೂ ಸಹಾಯ ಮಾಡಿದರೆ ರೈತರಿಗೆ ಅನುಕೂಲವಾಗುತ್ತದೆ. ಆದರೆ ಸರ್ಕಾರ ಇದರ ಬಗ್ಗೆ ಕಿಂಚಿತ್ತೂ ವಿಚಾರ ಮಾಡುತ್ತಿಲ್ಲ ಎಂಬುದು ರೈತರ ಆರೋಪವಾಗಿದೆ.

ಸರ್ಕಾರ ತೋಟಗಾರಿಕೆ ಬೆಳೆ ಉಳಿಸಿಕೊಳ್ಳಲು ಪ್ರತಿ
ರೈತರಿಗೂ ಟ್ಯಾಂಕರ್‌ ನೀರಿನ ವ್ಯವಸ್ಥೆ ಮಾಡಿಕೊಟ್ಟು ಬೆಳೆ
ಉಳಿಸಿ ಕೊಡಬೇಕು. ಒಂದೇ ವರ್ಷದಲ್ಲಿ ತೋಟಗಾರಿಕೆ
ಬೆಳೆ ಬರಲ್ಲ. ಕನಿಷ್ಠ ಐದಾರು ವರ್ಷವಾದರು ಬೇಕಾಗುತ್ತದೆ.
ಆದ್ದರಿಂದ ದೀರ್ಘ‌ಕಾಲದ ಬೆಳೆ ಉಳಿಸಲು ಸರ್ಕಾರ
ರೈತರ ನೆರವಿಗೆ ಬರಬೇಕು.
.ರಮೇಶ ಮರಡಿ,
ಬೀರಪ್ಪ ಹೀರಣ್ಣಗೋಳ
ಹಿರೇರೂಗಿ ರೈತರು

ತೋಟಗಾರಿಕೆ ಬೆಳೆಗಳಿಗೆ ಟ್ಯಾಂಕರ್‌ ಮೂಲಕ ನೀರುಣಿಸಲು ಸರ್ಕಾರಕ್ಕೆ
ಪತ್ರ ಬರೆಯಲಾಗಿದೆ. ಸರ್ಕಾರದಿಂದ ನಿರ್ದೇಶನ ಬಂದರೆ ಮಾತ್ರ ಟ್ಯಾಂಕರ್‌ ನೀರಿಗೆ ಇಲಾಖೆಯಿಂದ ಸಹಾಯ ಮಾಡಬಹುದಾಗಿದೆ.
.ಆರ್‌.ಟಿ. ಹಿರೇಮಠ,
ತೋಟಗಾರಿಕೆ
ಇಲಾಖಾಧಿಕಾರಿ, ಇಂಡಿ

ಉಮೇಶ ಬಳಬಟ್ಟಿ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.