19.69 ಲಕ್ಷ ರೂ. ಉಳಿತಾಯ ಬಜೆಟ್‌

ನರೇಗಲ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮಿ ಚಲವಾದಿ ಅವರಿಂದ ಆಯವ್ಯಯ ಮಂಡನೆ

Team Udayavani, Apr 1, 2022, 3:58 PM IST

19

ಗಜೇಂದ್ರಗಡ: ನರೇಗಲ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಚಲವಾದಿ ಅವರು 2022-23ನೇ ಸಾಲಿನ 19.692 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡಿಸಿದರು.

ಬಜೆಟ್‌ ಸಭೆಯಲ್ಲಿ ಮಾತನಾಡಿದ ಆಡಳಿತ ಪಕ್ಷದ ನಾಮನಿರ್ದೇಶಿತ ಸದಸ್ಯ ಬಸವರಾಜ ವಂಕಲಕುಂಟಿ, ಪಟ್ಟಣದ ಐತಿಹಾಸಿಕ ಹಿರೇಕೆರೆಯನ್ನು ಗ್ರಾಮಸ್ಥರು ನೆಲ-ಜಲ ಸಂರಕ್ಷಣಾ ಸಮಿತಿ ರಚನೆ ಮಾಡಿಕೊಂಡು ಸಮುದಾಯದ ಸಹಭಾಗಿತ್ವ ಹಾಗೂ ರೈತರ ಸಹಕಾರದಲ್ಲಿ ಹೂಳು ತೆಗೆಯುವ ಮೂಲಕ ಅಭಿವೃದ್ಧಿ ಮಾಡಿದ್ದರು. ಆದರೆ, ಈಗ ಮತ್ತೆ ಮುಳ್ಳಿನ ಕಂಟಿಗಳು ಬೆಳೆದು ಕೆರೆಯ ಸೌಂದರ್ಯ ಹಾಳಾಗಿದೆ. ಆದ್ದರಿಂದ, ಗ್ರಾಮಸ್ಥರ ಜೀವ ಜಲದ ಮೂಲವಾದ ಕೆರೆಯ ಅಭಿವೃದ್ಧಿ ಹಾಗೂ ಸ್ವತ್ಛತೆಗೆ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಮೊದಲ ಆದ್ಯತೆ ನೀಡಿಬೇಕೆಂದರು.

ಪಟ್ಟಣ ಪಂಚಾಯಿತಿ ವಿರೋಧ ಪಕ್ಷದ ನಾಯಕ ದಾವೂದ್‌ಅಲಿ ಕುದರಿ ಮಾತನಾಡಿ, ಪಟ್ಟಣವನ್ನು ಸ್ವಚ್ಛವಾಗಿಡುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರ ವೇತನವನ್ನು ಸರಿಯಾದ ಸಮಯಕ್ಕೆ ಕೊಡಬೇಕೆಂದು ಆಗ್ರಹಿಸಿದರು.

ಸಾಮಾನ್ಯ ಸಭೆಯಲ್ಲಿ ಚರ್ಚೆ ಮಾಡಲಾಗುವ ವಿಷಯಗಳ ಬಗ್ಗೆ ಪಟ್ಟಣ ಪಂಚಾಯ್ತಿ ಸದಸ್ಯರು ಕೇಳಿದರೆ ಸರಿಯಾದ ಮಾಹಿತಿಯನ್ನು ಇಲ್ಲಿನ ಸಿಬ್ಬಂದಿ ನಿಡುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಸದಸ್ಯ ರಾಚಯ್ಯ ಮಾಲಗಿತ್ತಿಮಠ ಮಾತನಾಡಿ, ಮೂಲಭೂತ ಸೌಕರ್ಯ ಎಂದರೆ ಚರಂಡಿ, ರಸ್ತೆಗಳು ಅಷ್ಟೇ ಅಂದುಕೊಳ್ಳಬಾರದು. ಸಾರ್ವಜನಿಕರ ಕುಡಿಯುವ ನೀರಿಗೂ ಮಹತ್ವ ನೀಡಬೇಕು. ಹಲವು ಶುದ್ಧ ನೀರಿನ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಕುರಿತು ಸದಸ್ಯರು ಹೇಳಿದರು ಸಹ ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕುಮಾರಸ್ವಾಮಿ ಕೋರಧಾನ್ಯಮಠ, ಫಕೀರಪ್ಪ ಮಳ್ಳಿ, ಮುತ್ತಪ್ಪ ನೂಲ್ಕಿ, ಮಲ್ಲಿಕಾರ್ಜುನಗೌಡ ಭೂಮನಗೌಡ್ರ, ಶ್ರೀಶೈಲಪ್ಪ ಬಂಡಿಹಾಳ, ಬಸೀರಾಬಾನು ನದಾಫ್‌, ವಿಶಾಲಾಕ್ಷಿ ಹೊಸಮನಿ, ಜ್ಯೋತಿ ಪಾಯಪ್ಪಗೌಡ್ರ, ಮಂಜುಳಾ ಹುರಳಿ, ಮಲಿಕಸಾಬ ರೋಣದ, ಈರಪ್ಪ ಜೋಗಿ, ಅಕ್ಕಮ್ಮ ಮಣ್ಣೊಡ್ಡರ, ಶಕುಂತಲಾ ಧರ್ಮಾಯತ, ಎಸ್‌.ಎ.ಜಕ್ಕಲಿ, ವೆಂಕಟೇಶ ಮಡಿವಾಳರ, ಪರಶುರಾಮ ರಾಂಪೂರ ಇದ್ದರು.

ಮುಖ್ಯಾಧಿಕಾರಿ ಗೈರು-ಆಕ್ರೋಶ: ಈ ಹಿಂದೆ ನಡೆದ ಬಜೆಟ್‌ ಪೂರ್ವಭಾವಿ ಸಭೆಗೆ ಆರೋಗ್ಯದ ನೆಪವೊಡ್ಡಿ ಗೈರಾಗಿದ್ದ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಹನುಮಂತಪ್ಪ ಮಣ್ಣವಡ್ಡರ, ಇದೀಗ ಬಜೆಟ್‌ ಮಂಡನೆಗೂ ಗೈರಾಗಿದ್ದಾರೆ. ಚುನಾಯಿತ ಸದಸ್ಯರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದೇ ಫಲಾಯನ ಮಾಡಿದ್ದಾರೆ. ಮುಖ್ಯಾ ಧಿಕಾರಿಗಳ ಅನುಪಸ್ಥಿತಿಯಲ್ಲಿ ಬಜೆಟ್‌ ಮಂಡನೆ ಸಮಂಜಸವಲ್ಲ ಎಂದು ವಿಪಕ್ಷ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.