ಗದಗ ಜಿಲ್ಲೆ ಈಗ ಕಾದ ಕಾವಲಿ..!


Team Udayavani, Mar 7, 2019, 10:18 AM IST

7-mach-16.jpg

ಗದಗ: ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸೂರ್ಯನ ಪ್ರಖರ ಹೆಚ್ಚುತ್ತಿದೆ. ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚುತ್ತಿದ್ದು,
ಭೂಮಿ ಕಾದ ಕಾವಲಿಯಂತಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಬೇಸಿಗೆ ಬಿಸಿಲು ಮತ್ತಷ್ಟು ಏರುವ ಸಾಧ್ಯತೆ ಇದೆ. ಹೊಸ ವರ್ಷದ ಮೊದಲ ದಿನವಾದ ಜನವರಿ 1ರಂದು ಜಿಲ್ಲೆಯಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿತ್ತು. ಆದರೆ, ಫೆಬ್ರವರಿ ತಿಂಗಳಾಂತ್ಯದಿಂದ ಬಿಸಿಲಿನ ತಾಪ ಹೆಚ್ಚುತ್ತಿದೆ. ಇದೀಗ ಮಾರ್ಚ್‌ ಮೊದಲ ವಾರದಲ್ಲೇ ವಿಪರೀತ ಉಷ್ಣಾಂಶ ಕಂಡು ಬರುತ್ತಿದೆ. ಈಗಾಗಲೇ ರಣ ಬಿಸಿಲಿನ ತಾಪದಿಂದ ಜನರು ಬೆವರುವಂತಾಗಿದೆ.

ಬುಧವಾರ ಗದಗ-ಬೆಟಗೇರಿ ಅವಳಿ ನಗರದಲ್ಲಿ 36 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕಳೆದ ಒಂದು ದಶಕದಲ್ಲೇ ಗರಿಷ್ಠ ಎಂದರೆ ಮೂರು ವರ್ಷಗಳ ಹಿಂದೆ (2016ರ) ಮಾರ್ಚ್‌ನಲ್ಲಿ 39.4 ಡಿಗ್ರಿ ಉಷ್ಣಾಂಶ ದಾಖಲಾಗಿತ್ತು. 1953ರ ಮಾರ್ಚ್‌ ತಿಂಗಳಲ್ಲಿ ಗರಿಷ್ಠ 40 ಡಿಗ್ರಿ ಉಷ್ಣಾಂಶ ದಾಖಲಾಗಿತ್ತು. ಇದೇ ಈವರೆಗಿನ ಸಾರ್ವಕಾಲಿಕ ದಾಖಲೆಯಾಗಿದೆ. 

ಸಾಮಾನ್ಯವಾಗಿ ಮಾರ್ಚ್‌ ತಿಂಗಳಲ್ಲಿ ಜಿಲ್ಲೆಯಲ್ಲಿ 36.6 ರಿಂದ 38.9 ಡಿಗ್ರಿ ಸೆಲ್ಸಿಯಸ್‌ ವಾಡಿಕೆ ಉಷ್ಣಾಂಶ ಇರುತ್ತದೆ. ಆದರೆ, ಈ ಬಾರಿ ಮಾರ್ಚ್‌ ಮೊದಲ ವಾರದಲ್ಲೇ ಬಿಸಿಲಿನ ಝಳದಲ್ಲಿ ವಿಪರೀತವಾಗಿ ಏರಿಕೆಯಾಗುತ್ತಿದೆ. ಬೆಳಿಗ್ಗೆ 8 ರಿಂದ ಸಂಜೆ 4ರ ವರೆಗೆ ತೀವ್ರ ಬಿಸಿಲಿರುತ್ತದೆ. ಬಿಸಿಲಿನ ಪ್ರಖರತೆಯಿಂದ ಮಧ್ಯಾಹ್ನ ವೇಳೆಗೆ ಮನೆಯಿಂದ ಹೊರ ಬರಲು ಜನರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಮಧ್ಯಾಹ್ನ ವೇಳೆಗೆ ಮಾರುಕಟ್ಟೆ ಸೇರಿದಂತೆ ಬಹುತೇಕ ಪ್ರಮುಖ ರಸ್ತೆಗಳಲ್ಲಿ ಜನಸಂದಣಿ ಕಡಿಮೆಯಾಗುತ್ತಿದೆ. ಈಗಲೇ ಇಷ್ಟೊಂದು ಬಿಸಿಲಿದ್ದರೆ, ಮುಂದಿನ ಏಪ್ರಿಲ್‌, ಮೇ ತಿಂಗಳ ಪರಿಸ್ಥಿತಿ ಹೇಗೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಹವಾಮಾನ ಇಲಾಖೆಯ ಮುನ್ನೋಟದ ಪ್ರಕಾರ ಮಾರ್ಚ್‌ ಎರಡನೇ ವಾರದ ಬಳಿಕ 37ರಿಂದ 39 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಟಬಹುದೆಂದು ಹೇಳಲಾಗಿದೆ.

ಜಿಲ್ಲೆಯಲ್ಲಿ 2011ರಿಂದ ನಿರಂತರವಾಗಿ ಸರಾಸರಿ ವಾಡಿಕೆ ಮಳೆಗಿಂತ (641.6 ಮಿ.ಮೀ) ಕಡಿಮೆ ಮಳೆಯಾಗುತ್ತಿದೆ. ಅಲ್ಲದೆ, ಕಳೆದ ನಾಲ್ಕೈದು ವರ್ಷಗಳಿಂದ ನಿರಂತರ ಬರ ಆವರಿಸುತ್ತಿದ್ದು, ಜಲಮೂಲಗಳು ಕಣ್ಮರೆಯಾಗುತ್ತಿದೆ. ಪರಿಣಾಮ ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿ ಬಿಸಿಲ ಧಗೆ ಹೆಚ್ಚುತ್ತಿದೆ. ಇನ್ನೊಂದೆಡೆ ಒಣ ಹವೆ ಹೆಚ್ಚುತ್ತಿದೆ. ಕೆಲಸದ ನಿಮಿತ್ತ ನಗರ ಹಾಗೂ ಸುತ್ತಲಿನ ಗ್ರಾಮಗಳಿಂದ ಪಟ್ಟಣಕ್ಕೆ ಬರುವ ಜನರು ಬಿಸಿಲಿನ ತಾಪಕ್ಕೆ ಬಸವಳಿಯುತ್ತಿದ್ದಾರೆ. ಪಾದಚಾರಿಗಳು ನೆತ್ತಿ ಸುಡುವ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಕೊಡೆ, ಮರದ ನೆರಳಿಗೆ ಮೊರೆ ಹೋಗುತ್ತಿದ್ದಾರೆ.

ಹವಾಮಾನ ಇಲಾಖೆಯ ಮುನ್ನೋಟದ ಪ್ರಕಾರ ಗದಗ ಜಿಲ್ಲೆಯಲ್ಲಿ ಮಾರ್ಚ್‌ ಎರಡನೇ ವಾರದ ಬಳಿಕ 37ರಿಂದ 39 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಟಬಹುದೆಂದು ಹೇಳಲಾಗಿದೆ.

ವೀರೇಂದ್ರ ನಾಗಲದಿನ್ನಿ 

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.