11,000 ಹೆಕ್ಟೇರ್‌ ಪ್ರದೇಶದ ಬೆಳೆ ಸ್ವಾಹಾ


Team Udayavani, Aug 26, 2019, 10:52 AM IST

gadaga-tdy-2

ಗದಗ: ಬೆಣ್ಣೆಹಳ್ಳ ಹಾಗೂ ಮಲಪ್ರಭಾ ನದಿಯಿಂದ ಉಂಟಾದ ಪ್ರವಾಹದಿಂದ ಜನರು ಬದುಕು ಕೊಚ್ಚಿಕೊಂಡು ಹೋಗಿದೆ. ಜೊತೆಗೆ ಅವರು ತಿನ್ನುವ ಅನ್ನವನ್ನೂ ಕಸಿದುಕೊಂಡಿದೆ. ಪ್ರವಾಹದ ಅಲೆಗಳ ಅಬ್ಬರಕ್ಕೆ 11 ಸಾವಿರ ಹೆಕ್ಟೇರ್‌ ಪ್ರದೇಶದಷ್ಟು ಬೆಳೆಗಳು ತೇಲಿ ಹೋಗಿವೆ. ಬೆಳೆಯೊಂದಿಗೆ ಅಲ್ಲಲ್ಲಿ ಜಮೀನುಗಳ ಮಣ್ಣು ಕೊರೆತಗೊಂಡಿದೆ. ಹೀಗಾಗಿ ಕೊರೆತಕ್ಕೊಳಗಾದ ಜಮೀನುಗಳನ್ನು ಸರಿಪಡಿಸಿಕೊಳ್ಳುವುದೇ ರೈತರ ಮುಂದಿರುವ ಸವಾಲು.

ಹೌದು, ಈ ಬಾರಿ ಜಿಲ್ಲೆಯಲ್ಲಿ ಮಲಪ್ರಭೆ ಮತ್ತು ಬೆಣ್ಣೆಹಳ್ಳ ಸೃಷ್ಟಿಸಿದ ಅನಾಹುತ ಅಷ್ಟಿಷ್ಟಲ್ಲ. ನರಗುಂದ ತಾಲೂಕಿನ 8 ಹಾಗೂ ರೋಣ ತಾಲೂಕಿನ 16 ಗ್ರಾಮಗಳ ಜನರ ಜೀವನವನ್ನೇ ಹಿಂಡಿದೆ. ಈ ಬಾರಿ ಮುಂಗಾರು ಮಳೆ ವಿಳಂಬವಾಗಿ ಚುರುಕುಗೊಂಡಿದ್ದರೂ, ಅಲ್ಪಸ್ವಲ್ಪ ಬೆಳೆ ಕೈಹಿಡಿಯುವ ನಿರೀಕ್ಷೆ ಇತ್ತು. ಆದರೆ, ನರಗುಂದ ಮತ್ತು ರೋಣ ತಾಲೂಕಿನಲ್ಲಿ ಹರಿಯುವ ಉಭಯ ಜಲಮೂಲಗಳು ಸೃಷ್ಟಿಸಿದ ನೆರೆ, ಜನರ ಹೊಟ್ಟೆ ತುಂಬಿಸುವ ಜಮೀನುಗಳನ್ನೂ ಹಾಳು ಮಾಡಿದೆ.

ಕೊಚ್ಚಿ ಹೋಯ್ತು ಅಕ್ಷಯ ಪಾತ್ರೆ: ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಪ್ರವೇಶ ಪಡೆಯುವ ಮಲಪ್ರಭಾ ನದಿ, ರೋಣ ತಾಲೂಕಿನ ಮೆಣಸಗಿ, ಹೊಳೆಆಲೂರು ಮಾರ್ಗವಾಗಿ ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿಗೆ ಸೇರ್ಪಡೆಯಾಗುತ್ತದೆ. ಈ ನಡುವೆ ಜಿಲ್ಲೆಯಲ್ಲಿ ಸುಮಾರು 50 ಕಿಮೀ ದೂರದಷ್ಟು ನದಿ ಕ್ರಮಿಸುತ್ತ ದೆ.

