ಹಳ್ಳ-ಬಾಂದಾರಗಳಿಗೆ ನೀರು ಹರಿಸಲು ಆಗ್ರಹಿಸಿ ರಸ್ತೆ ತಡೆ

ಖಾಲಿ ಕೊಡಗಳೊಂದಿಗೆ ಗ್ರಾಮಸ್ಥರ ಪ್ರತಿಭಟನೆ

Team Udayavani, May 7, 2019, 3:54 PM IST

7-mAY-26

ಇಂಡಿ: ಹಳ್ಳ ಹಾಗೂ ಬಾಂದಾರಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ತಾಲೂಕಿನ ನಾದ ಗ್ರಾಮದಲ್ಲಿ ಸಿಂದಗಿ-ಇಂಡಿ ರಾಜ್ಯ ಹೆದ್ದಾರಿ ತಡೆದು ಖಾಲಿ ಕೊಡಗಳೊಂದಿಗೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಇಂಡಿ: ಶಿರಶ್ಯಾಡ, ನಾದ, ಸಂಗೋಗಿ ಗೋಳಸಾರ ಸೇರಿದಂತೆ ವಿವಿಧ ಗ್ರಾಮಗಳ ಹಳ್ಳ ಹಾಗೂ ಬಾಂದಾರಗಳಿಗೆ ನೀರು ಹರಿಸಬೇಕೆಂದು ಆಗ್ರಹಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಇಂಡಿ-ಸಿಂದಗಿಗೆ ಹೋಗುವ ರಾಜ್ಯ ಹೆದ್ದಾರಿ ಮಾರ್ಗದಲ್ಲಿರುವ ನಾದ ಕೆಡಿ ಗ್ರಾಮದಲ್ಲಿ ರಸ್ತೆ ತಡೆದು ಖಾಲಿ ಕೊಡಗಳನ್ನಿಟ್ಟು ಪ್ರತಿಭಟನೆ ಮಾಡಿದರು.

ಕರವೇ ತಾಲೂಕಾಧ್ಯಕ್ಷ ಬಾಳು ಮುಳಜಿ ಮಾತನಾಡಿ, ಶಿರಶ್ಯಾಡ, ನಾದ, ಸಂಗೋಗಿ, ಗೋಳಸಾರ ಸೇರಿದಂತೆ ವಿವಿಧ ಗ್ರಾಮದಲ್ಲಿರುವ ಬಾಂದಾರ ಹಾಗೂ ಹಳ್ಳಗಳಿಗೆ ಕಾಲುವೆ ಮೂಲಕ ನೀರು ಹರಿಸಿ, ಗ್ರಾಮೀಣ ಪ್ರದೇಶದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ತಮ್ಮಲ್ಲಿ ಹಲವಾರು ಬಾರಿ ಮನವಿ ಮಾಡಿಕೊಂಡರು ಅಧಿಕಾರಿ ವರ್ಗ ಇಲ್ಲಿವರೆಗೂ ಯಾವುದೆ ಕ್ರಮ ಕೈಗೊಂಡಿಲ್ಲ.

ತಾಲೂಕಿನ ಮಿರಗಿ, ಹಂಚನಾಳ, ಅರ್ಜುಣಗಿ, ಗೋಳಸಾರ, ಶಿರಶ್ಯಾಡ, ಸಂಗೋಗಿ, ರೋಡಗಿ ಸೇರಿದಂತೆ ಈ ಭಾಗದಲ್ಲಿ ಭೀಕರ ಬರಗಾಲವಿದ್ದು, ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಅಧಿಕಾರಿಗಳು ರೈತರ ಜೀವನದ ಜೊತೆ ಆಟ ಆಡುತ್ತಿದ್ದಾರೆ, ಈ ಮೊಂಡು ಧೋರಣೆ ಸರಿಯಲ್ಲ ಇದು ಖಂಡನೀಯ ಎಂದರು.

