ಗಾಂಜಾ ಬೆಳೆದ ಅರೋಪಿಗೆ 15 ವರ್ಷ ಕಠಿಣ ಶಿಕ್ಷೆ
Team Udayavani, Feb 7, 2023, 3:20 PM IST
ಗದಗ: ತನ್ನ ಸ್ವಂತ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದ ಉಡಚಪ್ಪ ಬಸವಣ್ಣೆಪ್ಪ ಪುರದ ಎಂಬ ವ್ಯಕ್ತಿಗೆ ಗದಗ ಜಿಲ್ಲಾ ಸತ್ರ ನ್ಯಾಯಾಲಯ 15 ವರ್ಷ ಕಠಿಣ ಶಿಕ್ಷೆ ಜೊತೆಗೆ 2 ಲಕ್ಷ ರೂ. ದಂಡ ವಿಧಿಸಿ ಆದೇಶ ನೀಡಿದೆ.
ನ. 9, 2013ರಂದು ಅಂದಿನ ಪ್ರೊಬೆಷನರಿ ಡಿವೈಎಸ್ಪಿ ಆಗಿದ್ದ ಬಿ.ಎಸ್. ನೇಮಗೌಡ (ಇಂದಿನ ಎಸ್ಪಿ) ನೇತೃತ್ವದಲ್ಲಿ ಉಡಚಪ್ಪನ ಹೊಲದಲ್ಲಿ ದಾಳಿ ಮಾಡಿ ಅಂದಾಜು 101 ಕೆಜಿ ಗಾಂಜಾ ಸ್ವತ್ತು ವಶಪಡಿಸಿಕೊಳ್ಳಲಾಗಿತ್ತು. ಹತ್ತಿ ಮತ್ತು ತೊಗರಿ ಬೆಳೆಯ ನಡುವೆ ಉಡಚಪ್ಪ ಗಾಂಜಾ ಬೆಳೆದಿದ್ದನು.
ಇದನ್ನೂ ಓದಿ:ಕುಮಾರಸ್ವಾಮಿಯದ್ದು ಮನೆ-ಊರು ದಾಟಿದ ಸಾಮರ್ಥ್ಯ: ಸಿ.ಟಿ.ರವಿ ಟಾಂಗ್
ಅಂದಾಜು 1 ಲಕ್ಷ ರೂ. ಮೌಲ್ಯದ ಗಾಂಜಾ ಇದಾಗಿತ್ತು. ಎನ್ಡಿಪಿಎಸ್ ಪ್ರಕರಣ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪಿಎಸ್ಐ ಆರ್.ಎಸ್. ಕಟ್ಟಿಮನಿ ತನಿಖೆ ನಡೆಸಿ ಏಪ್ರಿಲ್ 30, 2014ರಂದು ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಆರೋಪ ಸಾಭಿತಾದ ಹಿನ್ನೆಲೆಯಲ್ಲಿ ಜಿಲ್ಲಾ ಸತ್ರ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