ಇಂಗಳಿಗಿ ಗ್ರಾಮದಲ್ಲಿ ಸಿಎಂ ವಾಸ್ತವ್ಯ ಮಾಡಿದರೆ ಬೆಳ್ಳಿ ರಥದಲ್ಲಿ ಮೆರವಣಿಗೆ
Team Udayavani, Jun 23, 2019, 1:29 PM IST
ಹೊಸಪೇಟೆ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ತಾಲೂಕಿನ ಇಂಗಳಿಗಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದರೆ ಬೆಳ್ಳಿ ರಥದಲ್ಲಿ ಮೆರವಣಿಗೆ ನಡೆಸಿ ಸ್ವಾಗತಿಸಲಾಗುವುದು ಎಂದು ಇಂಗಳಿಗಿ ಗ್ರಾಪಂ ಸದಸ್ಯ ಎ.ಕೆ.ಉದೇದಪ್ಪ ಸಾಮಾಜಿಕ ಜಾಲತಾಣದಲ್ಲಿ (ಫೇಸ್ಬುಕ್) ಪೋಸ್ಟ್ ಮಾಡುವ ಮೂಲಕ ಸುದ್ದಿಯಾಗಿದ್ದಾರೆ.
ತಾಲೂಕಿನ ಇಂಗಳಿಗೆ ಸ.ಹಿ.ಪ್ರಾ.ಶಾಲೆಯಲ್ಲಿ ವಾಸ್ತವ್ಯ ಹೂಡಲು ದಿನಾಂಕ ನಿಗದಿ ಮಾಡಬೇಕು. ಸಿಎಂ ಗ್ರಾಮ ವಾಸ್ತವ್ಯ ಮಾಡಿದರೆ ನೀರಾವರಿ ಸೇರಿದಂತೆ ಇತರೆ ಮೂಲ ಸೌಕರ್ಯಕ್ಕಾಗಿ ಸಾವಿರಾರು ಕೋಟಿ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ ಅವರಿಗೆ ಆಗ್ರಹಿಸಲಾಗುವುದು.
ಒಂದು ವೇಳೆ ಗ್ರಾಮ ವಾಸ್ತವ್ಯ ದಿನಾಂಕ ನಿಗದಿ ಮಾಡಿದರೆ ಬೆಳ್ಳಿ ರಥದಲ್ಲಿ ಮೆರವಣಿಗೆ ಮೂಲಕ ಸ್ವಾಗತಿಸಲಾಗುವುದು ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ಲೈಕ್ ಹಾಗೂ ಕಾಮೆಂಟ್ಗಳು ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