ಸ್ವತಃ ರೈತರೇ ನಿರ್ಮಿಸಿದರು ನೀರಿನ ತೊಟ್ಟಿ

ವಿರುಪಾಪುರ ರೈತರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ

Team Udayavani, May 2, 2019, 10:33 AM IST

2-MAY-5

ಶಹಾಪುರ: ವಿರುಪಾಪುರ ಗ್ರಾಮದಲ್ಲಿ ರೈತರು ನಿರ್ಮಿಸಿದ ನೀರಿನ ತೊಟ್ಟಿ.

ಶಹಾಪುರ: ಗ್ರಾಮವೊಂದರಲ್ಲಿ ರೈತಾಪಿ ಜನರು ಸ್ವತಃ ತಾವೇ ದೇಣಿಗೆ ಸಂಗ್ರಹಿಸಿ ಗ್ರಾಮದ ಜಾನುವಾರುಗಳಿಗೆ ಕುಡಿಯಲು ಸಾರ್ವಜನಿಕ ನೀರಿನ ತೊಟ್ಟಿ ನಿರ್ಮಾಣ ಮಾಡಿಕೊಳ್ಳುವ ಮೂಲಕ ಮಾದರಿ ರೈತರೆನಿಸಿದ್ದಾರೆ.

ಹೌದು, ಇದು ತಾಲೂಕಿನ ವಿರುಪಾಪುರ ಗ್ರಾಮದಲ್ಲಿ ರೈತರು ಸ್ವಂತ ಹಣ ಸಂಗ್ರಹಿಸಿ ದೊಡ್ಡ ನೀರಿನ ತೊಟ್ಟಿ ನಿರ್ಮಿಸಿಕೊಂಡಿದ್ದಾರೆ. ಸಮೀಪದ ಕೊಳವೆ ಬಾವಿ ಮೂಲಕ ಅದಕ್ಕೆ ನಿತ್ಯ ನೀರು ತುಂಬುತ್ತಿದ್ದು, ಇಡಿ ಗ್ರಾಮದ ಜಾನುವಾರುಗಳು ಈ ತೊಟ್ಟಿಯಲ್ಲಿ ನೀರು ಕುಡಿಯುತ್ತಿವೆ.

ಬಿಸಿಲಿನ ತಾಪಕ್ಕೆ ಗ್ರಾಮದ ಹಲವಾರು ಕೊಳವೆ ಬಾವಿ ಸೇರಿದಂತೆ ತೆರೆದ ಬಾವಿ ಹಳ್ಳ ಕೊಳ್ಳ ಬತ್ತಿರುವುದರಿಂದ ಗ್ರಾಮದಲ್ಲಿ ನೀರಿನ ಸಮಸ್ಯೆ ತಲೆ ದೋರಿದೆ. ಹೀಗಾಗಿ ಜನ ತಾವೇ ಖುದ್ದಾಗಿ ಈ ರೀತಿ ನೀರಿನ ತೊಟ್ಟಿ ನಿರ್ಮಿಸಿಕೊಂಡಿದ್ದಾರೆ. ಅಂದಾಜು 25 ಸಾವಿರ ರೂ. ನೀರಿನ ತೊಟ್ಟಿ ನಿರ್ಮಾಣಕ್ಕೆ ವೆಚ್ಚ ತಗುಲಿದೆ ಎನ್ನುತ್ತಾರೆ ಗ್ರಾಮದ ಹಿರಿಯ ರೈತ ಬೈಲಪ್ಪ.

ತಾಲೂಕಿನ ಸಗರ ಗ್ರಾಪಂ ವ್ಯಾಪ್ತಿ ಬರುವ ಈ ವಿರುಪಾಪುರ ಕುಗ್ರಾಮವಾಗಿದ್ದು, ಅಂದಾಜು 500 ಜನ ಸಂಖ್ಯೆ ಹೊಂದಿದೆ. ಗ್ರಾಮದಲ್ಲಿ ಹೆಚ್ಚಾಗಿ ಗೊಲ್ಲ ಸಮುದಾಯದ ಜನರೇ ವಾಸ ಇದ್ದು, ಅವರ ಮುಖ್ಯ ಕಸಬು ಕೃಷಿ ಮತ್ತು ಕುರಿ ಸಾಕಾಣಿಕೆಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಕುರಿ, ಎತ್ತು, ಆಕಳು ಸೇರಿದಂತೆ ಎಮ್ಮೆಗಳನ್ನು ಇಲ್ಲಿನ ಜನರು ಸಾಕಿದ್ದಾರೆ.

ಜಾನುವಾರುಗಳಿಗೆ ನೀರು ಕುಡಿಸಲು ಕಷ್ಟಕರವಾಗಿತ್ತು. ಪ್ರಸ್ತುತ ತೊಟ್ಟಿ ನಿರ್ಮಾಣದಿಂದ ಅನುಕೂಲವಾಗಿದೆ ಎಂದು ಸಂತಸ ವ್ಯಕ್ತಪಡಿಸುತ್ತಾರೆ ಗ್ರಾಮಸ್ಥರು.

ಕಳೆದ ತಿಂಗಳ ಹಿಂದೆ ಶಹಾಪುರ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಅವರು, ಬೇಸಿಗೆ ಬರಗಾಲದಿಂದ ನೀರಿನ ಅಭಾವ ಜಾಸ್ತಿ ಕಂಡು ಬಂದಿಲ್ಲ. ಜಾನುವಾರುಗಳಿಗಾಗಿ ಆಯಾ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ನೀರಿನ ತೊಟ್ಟಿ ನಿರ್ಮಿಸಿ ನೀರು ತುಂಬಿಸುವ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದ್ದರು. ಆದರೆ ಬಹುತೇಕ ಯಾವ ಗ್ರಾಮದಲ್ಲೂ ಈ ಕಾರ್ಯ ನಡೆಯಲಿಲ್ಲ. ಸಂಬಂಧಿಸಿದ ಅಧಿಕಾರಿಗಳನ್ನು ಕೇಳಿದರೆ, ಯಾವ ಗ್ರಾಮದಿಂದ ಬೇಡಿಕೆ ಬಂದಿಲ್ಲ. ಎಲ್ಲಿ ಹೆಚ್ಚು ಜಾನುವಾರುಗಳನ್ನು ಹೊಂದಿದ್ದಾರೆ. ಅಂತಹ ಗ್ರಾಮದಿಂದ ಬೇಡಿಕೆ ಬಂದಲ್ಲಿ ನೀರಿನ ತೊಟ್ಟಿ ನಿರ್ಮಿಸಲಾಗುತ್ತದೆ ಎಂಬ ಹಾರಿಕೆ ಉತ್ತರಗಳನ್ನು ಕೊಡುತ್ತಿದ್ದಾರೆ ಎಂದು ರೈತ ಮುಖಂಡ ಯಲ್ಲಯ್ಯ ನಾಯಕ ಬೇಸರ ವ್ಯಕ್ತಪಡಿಸಿದ್ದಾರೆ.

ಯಾವುದೇ ಗ್ರಾಮದಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ರೈತರು ಸರ್ಕಾರದ ನೆರವು ನಿರೀಕ್ಷಿಸದೆ ಶ್ರಮದಾನದ ಮೂಲಕ ನೀರಿನ ತೊಟ್ಟಿ ನಿರ್ಮಿಸಿಕೊಳ್ಳಬೇಕು ಎಂದು ಗ್ರಾಮದ ಸಾಯಬಣ್ಣ ಸಲಹೆ ನೀಡಿದ್ದಾರೆ.

ಮಲ್ಲಿಕಾರ್ಜುನ ಮುದ್ನೂರ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.