ಜಿಲ್ಲೆಯಲ್ಲಿ 10 ಜನರಿಗೆ ಸೋಂಕು ದೃಢ ; 8759 ಜನರು ನಿಗಾದಲ್ಲಿ


Team Udayavani, Jun 26, 2020, 1:14 PM IST

ಜಿಲ್ಲೆಯಲ್ಲಿ 10 ಜನರಿಗೆ ಸೋಂಕು ದೃಢ ; 8759 ಜನರು ನಿಗಾದಲ್ಲಿ

ಗದಗ: ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ 10 ಜನರಲ್ಲಿ ಕೋವಿಡ್‌-19 ಸೋಂಕು ದೃಢಪಟ್ಟಿದೆ. ಪರಿಣಾಮ ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಶತಕ ದಾಟಿದೆ. ಕಳೆದ ನಾಲ್ಕೈದು ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಗುರುವಾರದ 10 ಸೇರಿದಂತೆ ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 104 ಜನರಲ್ಲಿ ಸೋಂಕು ದೃಢಪಟ್ಟಿದೆ. ಅವುಗಳಲ್ಲಿ ಇಬ್ಬರು ಮೃತಪಟ್ಟಿದ್ದು 47 ಜನ ಗುಣಮುಖರಾಗಿದ್ದಾರೆ. 55 ಪ್ರಕರಣಗಳು ಸಕ್ರಿಯವಾಗಿವೆ. ಈ ಪೈಕಿ ರೋಣ ತಾಲೂಕಿನ ಇಟಗಿ ಗ್ರಾಮದ 38 ವರ್ಷದ ಸೋಂಕಿತ ವ್ಯಕ್ತಿ(ಪಿ.9407) ಸೂಪರ್‌ ಸ್ಪ್ರೆಡರ್‌ ಎನಿಸಿಕೊಂಡಿದ್ದಾನೆ. ಈತನಿಂದ ಗುರುವಾರ ಜಿಲ್ಲೆಯಲ್ಲಿ 8 ಜನರಿಗೆ ಕೋವಿಡ್ ಸೋಂಕು ಹರಡಿರುವುದು ಖಚಿತವಾಗಿದೆ. ಪಿ. 9407 ವ್ಯಕ್ತಿಯೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಿಂದಾಗಿ ಇಟಗಿ ಗ್ರಾಮದ 3 ವರ್ಷದ ಹೆಣ್ಣು ಮಗು(ಪಿ.10154) ಹಾಗೂ 37 ವರ್ಷದ ವ್ಯಕ್ತಿ(ಪಿ.10155)ಗೆ ಸೋಂಕು ದೃಢವಾಗಿದೆ. ಜೊತೆಗೆ ಮುಂಡರಗಿ ಪಟ್ಟಣದ ವಿದ್ಯಾನಗರ ನಿವಾಸಿ 58 ವರ್ಷದ ಪುರುಷ (ಪಿ.10147), ಹುಡ್ಕೊ ಕಾಲೋನಿಯ 66 ವರ್ಷದ ವ್ಯಕ್ತಿ(ಪಿ.10149), 34 ವರ್ಷದ ವ್ಯಕ್ತಿ (ಪಿ.10150) ಹಾಗೂ 44 ವರ್ಷದ ವ್ಯಕ್ತಿ(ಪಿ.10151), ಗದಗಿನ ಸಿದ್ದರಾಮೇಶ್ವರ ನಗರದ 30 ವರ್ಷದ ಪುರುಷ (ಪಿ.10148) ಹಾಗೂ ಲಕ್ಷ ¾ಣಸಾ ನಗರದ 31 ವರ್ಷದ ಪುರುಷ ಪಿ-10152 ಸೋಂಕು ದೃಢವಾಗಿದೆ.

