ನರಗುಂದ ತಾಲೂಕಿನಲ್ಲಿ 13 ಸಾವಿರ ಹೆಕ್ಟೇರ್‌ ಬಿತ್ತನೆ


Team Udayavani, Aug 31, 2018, 4:27 PM IST

31-agust-20.jpg

ನರಗುಂದ: ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಹೆಸರು ಬೀಜ ಬಿತ್ತಿ ಕಟಾವು ಮಾಡಿದ ರೈತರು ಮಾರುಕಟ್ಟೆಯಲ್ಲಿ  ದಿಢೀರ್‌ ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ. ಈ ಮಧ್ಯೆ ಸರ್ಕಾರದಿಂದ ಹೆಸರು ಖರೀದಿಸುವ ಬೆಂಬಲ ಬೆಲೆ ಖರೀದಿ ಕೇಂದ್ರದ ನಿರೀಕ್ಷೆಯಲ್ಲಿರುವ ತಾಲೂಕಿನ ರೈತರು ಬೆಳೆದ ಫಸಲು ಕಾಯ್ದಿಟ್ಟುಕೊಂಡು ಕುಳಿತಿದ್ದಾರೆ. ಬೆಲೆ ಕುಸಿತ: ಈಗಾಗಲೇ ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್‌ ಹೆಸರು ಧಾನ್ಯ ಖರೀದಿಗೆ 6975 ರೂ. ಬೆಂಬಲ ಬೆಲೆ ನಿಗದಿ ಮಾಡಿದ್ದು, ರೈತರಿಗೆ ಆಶಾದಾಯಕವಾಗಿದೆ. ಮತ್ತೂಂದೆಡೆ ಪ್ರಾರಂಭದಲ್ಲಿ ಪ್ರತಿ ಕ್ವಿಂಟಲ್‌ಗೆ ಮಾರುಕಟ್ಟೆಯಲ್ಲಿ 5800 ರೂ. ಇದ್ದ ದರ ಇದೀಗ 4800 ರೂ.ಗೆ ಕುಸಿದಿದೆ.

ಇದರಿಂದಾಗಿ ಅತಿ ಕಡಿಮೆ ಬೆಲೆಗೆ ದಾಸ್ತಾನು ಮಾರಾಟ ಮಾಡಲು ರೈತರು ಚಿಂತೆಗೀಡು ಆಗಿದ್ದಾರೆ. ಮೇಲಾಗಿ ಬಿತ್ತನೆ ಸಂದರ್ಭದಲ್ಲಿ ಉತ್ತಮವಾಗಿ ಸುರಿದ ಮಳೆರಾಯ ಹೆಸರು ಬೆಳೆ ಬೆಳವಣಿಗೆಯಾದ ನಂತರ ಕೈಕೊಟ್ಟಿದ್ದರಿಂದಬಹಳಷ್ಟು ಹಾಳಾಗಿದೆ. ಅಳಿದುಳಿದ ಫಸಲಿಗೆ ಉತ್ತಮ ಬೆಲೆ ಸಿಗಲಿ ಎಂಬ ರೈತರ ಮಹದಾಸೆಗೆ ಖರೀದಿ ಕೇಂದ್ರ ಆಶಾದಾಯಕವಾಗಿದೆ. 13 ಸಾವಿರ ಹೆಕ್ಟೇರ್‌: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆ ಇಟ್ಟುಕೊಂಡಿದ್ದ 7 ಸಾವಿರ ಹೆಕ್ಟೇರ್‌ ಗುರಿ ಮೀರಿ ಈ ಬಾರಿ ತಾಲೂಕಿನಲ್ಲಿ ಅತ್ಯಧಿಕ 13 ಸಾವಿರ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಹೆಸರು ಬಿತ್ತನೆಯಾಗಿದೆ. ಕೆಲವೆಡೆ ಮಳೆ ಕೈಹಿಡಿದ ಪರಿಣಾಮ ಕೆಲವು ರೈತರು ಉತ್ತಮ ಫಸಲು ತೆಗೆದಿದ್ದಾರೆ.

