ಗದುಗಿನಲ್ಲಿ ಸೊರಗುತ್ತಿದೆ ‘ಸಹಕಾರಿ’

ಜಿಲ್ಲೆಯಲ್ಲಿ ನೋಂದಣಿಯಾಗಿವೆ 968 ಸಂಘಗಳು ಸದ್ಯ ಕಾರ್ಯ ನಿರ್ವಹಿಸುತ್ತಿವೆ 853 ಸಹಕಾರಿ ಸಂಘಗಳು

Team Udayavani, Nov 14, 2019, 7:25 PM IST

14-November-22

„ವೀರೇಂದ್ರ ನಾಗಲದಿನ್ನಿ
ಗದಗ:
ಸಹಕಾರಿ ರಂಗದ ತೊಟ್ಟಿಲು ತೂಗಿದ ಗದಗ ಜಿಲ್ಲೆಯಲ್ಲೇ ನಾನಾ ಕಾರಣಗಳಿಂದ ಸಹಕಾರ ಕ್ಷೇತ್ರ ಸೊರಗುತ್ತಿದೆ. ಜಿಲ್ಲೆಯಲ್ಲಿ 968 ವಿವಿಧ ಸಹಕಾರ ಸಂಘಗಳು ನೋಂದಣಿಯಾಗಿವೆ. ಈ ಪೈಕಿ ಸದ್ಯ 853 ಕಾರ್ಯ ನಿರ್ವಹಿಸುತ್ತಿದ್ದು, 41 ಸ್ಥಗಿತಗೊಂಡಿವೆ. 74 ಸಹಕಾರಿ ಸಂಘಗಳು ಆರ್ಥಿಕವಾಗಿ ಚೇತರಿಸಿಕೊಳ್ಳಲಾಗದೇ ಸಮಾಪನೆಗೊಂಡಿವೆ.ಆ ಪೈಕಿ ಹಲವು ಸಂಘಗಳು ಆರ್ಥಿಕ ಏಳು-ಬೀಳುಗಳನ್ನು ಎದುರಿಸಿ ಸಬಲಗೊಂಡಿದ್ದರೆ ಹಲವು ಸಂಸ್ಥೆಗಳು ನೇಪತ್ಯಕ್ಕೆ ಸರಿದಿವೆ.

ಸಹಕಾರಿ ರಂಗದಲ್ಲಿ ಗದಗ ಜಿಲ್ಲೆಗೆ ವಿಶೇಷ ಸ್ಥಾನವಿದೆ. ಭಾರತ ಸ್ವಾತಂತ್ರ್ಯಗೊಳ್ಳುವ ಮುನ್ನವೇ ಜಿಲ್ಲೆಯಲ್ಲಿ ಸಹಕಾರಿ ರಂಗದ ತೊಟ್ಟಿಲು ತೂಗಿದ್ದಲ್ಲದೇ ಈ ಭಾಗದಲ್ಲಿ ಉಚ್ಛಾಯ ಸ್ಥಿತಿ ಕಂಡಿತ್ತೆಂಬುದೀಗ ಇತಿಹಾಸ.

ನಷ್ಟದಲ್ಲೇ ದಿನ ದೂಡುತ್ತಿವೆ: ಸದ್ಯ ಕಾರ್ಯ ನಿರ್ವಹಿಸುತ್ತಿರುವ 853 ಸಹಕಾರಿ ಸಂಘಗಳಲ್ಲಿ ಅರ್ಧಕ್ಕಿಂತ ಹೆಚ್ಚು ಸಂಘಗಳು ನಷ್ಟದಲ್ಲಿವೆ. 396 ಲಾಭದಲ್ಲಿದ್ದರೆ, 66 ಸಹಕಾರಿ ಸಂಘಗಳು ಲಾಭ-ನಷ್ಟವಿಲ್ಲದೇ ಯಥಾಸ್ಥಿತಿಯಲ್ಲಿ ಸಾಗುತ್ತಿವೆ. ಇನ್ನುಳಿದಂತೆ 506 ಸಹಕಾರಿ ಸಂಘಗಳು ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ್ದು, ನಷ್ಟದಲ್ಲೇ ದಿನ ದೂಡುತ್ತಿರುವುದು ಆತಂಕಕಾರಿ ಸಂಗತಿ. ಜಿಲ್ಲೆಯಲ್ಲಿ 50 ಸೌಹಾರ್ದ ಸಹಕಾರಿ ಬ್ಯಾಂಕ್‌ಗಳು ಕಾರ್ಯ ನಿರ್ವಹಿಸುತ್ತಿದ್ದು, ಆ ಪೈಕಿ “ಎ’, “ಬಿ’ ವರ್ಗದಲ್ಲಿ ಗುರುತಿಸಿರುವ 8 ಬ್ಯಾಂಕ್‌ಗಳು ಲಾಭದಾಯಕವಾಗಿವೆ. 13 “ಸಿ’ ವರ್ಗದಲ್ಲಿ ಗುರುತಿಸಿಕೊಂಡಿದ್ದರೂ ಲಾಭದ ಹಾದಿಯಲ್ಲಿ ಮುನ್ನಡೆಯುತ್ತಿವೆ. ಇನ್ನುಳಿದಂತೆ ಎರಡು ಬ್ಯಾಂಕ್‌ಗಳು “ಡಿ’ ಕ್ಯಾಟಗರಿಯಲ್ಲಿ ಗುರುತಿಸಿಕೊಂಡಿವೆ.

