ಮಹಾತ್ಮರ ಸಂದೇಶಗಳು ಸಾರ್ವಕಾಲಿಕ

ಸಮಾಜದ ಪ್ರಗತಿಗೆ ಶಿಕ್ಷಣ ಪ್ರಮುಖ ಅಸ್ತ್ರ •ಪ್ರೀತಿ-ವಿಶ್ವಾಸದ ಜೀವನ ಸಾಗಿಸಲು ಸಲಹೆ

Team Udayavani, Jun 10, 2019, 4:20 PM IST

10-Juen-30

ಇಂಡಿ: ಸಾಮೂಹಿಕ ವಿವಾಹದಲ್ಲಿ ಬೌದ್ಧ ಧರ್ಮದ ಪ್ರಕಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟ 22 ಜೋಡಿಗಳು.

ಇಂಡಿ: ಬುದ್ಧ, ಬಸವ, ಅಂಬೇಡ್ಕರ್‌ ಅವರು ಶೋಷಿತರ ಉದ್ದಾರಕರಾಗಿದ್ದು ಅವರ ಸಂದೇಶಗಳು ಸರ್ವಕಾಲಿಕ. ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾಗಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಬಾಬಾಸಾಹೇಬ ಅಂಬೇಡ್ಕರ್‌ ಹಾಗೂ ಭಗವಾನ ಬುದ್ಧ ಜಯಂತಿ ನಿಮಿತ್ತ ಭಾರತೀಯ ಬೌದ್ಧಸಭಾ ಮತ್ತು ಡಿಪ್ರೇಸ್‌ ಕ್ಲಾಸ್‌ ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘ ಪಟ್ಟಣದ ಪೊಲೀಸ್‌ ಪರೇಡ್‌ ಮೈದಾನದಲ್ಲಿ ರವಿವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತಾಡಿದರು.

ಸಾಮೂಹಿಕ ಸರಳ ವಿವಾಹ ಅತ್ಯಂತ ಪವಿತ್ರ. ಬೌದ್ಧ ಧರ್ಮದ ಪ್ರಕಾರ ಯಾವುದೇ ವ್ಯಕ್ತಿ ಜೀವನದಲ್ಲಿ ಅಡಂಭರವಿಲ್ಲದ ಶುದ್ಧ ಜೀವನ ಸಾಗಿಸುವುದಾಗಿದೆ. ಭಗವಂತ ಈ ಭೂಮಿ ಮೇಲೆ ಪ್ರತಿಯೊಂದು ಜೀವಿಗೆ ತನ್ನದೇಯಾದ ವಿಶಿಷ್ಟ ಶಕ್ತಿ ಕೊಟ್ಟಿದ್ದಾನೆ. ಅದನ್ನು ಒಳ್ಳೆ ಕಾರ್ಯಗಳಿಗೆ ಉಪಯೋಗಿಸಬೇಕು. ಇಂದು ಸಾಮೂಹಿಕ ವಿವಾಹಗಳನ್ನು ಮಾಡುವ ಮೂಲಕ ಬೌದ್ಧ ಮಹಾಸಭಾ ಪದಾಧಿಕಾರಿ ಗೌರವ ತರುವ ಕೆಲಸ ಮಾಡಿದ್ದಾರೆ ಎಂದರು.

ಇಂತಹ ಕಾರ್ಯಗಳು ಇನ್ನೊಂದು ಸಮುದಾಯಕ್ಕೆ ಮಾದರಿಯಾಗಿದೆ. ಒಂದು ಸಮಾಜದ ಪ್ರಗತಿಗೆ ಶಿಕ್ಷಣ ಪ್ರಮುಖ ಅಸ್ತ್ರವಾಗಿದೆ. ದಲಿತ ಸಮುದಾಯ ಬಂಧುಗಳು ಅಂಬೇಡ್ಕರ್‌ ಹೇಳಿದ ಮೂರು ಮಂತ್ರಗಳಾದ ಶಿಕ್ಷಣ, ಸಂಘಟನೆ, ಹೋರಾಟಗಳೆಂಬ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಎಲ್ಲಿ ಸಮಾನತೆ ಇದೆ ಅಲ್ಲಿ ಒಳ್ಳೆ ಕಾರ್ಯಗಳು ನಡೆಯುತ್ತವೆ. ಮನುಷ್ಯ ಇರುವ ದಿನಗಳಲ್ಲಿ ಪ್ರೀತಿ, ವಿಶ್ವಾಸದ ಜೀವನ ಸಾಗಿಸಬೇಕು. ಡಾ| ಬಾಬಾಸಾಹೇಬ ಅಂಬೇಡ್ಕರ್‌ ಕೇವಲ ಒಂದೇ ವರ್ಗಕ್ಕೆ ಸೀಮಿತರಲ್ಲ. ಇಡಿ ಶೋಷಿತ ಸಮುದಾಯದ ಧ್ವನಿಯಾಗಿ ಕೆಲಸ ಮಾಡಿದ್ದಾರೆ. ಬಾಬಾಸಾಹೇಬ ಅಂಬೇಡ್ಕರ್‌ ವಿಚಾರಗಳು ಮನೆ ಮನೆಗೆ ತಲುಪುವಂತಾಗಬೇಕು ಎಂದು ಹೇಳಿದರು.

