ರೈತ ಬಂಡಾಯದ “ಮೇಳಿ ಕಾಳಗ’ಕ್ಕೆ  41 ವರ್ಷ

ಇಂದು ರೈತ ಹುತಾತ್ಮ ದಿನಾಚರಣೆ! ­ಹುತಾತ್ಮ ರೈತ ಈರಪ್ಪ ಕಡ್ಲಿಕೊಪ್ಪ ವೀರಗಲ್ಲಿಗೆ ನಮನ

Team Udayavani, Jul 21, 2021, 8:22 PM IST

20bgv-13

ವರದಿ : ಸಿದ್ಧಲಿಂಗಯ್ಯ ಮಣ್ಣೂರಮಠ

ನರಗುಂದ: 1980ರಲ್ಲಿ “ಮೇಳಿ ಕಾಳಗ’ ಎಂದೇ ಪ್ರತೀತಿ ಪಡೆದ ನರಗುಂದ ರೈತ ಬಂಡಾಯಕ್ಕೆ ಜುಲೈ 21 ಕ್ಕೆ 41 ವರ್ಷ ಗತಿಸಿದೆ. ರೈತ ಕುಲದ ಏಳ್ಗೆಗೆ ನೆತ್ತರು ಹರಿಸಿದ ರೈತ ಬಂಡಾಯದ ನೆಲದಲ್ಲಿ ಬುಧವಾರ ರೈತ ಹುತಾತ್ಮ ದಿನ ಆಚರಿಸಲಾಗಿದೆ.

ನೆತ್ತರು ಹರಿಸಿದ ಆ ದಿನಗಳು: 1980ರಲ್ಲಿ ನವಿಲುತೀರ್ಥ ಜಲಾಶಯದಿಂದ ಕಾಲುವೆ ನೀರು ರೈತರ ಭೂಮಿಗೆ ದೊರಕದಿದ್ದರೂ ಅಂದಿನ ಗುಂಡೂರಾವ್‌ ಸರ್ಕಾರ ಬೆಟರ್‌ ಮೆಂಟ್‌ ಲೇವಿ(ನೀರಿನ ಕರ ಆಕರಣೆ) ಜಾರಿಗೊಳಿಸಿತು.ನೀರು ಸಿಗದಿದ್ದರೂ ಕರ ಏಕೆ ಕಟ್ಟಬೇಕು? ಎಂಬ ತಾರ್ಕಿಕ ನಿಲುವು ರೈತರ ಚಳವಳಿಗೆ ನಾಂದಿ ಹಾಡಿತು. ಅತ್ತ ನವಲಗುಂದದಲ್ಲೂ ಚಳವಳಿ ಶುರುವಾಗಿ, 1980ರ ಜು.21ರಂದು ನರಗುಂದದಲ್ಲಿ ಅಂದಿನ ತಹಶೀಲ್ದಾರರು ಕಚೇರಿ ಪ್ರವೇಶಕ್ಕೆ ನಿರಾಕರಿಸಿದ ರೈತರನ್ನು ಲೆಕ್ಕಿಸದೇ ಕಚೇರಿ ಪ್ರವೇಶ ಮಾಡಿದ್ದೇ ಬಂಡಾಯಕ್ಕೆ ನಾಂದಿಯಾಯಿತು. ಇದು ರೈತರ ಸಹನೆ ಕೆರಳಿಸಿತ್ತು ಎಂಬ ಹಿನ್ನೆಲೆ ರೈತ ಬಂಡಾಯಕ್ಕಿದೆ. “ಬಡವನ ಕೋಪ ದವಡೆಗೆ ಮೂಲ’ ಎಂಬಂತೆ ಮೇಳಿ(ಕೃಷಿ ಪರಿಕರ) ಹಿಡಿದು ಕುಳಿತಿದ್ದ ರೈತರ ಆಕ್ರೋಶ ತಾರಕಕ್ಕೇರಿದಾಗ ಪೊಲೀಸರ ಗುಂಡಿಗೆ ಚಿಕ್ಕನರಗುಂದ ರೈತ ಈರಪ್ಪ ಕಡ್ಲಿಕೊಪ್ಪ, ನವಲಗುಂದಲ್ಲಿ ಅಳಗವಾಡಿ ರೈತ ಬಸಪ್ಪ ಲಕ್ಕುಂಡಿ ಬಲಿಯಾದರು. ಇದೇ ವೇಳೆ ಓರ್ವ ಪೊಲೀಸ್‌ ಅಧಿಕಾರಿ ಸೇರಿ 4 ಮಂದಿ ಪೊಲೀಸರು ಹತರಾಗಿದ್ದು ಬಂಡಾಯದ ಹಾದಿಯಲ್ಲಿ ಅಚ್ಚೊತ್ತಿದೆ.

ತೀರದ ಗೋಳು: ರೈತ ಬಂಡಾಯದ ನೆಲದಲ್ಲೇ 6 ವರ್ಷದಿಂದ ಮಹದಾಯಿ ಹೋರಾಟ ಹುಟ್ಟಿಕೊಂಡಿದೆ. 2015ರ ಜು.16ರಂದು ಮಹದಾಯಿ ಮತ್ತು ಕಳಸಾ-ಬಂಡೂರಿ ಜೀವಜಲಕ್ಕಾಗಿ ನಡೆಯುತ್ತಿರುವ ಹೋರಾಟ 7ನೇ ವರ್ಷಕ್ಕೆ ಕಾಲಿಟ್ಟಿದೆ. ಜನಾಂದೋಲನ ಸ್ವರೂಪ ಪಡೆದು, ದೇಶದ ಇತಿಹಾಸದಲ್ಲೇ ಹೊಸ ಅಧ್ಯಾಯ ಬರೆದು ವಿಶ್ವ ದಾಖಲೆ ಸೃಷ್ಟಿಸಿದ ಹೋರಾಟ ಸರ್ಕಾರಗಳ ಅಸಡ್ಡೆ ಧೋರಣೆಗೆ ನಿದರ್ಶನವಾಗಿದೆ. ಸುಧಾರಿಸದ ವೀರಗಲ್ಲು: ಈ ನೆಲದ ಹಲವಾರು ನಾಯಕರು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡು ಅಧಿ ಕಾರದ ಚುಕ್ಕಾಣಿ ಹಿಡಿದರೂ ಹೆದ್ದಾರಿ ಬದಿಗಿರುವ ಹುತಾತ್ಮ ರೈತನ ವೀರಗಲ್ಲು ಮಾತ್ರ ಸುಧಾರಣೆ ಕಂಡಿಲ್ಲ. ಇಲ್ಲಿ ರೈತ ಸ್ಮಾರಕ ಭವನ ನಿರ್ಮಿಸಬೇಕೆಂಬ ರೈತರ ಕೂಗು ಇಂದಿಗೂ ಈಡೇರಿಲ್ಲ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.