ಇನ್ನುಳಿದಂತೆ ವಿಜಯಪುರ ಜಿಲ್ಲಾ ಪ್ರವಾಸದಿಂದಾಗಿ 16 ವರ್ಷದ ಬಾಲಕ(ಪಿ.10146) ಹಾಗೂ ಮಹಾರಾಷ್ಟ್ರ ರಾಜ್ಯದಿಂದ ಆಗಮಿಸಿದ 9 ವರ್ಷದ ಬಾಲಕಿ (ಪಿ-10153)ಗೆ ಸೋಂಕು ಇರುವುದು ದೃಢವಾಗಿದೆ. ಸೋಂಕಿತರನ್ನು ಚಿಕಿತ್ಸೆಗಾಗಿ ನಿಗದಿತ ಕೋವಿಡ್‌-19 ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕಿತರೊಂದಿಗೆ ಪ್ರಥಮ ಮತ್ತು ದ್ವಿತೀಯ ಸಂಪರ್ಕದಲ್ಲಿರುವವರನ್ನು ಗುರುತಿಸಿ ಕ್ವಾರಂಟೈನ್‌ ಮಾಡಲಾಗುತ್ತಿದೆ. ಸೋಂಕಿನ ಶಂಕೆ ಕಂಡು ಬಂದವರ ಗಂಟಲು ದ್ರವ ಸಂಗ್ರಹಿಸಿ,  ಪರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾಹಿತಿ ನೀಡಿದರು.

ಸಹೋದ್ಯೋಗಿಗಳಲ್ಲಿ ಢವಢವ: ಸೋಂಕಿತ ವ್ಯಕ್ತಿ(ಪಿ.9407)ಯು ನೀರಾವರಿ ಇಲಾಖೆ ನೌಕರನಾಗಿದ್ದು, ಮುಂಡರಗಿ ತಾಲೂಕಿನ ಸಿಂಗಟಾಲೂರು ಏತ ನೀರಾವರಿ ಯೋಜನೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಆತನ ಸಂಪರ್ಕದಿಂದ 7 ಜನ ಸಹ ಸಿಬ್ಬಂದಿಗೆ ಗುರುವಾರ ಕೊರೊನಾ ಸೋಂಕು
ದೃಢಪಟ್ಟಿದೆ. ಇನ್ನುಳಿದಂತೆ 3 ವರ್ಷದ ಮಗು ಸೋಂಕಿತನ ಪುತ್ರಿ. ಹೀಗಾಗಿ ಸಂಬಂ ಧಿಕರು ಹಾಗೂ ಸಹ ಸಿಬ್ಬಂದಿಗಳಲ್ಲಿ ಕೊರೊನಾ ಆತಂಕ ಹೆಚ್ಚಿದೆ.

413 ಜನರ ವರದಿ ಬಾಕಿ: ಕೊರೊನಾ ಸೋಂಕಿನ ಪರೀಕ್ಷೆಗಾಗಿ 9330 ಜನರ ಗಂಟಲಿನ ಮಾದರಿ ಸಂಗ್ರಹಿಸಿದ್ದು, 104 (ಇಂದಿನ 10 ಸೇರಿ) ಪ್ರಕರಣಗಳು ದೃಢ ಪಟ್ಟಿವೆ. 8813 ವರದಿಗಳು ನಕಾರಾತ್ಮಕವಾಗಿವೆ. 55 ಪ್ರಕರಣಗಳು ಸಕ್ರಿಯವಾಗಿದ್ದು, 413 ಜನರ ವರದಿ ಬರಬೇಕಿದೆ. ಈವರೆಗೆ 8759 ಜನರು ನಿಗಾದಲ್ಲಿದ್ದು, 80 ಜನರು ವೈದ್ಯಕೀಯ ಸೌಲಭ್ಯಗಳೊಂದಿಗೆ ಆಸ್ಪತ್ರೆಯಲ್ಲಿ ನಿಗಾದಲ್ಲಿರಿಸಲಾಗಿದೆ. ಜೊತೆಗೆ ಜೂ. 25ರ  ವರೆಗೆ ಮಹಾರಾಷ್ಟ್ರದಿಂದ ಗದಗ ರೈಲು ನಿಲ್ದಾಣಕ್ಕೆ 1048 ಪ್ರಯಾಣಿಕರು ಆಗಮಿಸಿದ್ದಾರೆ. 385 ಜನ ಗದಗ ಜಿಲ್ಲೆಗೆ ಸಂಬಂಧಿಸಿದ್ದಾರೆ. ಅವರರಲ್ಲಿ 334  ಜನರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಹಾಗೂ 51 ಜನರನ್ನು ಗೃಹ ದಿಗ್ಬಂಧನದಲ್ಲಿ ಇರಿಸಲಾಗಿದೆ. 334 ಜನರ ಪೈಕಿ 15 ಜನರಲ್ಲಿ ಕೋವಿಡ್‌-19 ಸೋಂಕು ದೃಢಪಟ್ಟಿರುತ್ತದೆ. 663 ಜನರು ಬೇರೆ
ಜಿಲ್ಲೆಯವರಾಗಿದ್ದು, ಸಂಬಂಧಪಟ್ಟ ಜಿಲ್ಲೆಗಳಿಗೆ ಕಳುಹಿಸಲಾಗಿದೆ.