ಡಾ| ಬಾಬಾಸಾಹೇಬ ಅಂಬೇಡ್ಕರ್‌ ಎರಡನೇ ಮೊಮ್ಮಗ ಭೀಮರಾವ್‌ ಅಂಬೇಡ್ಕರ್‌ ಮಾತನಾಡಿ, ಸಮಾಜದಲ್ಲಿ ಇಂತಹ ಸರಳ ಸಾಮೂಹಿಕ ವಿವಾಹಗಳು ನಡೆಯಬೇಕು. ಬುದ್ಧ ಧಮ್ಮ ತತ್ವ ಸಂದೇಶಗಳು ಅತ್ಯಂತ ಸರಳ ಮಾರ್ಗವಾಗಿದೆ. ಪ್ರತಿಯೊಬ್ಬ ವ್ಯಕ್ತಿಗೆ ಒಳ್ಳೆ ಮಾರ್ಗ ಕಂಡುಕೊಳ್ಳಲು ಸರಳ ದಾರಿಯಾಗಿದೆ. ಇಂದಿನ ದಿನಗಳಲ್ಲಿ ದುಂದು ವೆಚ್ಚದ ಮದುವೆ ಮಾಡಿ ಸಾಲದ ವಿಷ ವರ್ತುಲದಲ್ಲಿ ಸಿಲುಕುವುದಕ್ಕಿಂತ ಎಲ್ಲ ಗುರು ಹಿರಿಯರ, ಬೌದ್ಧ ಭಂತೇಜಿಯವರ ಸನ್ನಿಧಾನದಲ್ಲಿ ಮದುವೆಗಳು ನಡೆದರೆ ಯಾವುದೇ ವಿಘ್ನಗಳು ಬರುವುದಿಲ್ಲ. ವರದಕ್ಷಿಣೆ ಸಮಾಜ ಘಾತಕ ಶಕ್ತಿ ಇದ್ದಂತೆ. ವರದಕ್ಷಿಣೆ ಕೊಡುವವರಿಗಿಂತ ತೆಗೆದುಕೊಳ್ಳುವದು ಮಹಾ ಅಫರಾಧ. ಸಂವಿಧಾನದಲ್ಲಿ ಕಠಿಣ ಶಿಕ್ಷೆ ಇರುವದರಿಂದ ಸರಳ ಸಾಮೂಹಿಕ ವಿವಾಹ ಸಮಾಜದಲ್ಲಿ ನಡೆಯಬೇಕು ಎಂದು ಹೇಳಿದರು. ಮಾಜಿ ಶಾಸಕ ರಾಜು ಆಲಗೂರ ಮಾತನಾಡಿ, ಸಮಾಜದಲ್ಲಿ ಸರಳ ಸಾಮೂಹಿಕ ವಿವಾಹಗಳು ನಡೆಯಬೇಕು. ಬೌದ್ಧ ಮಹಾಸಭಾದಿಂದ ನಡೆಯುವ ಸಾಮೂಹಿಕ ವಿವಾಹ ವಿಜಯಪುರ ಜಿಲ್ಲೆಯಲ್ಲಿಯೇ ಪ್ರಥಮ ಎಂದು ಹೇಳಿದರು.

ಬೀದರ ಬುದ್ಧ ವಿಹಾರದ ವರಜ್ಯೋತಿ ಅಣದೂರ ಪೂಜ್ಯರು ದಿವ್ಯ ಸಾನ್ನಿಧ್ಯ ವಹಿಸಿದ್ದ‌ರು. ಶಿವಶಂಕರ ಸ್ವಾಮಿಗಳು, ಶಿವಬಸವ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದ‌ರು. ಚಂದ್ರಶೇಖರ ಕೋಡಬಾಗಿ, ದಿನೇಶ ವೀರಶೆಟ್ಟಿ, ಜಟ್ಟೆಪ್ಪ ರವಳಿ, ಕಾಸುಗೌಡ ಬಿರಾದಾರ, ಪ್ರಶಾಂತ ಕಾಳೆ, ಭೀಮಣ್ಣಾ ಕೌಲಗಿ, ಅಣ್ಣಾರಾವ್‌ ಸೋಲಾಪುರ ವೇದಿಕೆಯಲ್ಲಿದ್ದರು.

ತುಕಾರಾಮ ಅಣ್ಣಿಗೇರಿ, ರಮೇಶ ನಿಂಬಾಳ, ಮಲಕು ನಗಡ್ಡಿ, ರವಿ ನಡಗಡ್ಡಿ, ಧರ್ಮು ಸಾಲೋಟಗಿ, ಧರ್ಮು ಪರಶೇನರ, ರಾಜು ಬಾಣಿಕೋಲ, ಮುಕುಂದ ಕಾಂಬಳೆ, ಸತೀಶ ಸಾವಳಸಂಗ, ದತ್ತು ಕೋಳಿ, ಪರಮೇಶ್ವರ ಕನ್ನೊಳ್ಳಿ, ಅರ್ಜುನ ಹೊಸಮನಿ, ಮಹಾದೇವ ಬನಸೋಡೆ, ಧನರಾಜ ಮುಜಗೊಂಡ ಇದ್ದರು.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.