ಯಡಿಯೂರಪ್ಪನವರ ಪಾಪದ ಕೆಲಸಗಳನ್ನು ಬೊಮ್ಮಾಯಿ ಮುಂದುವರಿಸಲೇಬೇಕಾಗಿದೆ : ಸಿದ್ದರಾಮಯ್ಯ


Team Udayavani, Aug 2, 2021, 3:00 PM IST

fgdf

ಕಲಘಟಗಿ: ಬಳ್ಳಾರಿ ಹಾಗೂ ಈ ಭಾಗಗಳಲ್ಲಿನ ಬಡವರ ಹಾಗೂ ಶೋಷಿತರ ಪರವಾಗಿ ಸರಕಾರ ಮಾಡಬೇಕಾದ ಕೆಲಸ- ಕಾರ್ಯಗಳನ್ನು ಸ್ವಂತ ಹಣದಿಂದ ಮಾಡುತ್ತ ಜನಪ್ರಿಯತೆ ಹೊಂದಿರುವ ಸಂತೋಷ ಲಾಡ್‌ ತನಗೆ ಆಪ್ತಮಿತ್ರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಉತ್ತರ ಕನ್ನಡ ಜಿಲ್ಲೆ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ರವಿವಾರ ಸಂಜೆ ತೆರಳುವ ಮಾರ್ಗಮಧ್ಯೆ ಸಂತೋಷ ಲಾಡ್‌ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದರು. ಲಾಡ್‌ ಹೇಗೆ ಚುನಾವಣೆಯಲ್ಲಿ ಸೋತ ಎಂಬುದು ಪ್ರಶ್ನಾರ್ಥಕವಾಗಿದೆ. ಲಾಡ್‌ನ‌ ಜಾತಿ ಬಡವರ ಜಾತಿ. ಸ್ವಂತ ಹಣದಿಂದ ಮತಕ್ಷೇತ್ರದ ಕಲಘಟಗಿ ಮತ್ತು ಅಳ್ನಾವರದಲ್ಲಿ ಕೊರೊನಾ ಸಂದರ್ಭದಲ್ಲಿ ಸಂಕಷ್ಟಕ್ಕೀಡಾದವರಿಗೆ ಮನೆ ಮನೆಗೆ ಉಚಿತವಾಗಿ ಅಕ್ಕಿ ನೀಡಿರುವುದಲ್ಲದೇ ಉಚಿತವಾಗಿ ಊಟ-ಉಪಾಹಾರ ನೀಡುವ ಕ್ಯಾಂಟೀನ್‌ ಆರಂಭಿಸಿದ್ದಾನೆ. ಉಚಿತ ಕೊಳವೆ ಬಾವಿ, ಉಚಿತ ಮದುವೆ ಮಾಡಿ ಜನಾನುರಾಗಿಯಾಗಿದ್ದಾನೆ ಎಂದರು.

ಮುಂದಿನ ಚುನಾವಣೆಯಲ್ಲಿ ಕ್ಷೇತ್ರದ ಟಿಕೆಟ್‌ ಲಾಡ್‌ ಅವರಿಗೆ ನೀಡಬೇಕು ಎಂಬ ಕಾರ್ಯಕರ್ತರ ಘೋಷಣೆಗೆ ಉತ್ತರಿಸಿದ ಅವರು, ನಾವು ಯಾವುದೇ ಕ್ಷೇತ್ರದಲ್ಲಿಯೂ ಮುಂದಿನ ಅಭ್ಯರ್ಥಿ ಹೆಸರನ್ನು ಘೋಷಿಸಬಾರದೆಂದು ನಿರ್ಧರಿಸಿದ್ದೇವೆ. ಆದರೆ ಲಾಡ್‌ ರಾಜ್ಯದ ಕಾಂಗ್ರೆಸ್‌ ನಾಯಕರಲ್ಲಿ ಒಬ್ಬರು ಎಂದು ಸ್ಪಷ್ಟವಾಗಿ ಹೇಳುತ್ತೇನೆ ಎಂದರು.

ಯಡಿಯೂರಪ್ಪನವರು ಕಾಂಗ್ರೆಸ್‌-ಜೆಡಿಎಸ್‌ ಶಾಸಕರನ್ನು ಖರೀದಿಸಿ ಹಿಂಬಾಗಿಲಿನಿಂದ ಮುಖ್ಯಮಂತ್ರಿ ಯಾಗಿದ್ದಾರೆ. ಆದರೆ ಪಾಪ ಅವರ ಪಕ್ಷದವರು ಬಲಾತ್ಕಾರದಿಂದ ಅವರನ್ನು ಮನೆಗೆ ಕಳಿಸಿದ್ದಾರೆ. ಬೊಮ್ಮಾಯಿಯವರು ಯಡಿಯೂರಪ್ಪನವರ ಕೃಪೆಯಿಂದಲೇ ಸಿಎಂ ಆಗಿದ್ದು, ಅದರ ಮರ್ಜಿಗಾಗಿ ಯಡಿಯೂರಪ್ಪನವರ ಪಾಪದ ಕೆಲಸಗಳನ್ನು ಮುಂದುವರಿಸಲೇಬೇಕಾಗಿದೆ ಎಂದರು.

ಸಿದ್ದರಾಮಯ್ಯನವರು ಲಾಡ್‌ ಅವರ ಮನೆಗೆ ಬರುತ್ತಾರೆ ಎನ್ನುವ ಹಿನ್ನೆಲೆಯಲ್ಲಿ ಕಲಘಟಗಿ ಮತ್ತು ಅಳ್ನಾವರ ಭಾಗದಿಂದ ಸಹಸ್ರಾರು ಜನರು ತಂಡೋಪತಂಡವಾಗಿ ಆಗಮಿಸಿದ್ದರು. ಸಿದ್ದರಾಮಯ್ಯನವರು ಬರುತ್ತಿದ್ದಂತೆಯೇ ಅವರಿಗೆ ಹೂಮಳೆಯಿಂದ ಭವ್ಯವಾದ ಸ್ವಾಗತ ನೀಡಲಾಯಿತು. ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿ, ದೇವಕಿ ಯೋಗಾನಂದ, ಅನಿಲಕುಮಾರ ಪಾಟೀಲ, ಅಲ್ತಾಫ ಕಿತ್ತೂರ, ರಾಜಶೇಖರ ಮೆಣಸಿನಕಾಯಿ, ಮಂಜುನಾಥಗೌಡ ಮುರಳ್ಳಿ, ಕುಮಾರ ಖಂಡೇಕರ ಮೊದಲಾದವರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.