ಅದರಂತೆ ಧಾರವಾಡ ಜಿಲ್ಲೆಯಿಂದ ರೋಣ ತಾಲೂಕಿನ ಯಾವಗಲ್ ಬಳಿ ಜಿಲ್ಲೆಗೆ ಆಗಮಿಸುವ ಬೆಣ್ಣೆಹಳ್ಳ, ಯಾ.ಸ.ಹಡಗಲಿ, ಬೋಪಲಾಪುರ, ಮಾಳವಾಡ, ಮೆಣಸಗಿ, ಅಸೂಟಿ ಕರಮುಡಿ ಮಾರ್ಗವಾಗಿ ಹೊಳೆಆಲೂರು ಬಳಿ ಮಲಪ್ರಭೆಯಲ್ಲಿ ಸಂಗಮವಾಗುತ್ತದೆ. ಈ ನಡುವೆ ಸುಮಾರು 15 ರಿಂದ 20 ಕಿಮೀ ಜಿಲ್ಲೆಯಲ್ಲಿ ಹರಿಯುತ್ತದೆ. ಮಲಪ್ರಭೆ ಹಾಗೂ ಬೆಣ್ಣೆಹಳ್ಳ ಭೋರ್ಗರೆತದಿಂದ ಎರಡೂ ಬದಿಯಲ್ಲಿ ಬೆಳೆದಿದ್ದ ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ. ಅದರೊಂದಿಗೆ ಹಳ್ಳ, ನದಿಯುದ್ದಕ್ಕೂ ಕಿನಾರೆಯಲ್ಲಿರುವ ಜಮೀನುಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ.

ಸರಕಾರ ಅಲ್ಪಸ್ವಲ್ಪ ಬೆಳೆ ಪರಿಹಾರ ನೀಡುತ್ತದೆ. ಜಮೀನುಗಳು ಸುಸ್ಥಿತಿಯಲ್ಲಿದ್ದರೆ, ಮುಂದಿನ ಹಂಗಾಮಿನಲ್ಲಿ ಬೆಳೆ ತೆಗೆಯಬಹುದು. ಆದರೆ, ಹಳ್ಳದುದ್ದಕ್ಕೂ ಹಲವೆಡೆ ನಾಲ್ಕೈದು ಅಡಿಗಳಷ್ಟು ಜಮೀನುಗಳು ಕೊರೆದಿದೆ. ಅದನ್ನು ತುಂಬಿಕೊಳ್ಳುವುದು ಎಂಬುದು ಬಡ ರೈತರ ಪಾಲಿಗೆ ಕಷ್ಟಸಾಧ್ಯ. ಕೊಚ್ಚಿ ಹೋಗಿರುವ ಜಮೀನುಗಳಲ್ಲಿ ಮತ್ತೆ ಮಣ್ಣು ತುಂಬಿಕೊಳ್ಳಲು ಲಕ್ಷಾಂತರ ರೂ. ವೆಚ್ಚವಾಗುತ್ತದೆ. ಅದಕ್ಕೆ ಸರಕಾರದಿಂದಲೂ ಯಾವುದೇ ನೆರವು ಕೂಡಾ ಸಿಗದು ಎಂಬುದು ರೈತರ ಗೋಳು.

10 ಸಾವಿರ ಹೆಕ್ಟೇರ್‌ ಬೆಳೆಹಾನಿ: ಇತ್ತೀಚೆಗೆ ಪ್ರವಾಹದಿಂದ ನರಗುಂದ ತಾಲೂಕಿನಲ್ಲಿ 3,400 ಹೆಕ್ಟೇರ್‌, ರೋಣ ತಾಲೂಕಿನ 7,400 ಹೆಕ್ಟೇರ್‌ ಹಾಗೂ ತುಂಗಭದ್ರ ನದಿಯಿಂದ ಶಿರಹಟ್ಟಿ ತಾಲೂಕಿನ 800 ಹೆಕ್ಟೇರ್‌ ಸೇರಿದಂತೆ ಒಟ್ಟು 10,809 ಹೆಕ್ಟೇರ್‌ ಪ್ರದೇಶದಷ್ಟು ಬೆಳೆಹಾನಿಯಾಗಿದೆ ಎಂಬುದು ಕೃಷಿ ಇಲಾಖೆ ಸಮೀಕ್ಷೆಯಿಂದ ಗೊತ್ತಾಗಿದೆ. ಈ ಪೈಕಿ ರೋಣ ಮತ್ತು ನರಗುಂದ ತಾಲೂಕಿನ ನೀರಾವರಿ ಬೆಳೆಗಳೇ ಹೆಚ್ಚು ಹಾನಿಗೊಳಗಾಗಿವೆ. ಕಬ್ಬು, ಹತ್ತಿ, ಹೆಸರು, ಮೆಕ್ಕೆಜೋಳ, ತೊಗರಿ, ಶೇಂಗಾ, ಸೂರ್ಯಕಾಂತಿ ಬೆಳೆಗಳು ಸಂಪೂರ್ಣ ಕೊಚ್ಚಿ ಹೋಗಿವೆ. ಅಳಿದುಳಿದ ಬೆಳೆಗಳೂ ಪ್ರವಾಹದ ನೀರಿನಿಂದ ಕೊಳೆಯುತ್ತಿವೆ.

 

•ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.