ವೈಯಕ್ತಿಕ ಸುರಕ್ಷತೆಗೂ ಒತ್ತು ನೀಡಿ: ಎಸ್‌ಪಿ
ಗದಗ: ಕೋವಿಡ್‌-19 ನಿಯಂತ್ರಣಕ್ಕಾಗಿ ಲಾಕ್‌ಡೌನ್‌ ಜಾರಿಗೊಳಿಸುವಲ್ಲಿ ಜಿಲ್ಲೆಯ ಪೊಲೀಸ್‌ ಪಡೆ ಶ್ರಮಿಸಿರುವುದು ಶ್ಲಾಘನೀಯ. ತಮ್ಮ ಕರ್ತವ್ಯದೊಂದಿಗೆ ವೈಯಕ್ತಿಕ ಸುರಕ್ಷತೆಗೆ ಒತ್ತು ನೀಡಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಯತೀಶ್‌ ಎನ್‌. ಸಲಹೆ ನೀಡಿದ್ದಾರೆ. ಲಾಕ್‌ಡೌನ್‌ ಜಾರಿ ಸಂದರ್ಭದಲ್ಲಿ ಜಿಲ್ಲಾ ಗಡಿಯ ಚೆಕ್‌ ಪೋಸ್ಟ್‌ಗಳಲ್ಲಿ ವೈಯಕ್ತಿಕ ಶುಚಿತ್ವ, ಸುರಕ್ಷತೆ ಜೊತೆಗೆ ಸಾರ್ವಜನಿಕರನ್ನು ಕೋವಿಡ್‌-19 ಸೋಂಕಿನಿಂದ ರಕ್ಷಿಸುವಲ್ಲಿ ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಯೋಧರಂತೆ ಕಾರ್ಯನಿರ್ವಹಿಸಿದ್ದಾರೆ. ಕೋವಿಡ್‌-19 ಸೋಂಕು ನಿಯಂತ್ರಣದ ಮುಂದುವರಿದ ಕಾರ್ಯಾಚರಣೆಯಲ್ಲಿ ಈಗ ಲಾಕ್‌ಡೌನ್‌ ತೆರವಿನ ಸ್ಥಿತಿಯಲ್ಲಿ ಹೆಚ್ಚಿನ ಜವಾಬ್ದಾರಿ ಮತ್ತು ವೈಯಕ್ತಿಕ ಸುರಕ್ಷತೆಯಿಂದ ಪೊಲೀಸ್‌ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರ್ವಹಿಸಬೇಕಿದೆ. ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ ಕೊವಿಡ್‌-19 ಸೋಂಕು ತಡೆಗೆ ಇಲಾಖೆಯಿಂದ ಪೂರೈಸಲಾದ ಸುರಕ್ಷತಾ ಸಾಮಗ್ರಿಗಳಾದ ಮುಖಕ್ಕೆ ಮಾಸ್ಕ್, ಹ್ಯಾಂಡ್‌ ಗ್ಲೌಸ್‌, ಹೆಡ್‌ಶೀಲ್ಡ್‌, ಸ್ಯಾನಿಟೈಸರ್‌ ಕಡ್ಡಾಯವಾಗಿ ಬಳಸಬೇಕು. ಜೊತೆಗೆ ತಮ್ಮ ಕುಟುಂಬಗಳ ಸುರಕ್ಷತೆ ಕುರಿತು ಎಚ್ಚರವಹಿಸಬೇಕು ಎಂದು ಸಲಹೆ ನೀಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.