ವಾರದೊಳಗೆ ನಿರೀಕ್ಷೆ: ಆ.29ರಂದು ಬೆಂಬಲ ಬೆಲೆಯಲ್ಲಿ ಹೆಸರು ಖರೀದಿ ಕೇಂದ್ರ ಪ್ರಾರಂಭಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇನ್ನು ರಾಜ್ಯ ಸರ್ಕಾರದ ಆದೇಶ ಮಾತ್ರ ಬಾಕಿಯಿದ್ದು, 2,3 ದಿನದೊಳಗೆ ರಾಜ್ಯ ಸರ್ಕಾರ ಆದೇಶ ಹೊರಡಿಸುವ ನಿರೀಕ್ಷೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಹೀಗಾಗಿ ನಿರೀಕ್ಷೆ ಹೊತ್ತ ರೈತರಿಗೆ ಹೆಸರು ಖರೀದಿ ಕೇಂದ್ರ ಕೈಗೆಟುಕುವ ಸಾಧ್ಯತೆ ಸಮೀಪಿಸಿದೆ. ಕಳೆದ ತಿಂಗಳಿನಿಂದಲೇ ಕಟಾವು ಪ್ರಾರಂಭಿಸಿದ ತಾಲೂಕಿನ ರೈತರು ಹೆಸರು ರಾಶಿ ಮಾಡಿ ಧಾನ್ಯವನ್ನು ಬಿಸಿಲಿನಲ್ಲಿ ಒಣಗಿ ಹಾಕಿ ಮಾರಾಟಕ್ಕೆ ಕಾಯ್ದು ಕುಳಿತಿದ್ದಾರೆ. ಇನ್ನೊಂದೆಡೆ ಆಗಾಗ ತುಂತುರು ಮಳೆ ಬೀಳುತ್ತಿದ್ದರಿಂದ ಹೆಸರು ಧಾನ್ಯ ರಕ್ಷಿಸಿಕೊಳ್ಳುವುದು ರೈತರಿಗೆ ಪ್ರಯಾಸವಾಗಿದೆ. ಶೀಘ್ರದಲ್ಲಿ ಖರೀದಿ ಕೇಂದ್ರ ಪ್ರಾರಂಭ ಮಾಡಲಿ ಎಂಬುದು ತಾಲೂಕಿನ ರೈತರ ಕೋರಿಕೆಯಾಗಿದೆ.

ರಾಜ್ಯ ಸರ್ಕಾರದ ಆದೇಶ
ಗದಗ:
ಪ್ರಸಕ್ತ ಮುಂಗಾರು ಹಂಗಾಮಿಗಾಗಿ ಗದಗ, ಧಾರವಾಡ, ಕಲಬುರಗಿ, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಮತ್ತು ಬೀದರ ಜಿಲ್ಲೆಗಳ ರೈತರಿಂದ ಆ. 30ರಿಂದ 30 ದಿನಗಳ ಅವ ಧಿಯವರೆಗೆ ಎಫ್‌ಎಕ್ಯೂ ಗುಣಮಟ್ಟದ ಹೆಸರನ್ನು ಕೇಂದ್ರ ಸರ್ಕಾರ ಘೋಷಿಸಿರುವ ಪ್ರತಿ ಕ್ವಿಂಟಲ್‌ಗೆ 6,975 ರೂ. ದರದಲ್ಲಿ ಮಾರ್ಗಸೂಚಿಗಳನ್ವಯ ಖರೀದಿಸಲು ರಾಜ್ಯ ಮಟ್ಟದ ಎಜೆನ್ಸಿಯಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಂಡಳವನ್ನು ನಿಯಮಿಸಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. ಖರೀದಿ ಷರತ್ತುಗಳು: ಕೇಂದ್ರ ಸರ್ಕಾರ ಅನುಮತಿಸಿರುವ ಗರಿಷ್ಠ 23,250 ಮೆಟ್ರಿಕ್‌ ಟನ್‌ಗೆ ಹೆಸರು ಖರೀದಿ ಮಿತಿಗೊಳಿಸಲಾಗಿದೆ. ಪ್ರತಿ ರೈತರಿಂದ ಪ್ರತಿ ಎಕರೆಗೆ ನಾಲ್ಕು ಕ್ವಿಂಟಲ್‌ನಂತೆ ಗರಿಷ್ಠ 10 ಕ್ವಿಂಟಲ್‌ ಹೆಸರನ್ನು ಮಾತ್ರ ಖರೀದಿಸಲಾಗುತ್ತದೆ.

ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.