ಆರ್ಥಿಕವಾಗಿ ನಷ್ಟದಲ್ಲಿದ್ದು, ಸಮಾಪನೆಗೆ(ಸ್ಥಗಿತ) ಹತ್ತಿರವಾಗಿವೆ ಎಂದು ಸಹಕಾರ ಇಲಾಖೆ ಮೂಲಗಳು ತಿಳಿಸಿವೆ. ಕೆಸಿಸಿ ಬ್ಯಾಂಕ್‌ ಧಾರವಾಡ ಅಧಿಧೀನದಲ್ಲಿರುವ ಜಿಲ್ಲೆಯ 164 ಕೃಷಿ ಪತ್ತಿನ ಸಹಕಾರಿ ಸಂಘಗಳದ್ದೂ ಇದೇ ಪರಿಸ್ಥಿತಿ ಇದೆ. ಕೆಲವು ಲಾಭದಲ್ಲಿ ಸಾಗಿದರೆ, ಹಲವು ಸಂಕಷ್ಟದಲ್ಲೇ ಸಾಗುತ್ತಿವೆ ಎನ್ನಲಾಗಿದೆ. ಬರ-ನೆರೆ ಬರೆ: ಕಳೆದ ನಾಲ್ಕೈದು ವರ್ಷಗಳಿಂದ ಮಳೆ ಕೊರತೆಯಿಂದ ಬರ ಆವರಿಸಿ ರೈತರು ಅಕ್ಷರಶಃ ಕಂಗಾಲಾಗಿದ್ದರು. ಈ ನಡುವೆ ಇತ್ತೀಚೆಗೆ ಬೆಣ್ಣೆಹಳ್ಳ, ಮಲಪ್ರಭೆ, ತುಂಗಭದ್ರಾ ನದಿಗಳು ಉಕ್ಕಿ ಹರಿದಿದ್ದರಿಂದ 23 ಗ್ರಾಮಗಳಲ್ಲಿ ಸಾಕಷ್ಟು ಹಾನಿಯಾಗಿದ್ದು, ಪರೋಕ್ಷವಾಗಿ ಸಹಕಾರ ಸಂಘಗಳ ಮೇಲೂ ಇದು ಪರಿಣಾಮ ಬೀರಿದೆ.

ಅದರೊಂದಿಗೆ ಕೆಲ ನೌಕರರು, ಆರ್ಥಿಕ ಸ್ಥಿತಿವಂತರು ಕೃಷಿ ಯಂತ್ರೋಪಕರಣಗಳ ಖರೀದಿ, ಟ್ರ್ಯಾಕ್ಟರ್‌ ಖರೀದಿಗೆ ಪಡೆದ ಸಾಲವನ್ನು ಬ್ಯಾಂಕ್‌ಗಳಿಗೆ ವರ್ಷಗಳಿಂದ ಮರು ಪಾವತಿಸದಿರುವುದು ಸಹಕಾರಿ ಬ್ಯಾಂಕ್‌ಗಳನ್ನು ಆರ್ಥಿಕ ಮುಗ್ಗಟ್ಟಿಗೆ ಸಿಲುಕಿಸಿವೆ. ಇನ್ನು ಕೃಷಿ ಸಾಲ ಪಡೆದು, ಮದುವೆ, ಮನೆ ನಿರ್ಮಾಣ, ಅನ್ಯ ಕಾರ್ಯಗಳಿಗೆ ಬಳಸಿಕೊಂಡವರಿಂದ ಸಾಲ ವಸೂಲಾತಿ ಸಂಘಗಳಿಗೆ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದೆ. ಅದರೊಂದಿಗೆ ಸಂಘ- ಸಂಸ್ಥೆಗಳಲ್ಲಿನ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಸರಕಾರಗಳು ಮಾಡುವ ರೈತರ ಸಾಲ ಮನ್ನಾವೂ ಸಹಕಾರ ಸಂಘಗಳ ಆರ್ಥಿಕ ಅಧೋಗತಿಗೆ ಕಾರಣವಾಗುತ್ತಿದೆ. ಇದೇ ಕಾರಣಕ್ಕೆ ಹಲವು ಸಂಘ-ಸಂಸ್ಥೆಗಳು ಬಾಗಿಲು ಮುಚ್ಚುವ ಸ್ಥಿತಿಗೆ ಬಂದು ನಿಂತಿವೆ ಎನ್ನುತ್ತಾರೆ ಸಹಕಾರಿ ರಂಗದ ಪ್ರಮುಖರು.

ಅದನ್ನೊರತಾಗಿ ಕೆಲ ಸಹಕಾರಿ ಸಂಘ-ಸಂಸ್ಥೆಗಳು ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದು, ಡಿಜಿಟಲ್‌ ಪೇಮೆಂಟ್ಸ್‌ಗೆ ಅವಕಾಶ ನೀಡಿದೆ. ರಾಷ್ಟ್ರೀಯ ಬ್ಯಾಂಕ್‌ಗಳನ್ನೂ ಮೀರಿಸುವಂತೆ ಅತ್ಯಾಧುನಿಕ ಗಣಕ ಯಂತ್ರಗಳು, ಕಚೇರಿಯ ಒಳವಿನ್ಯಾಸದೊಂದಿಗೆ ಗ್ರಾಹಕರನ್ನು ಸೆಳೆಯುತ್ತಿವೆ. ಜತೆಗೆ ಉತ್ತಮ ಸೇವೆ ನೀಡುವ ಮೂಲಕ ಸಹಕಾರಿ ಸಂಘಗಳು ಮುನ್ನಡೆಯುತ್ತಿರುವುದು ಆಶಾಭಾವ ಮೂಡಿಸಿದೆ.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KARADI (2)

Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

KARADI (2)

Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.