ಶಿರಶ್ಯಾಡದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಮಾತನಾಡಿ, ಸದ್ಯ ಈ ಭಾಗದಲ್ಲಿ ಭೀಕರ ಬರಗಾಲದ ಛಾಯೆ ಆವರಿಸಿದ್ದು, ಸಾವಿರ ಅಡಿ ಕೊಳವೆ ಬಾವಿ ಕೊರೆದರೂ ಹನಿ ನೀರು ಬರುತ್ತಿಲ್ಲ. ಇದರಿಂದ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಹಳ್ಳ, ಬಾಂದಾರಗಳು ಬತ್ತಿ ಹೋಗಿವೆ. ಜಾನುವಾರು ಮೇಯಿಸಲು ಹೊಲ, ಗದ್ದೆಗಳಿಗೆ ಹೋದರೆ ಒಂದು ಹನಿ ನೀರು, ಮೇವು ಸಿಗುತ್ತಿಲ್ಲ.

ಹೀಗಾಗಿ ಜಾನುವಾರುಗಳು ಹೇಗೆ ಉಳಿಸಿಕೊಳ್ಳಬೇಕು ಎಂಬ ಚಿಂತೆಯಲ್ಲಿ ರೈತರು ಇದ್ದಾರೆ. ಈ ಭಾಗದ ಜೀವನಾಡಿಯಾದ ಹಳ್ಳ, ಬಾಂದಾರಗಳು ನೀರಿಲ್ಲದೆ ಬತ್ತಿ ಹೋಗಿವೆ. ಸ್ವಲ್ಪ ಪ್ರಮಾಣದಲ್ಲಿ ಆದರೂ ಬಾಂದಾರ, ಹಳ್ಳಕ್ಕೆ ಕಾಲುವೆ ನೀರು ಹರಿಸಿದರೆ ಅಂತರ್ಜಲ ಮಟ್ಟ ಜಾಸ್ತಿಯಾಗುತ್ತದೆ. ಆದ್ದರಿಂದ ಸಂಬಂಧ ಪಟ್ಟವರು ಕೂಡಲೆ ಬಾಂದಾರಗಳಿಗೆ ನೀರು ಹರಿಸಿ ಈ ಭಾಗದ ರೈತರ ಹಿತ ಕಾಪಾಡಬೇಕು ಎಂದರು.

ಈ ಸಂದರ್ಭದಲ್ಲಿ ರಾಂಪುರ ಕೆಬಿಜೆಎನ್‌ಎಲ್ ಅಧಿಕಾರಿ ಅನಂತರಾಮು ಮುಗಳೆ ಧರಣಿ ನಿರತ ಜನರ ಬಳಿ ಹೋಗಿ ನಾನೇ ಸ್ವತಃ ನಿಂತು ನಿಮ್ಮ ಸಮಸ್ಯೆ ಬಗೆಹರಿಸುತ್ತೇನೆ. ಇಂದು ರಾತ್ರಿಯೇ ಹಳ್ಳ ಹಾಗೂ ಬಾಂದಾರಗಳಿಗೆ ನೀರು ಹರಿಸುತ್ತೇನೆ ಎಂದು ವಿನಂತಿಸಿದಾಗ ಧರಣಿ ಅಂತ್ಯಗೊಂಡಿತು.

ಧರಣಿಯಲ್ಲಿ ಪೈಗಂಬರ್‌ ದೇಸಾಯಿ, ಮಹೇಶ ಹೂಗಾರ, ಸಿದ್ದು ತಳವಾರ, ಶ್ರೀಶೈಲ ಬಿರಾದಾರ, ಯಂಕನಗೌಡ ಪಾಟೀಲ, ದಾದು ಕೋಣಸಿರಸಗಿ, ಧರ್ಮರಾಜ ಕಲ್ಲೂರ, ರಾವೂಸಾಬ ಗೊದಳಿ, ಸಂತೋಶ ಮುಳಜಿ, ಶಿವಾನಂದ ಹತ್ತಿ, ರಾಜು ಪಾಟೀಲ, ಸಂಜು ಬೂದಿಹಾಳ, ಚಂದ್ರು ಪಾಸೋಡಿ, ದತ್ತು ಹಿರೇಮಠ, ಉಮೇಶ ಬಡಿಗೇರ, ಯಶವಂತ ತೆಲಗ, ಬಸವರಾಜ ಕೋಣಸಿರಸಗಿ, ಸಂತೋಷ ಬಬಲೇಶ್ವರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.