ಗದಗ ಕಂಟೈನ್‌ಮೆಂಟ್‌ ಕಂಟಕ: ಒಂದೇ ದಿನ 15 ಜನರಿಗೆ ಕೋವಿಡ್

ಗಂಜಿ ಬಸವೇಶ್ವರ ವೃತ್ತದ 9 ಜನ-ಅನ್ಯ ರಾಜ್ಯದಿಂದ ಮರಳಿದ 6 ಜನರಿಗೆ ಸೋಂಕು

Team Udayavani, May 24, 2020, 8:33 AM IST

ಗದಗ ಕಂಟೈನ್‌ಮೆಂಟ್‌ ಕಂಟಕ: ಒಂದೇ ದಿನ 15 ಜನರಿಗೆ ಕೋವಿಡ್

ಸಾಂದರ್ಭಿಕ ಚಿತ್ರ

ಗದಗ: ಜಿಲ್ಲೆಯ ಮಟ್ಟಿಗೆ ನಗರದ ಒಕ್ಕಲಗೇರಿ ಗಂಜಿ ಬಸವೇಶ್ವರ ಸರ್ಕಲ್‌ ಭಾಗದ ಕಂಟೈನ್ಮೆಂಟ್‌ ಪ್ರದೇಶವೇ ಕಂಟಕವಾಗಿ ಪರಿಣಮಿಸುತ್ತಿದೆ. ಈ ಪ್ರದೇಶದ ಪಿ.913 ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದ 9 ಜನರಿಗೆ ಹಾಗೂ ಇತರೆ ರಾಜ್ಯಗಳಿಂದ ಜಿಲ್ಲೆಗೆ ಮರಳಿದ ವಲಸಿಗರಲ್ಲಿ 6 ಮಂದಿ ಸೇರಿದಂತೆ ಶನಿವಾರ ಒಂದೇ ದಿನ 15 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ.

ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ಗಂಜಿ ಬಸವೇಶ್ವರ ವೃತ್ತದ ನಿರ್ಬಂಧಿ ತ ಪ್ರದೇಶದಲ್ಲಿ ಸೋಂಕು ದೃಢಪಟ್ಟ ಪಿ-913 ಸಂಪರ್ಕದಿಂದಾಗಿ 15 ವರ್ಷದ ಯುವಕ (ಪಿ-1794), 17 ವರ್ಷದ ಯುವಕ (ಪಿ-1795), 50 ವರ್ಷದ ಮಹಿಳೆ (ಪಿ-1932), 20 ವರ್ಷದ ಮಹಿಳೆ (ಪಿ-1933), 22 ವರ್ಷದ ಮಹಿಳೆ (ಪಿ-1934), 18 ವರ್ಷದ ಯುವಕ (ಪಿ-1935), 18 ವರ್ಷದ ಯುವತಿ (ಪಿ-1936), 8 ವರ್ಷದ ಹೆಣ್ಣು ಮಗು (ಪಿ-1937), 21 ವರ್ಷದ ವ್ಯಕ್ತಿ (ಪಿ-1938)
ಸೇರಿದಂತೆ 9 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಗುಜರಾತ್‌ನಿಂದ ಹಿಂದಿರುಗಿದ 25 ವರ್ಷದ ವ್ಯಕ್ತಿ (ಪಿ-1744), 17 ವರ್ಷದ ಯುವಕ (ಪಿ-1745) ಮತ್ತು ಮಹಾರಾಷ್ಟ್ರದಿಂದ ವಾಪಸಾದ 7 ವರ್ಷದ ಬಾಲಕಿ (ಪಿ-1746), 20 ವರ್ಷದ ಪುರುಷ (ಪಿ-1747), 50 ವರ್ಷದ ಮಹಿಳೆ (ಪಿ-1748) ಮತ್ತು ರಾಜಸ್ಥಾನದಿಂದ ಹಿಂದಿರುಗಿದ 17 ವರ್ಷದ ಯುವತಿ (ಪಿ-1763) ಸೇರಿ ಒಟ್ಟು 15 ಕೋವಿಡ್‌-19 ಸೋಂಕು ದೃಢಪಟ್ಟಿವೆ. ಸೋಂಕಿತರನ್ನು ಇಲ್ಲಿನ ಕೋವಿಡ್‌ ಆಸ್ಪತ್ರೆಗೆ
ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಸೋಂಕಿತರ ಪ್ರಯಾಣದ ವಿವರ: ಮೇ 18ರಂದು ಗುಜರಾತದ ಅಹಮದಾಬಾದನಿಂದ ಎರಡು ವಾಹನಗಳಲ್ಲಿ 17 ಜನ ಜಿಲ್ಲೆಗೆ ಆಗಮಿಸಿದ್ದರು. ಈ ಪೈಕಿ ಪಿ-1744 ಹಾಗೂ ಪಿ-1745 ಸೋಂಕು ದೃಢಪಟ1ಟಿದೆ. ಇವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿರುವ 15 ಜನರನ್ನು ನಿಗಾದಲ್ಲಿರಿಸಲಾಗಿದೆ. ಅದರಂತೆ ಮಹಾರಾಷ್ಟ್ರದಿಂದ ನಿಪ್ಪಾಣಿವರೆಗೆ ಬಾಡಿಗೆ ವಾಹನದಲ್ಲಿ, ನಿಪ್ಪಾಣಿಯಿಂದ ಗದುಗಿಗೆ ಲಾರಿ ಮೂಲಕ ಆಗಮಿಸಿರುವ ನಾಲ್ವರಲ್ಲಿ ಮೂರು (ಪಿ-1746, ಪಿ-1747,
ಪಿ-1748) ಜನರಿಗೆ ಸೋಂಕು ಖಚಿತವಾಗಿದೆ. ಪ್ರಾಥಮಿಕ ಸಂಪರ್ಕಿತದಲ್ಲಿರುವ ಒಬ್ಬರನ್ನು ನಿಗಾದಲ್ಲಿರಿಸಲಾಗಿದೆ.

ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ 4 ಕುಟುಂಬಗಳ ಒಟ್ಟು 17 ಜನರು ಮೇ 18ರಂದು ರಾಜಸ್ಥಾನದ ಅಜ್ಮಿರ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಲಾಕ್‌ ಡೌನ್‌ ಸಡಿಲಿಕೆಯಾದ ಬಳಿಕ ಜಿಲ್ಲೆಗೆ ಮರಳಿದ್ದು, ಆ ಪೈಕಿ ಯುವತಿಯೊಬ್ಬಳಿಗೆ (ಪಿ-1763) ಸೋಂಕು ದೃಢಪಟ್ಟಿದೆ. ಪ್ರಾಥಮಿಕ ಸಂಪರ್ಕಿತ 16, ದ್ವಿತೀಯ ಸಂಪರ್ಕಿತ 5 ಜನರನ್ನು ಕ್ವಾರಂಟೈನ್‌ ಮಾಡಲಾಗಿದೆ ಎಂದು ಅ ಧಿಕಾರಿಗಳು ತಿಳಿಸಿದ್ದಾರೆ.

ರೆಡ್‌ ಝೋನ್‌ನತ್ತ ಗದಗ ಹೆಜ್ಜೆ?
ಶನಿವಾರ ಪ್ರಕಟಗೊಂಡ ಕೋವಿಡ್‌-19 ವರದಿಯಲ್ಲಿ 15 ಸೇರಿದಂತೆ ಜಿಲ್ಲೆಯಲ್ಲಿ 29 ಸಕ್ರಿಯ ಪ್ರರಕಣಗಳಿದ್ದು, ಒಟ್ಟು ಸೋಂಕಿನ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಈ ಪೈಕಿ ಐವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದಂತೆ ಓರ್ವ ವೃದ್ಧೆ (ಪಿ.166) ಮೃತಪಟ್ಟಿದ್ದಾರೆ. ಇನ್ನುಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದು ಹಂತದಲ್ಲಿ ಶೂನ್ಯಕ್ಕೆ ಇಳಿದಿದ್ದ ಪ್ರಕರಣಗಳ ಸಂಖ್ಯೆ ಈಗ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯು ರೆಡ್‌ ಝೋನ್‌ನತ್ತ ವಾಲುತ್ತಿದೆ.

ನಗರಕ್ಕೆ ಕಂಟೈನ್‌ಮೆಂಟ್‌ ಕಂಟಕ
ನಗರದ ಗಂಜಿ ಬಸವೇಶ್ವರ ವೃತ್ತದ ಪ್ರದೇಶದಲ್ಲಿ ಮೇಲಿಂದ ಮೇಲೆ ಪ್ರಕರಣಗಳು ದೃಢಪಡುತ್ತಿದ್ದು, ಅವಳಿ ನಗರದ ಪಾಲಿಗೆ ಇದು ಕಂಟಕವಾಗಿ ಪರಿಣಮಿಸಿದೆ. ಈ ಭಾಗದಲ್ಲಿ ಮೊದಲ ಪ್ರಕರಣ ಕಂಡು ಬರುತ್ತಿದ್ದಂತೆ ಹಂತ ಹಂತವಾಗಿ 118 ಜನರನ್ನು ಸರಕಾರಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ಈ ನಡುವೆ ಗಂಜಿ ಬಸವೇಶ್ವರ ಸರ್ಕ್‌ಲ್‌ ಪ್ರದೇಶದಲ್ಲಿ ಮೇ 14ರಂದು ಸೋಂಕಿಗೆ ಒಳಗಾಗಿದ್ದ 61 ವರ್ಷದ ವೃದ್ಧ (ಪಿ.913)ನ ಸಂಪರ್ಕದಲ್ಲಿದ್ದ ಸುಮಾರು 9 ಜನರಿಗೆ ಶನಿವಾರ
ಕೊರೊನಾ ದೃಢಪಟ್ಟಿದೆ.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.