![1-assam](https://www.udayavani.com/wp-content/uploads/2024/07/1-assam-415x233.jpg)
ವಿವಾಹ ಸಮಾರಂಭಕ್ಕೆ 50 ಅತಿಥಿಗಳ ಮಿತಿ
Team Udayavani, May 23, 2020, 11:43 AM IST
![Gadaga-tdy-3](https://www.udayavani.com/wp-content/uploads/2020/05/Gadaga-tdy-3-12-620x372.jpg)
ಗದಗ: ಕೋವಿಡ್-19 ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೊಳಿಸಿದ ಪ್ರತಿಬಂಧಕಗಳನ್ನು ಹಂತಹಂತವಾಗಿ ಸಡಿಲಗೊಳಿಸಿದ್ದು, ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಬಹುದಾದ ಅತಿಥಿಗಳ ಸಂಖ್ಯೆಯನ್ನು 50ಕ್ಕೆ ಮಿತಿಗೊಳಿಸಿ ಆದೇಶಿಸಲಾಗಿದೆ.
ವಿವಾಹ ನಡೆಯುವ ಸ್ಥಳದಲ್ಲಿ ಉತ್ತಮ ಗಾಳಿ, ಬೆಳಕಿಗೆ ಅವಕಾಶ ಇರಬೇಕು. ಕಂಟೈನ್ಮೆಂಟ್ ವಲಯದ ವ್ಯಕ್ತಿಗಳು, 65 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು ಹಾಗೂ 10 ವರ್ಷದೊಳಗಿನ ಮಕ್ಕಳು, ಜ್ವರ, ಶೀತ, ಕೆಮ್ಮು ಉಸಿರಾಟದ ತೊಂದರೆಯಿಂದ ಬಳಲುತ್ತಿರುವವರಿಗೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ. ವಿವಾಹ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೈ ತೊಳೆಯುವ ಸ್ಥಳಗಳಲ್ಲಿ, ಶೌಚಾಲಯಗಳಲ್ಲಿ ಹ್ಯಾಂಡ್ ವಾಶ್, ಟಿಶ್ಯು ಪೇಪರ್ ಮತ್ತು ನೀರು ಪೂರೈಕೆ ಮಾಡಬೇಕು. ಮದ್ಯಪಾನ, ಪಾನ್ ಗುಟ್ಕಾ, ತಂಬಾಕು ಸೇವನೆ ನಿಷೇಧಿಸಬೇಕು. ವಿವಾಹ ಸ್ಥಳದಲ್ಲಿ ಸ್ವಚ್ಛತೆ ಮತ್ತು ಆರೋಗ್ಯಕರ ಪರಿಸರವಿರಬೇಕು. ಕೈಗೊಂಡಿರುವ ವ್ಯವಸ್ಥೆಗಳ ಬಗ್ಗೆ ನೇಮಿಸಿದ ನೋಡಲ್ ವ್ಯಕ್ತಿ ಮೇಲ್ವಿಚಾರಣೆ ಮಾಡಬೇಕು. ಸಮಾರಂಭದಲ್ಲಿ ಪಾಲ್ಗೊಂಡವರ ಹೆಸರು, ಸಂಪರ್ಕ ಸಂಖ್ಯೆ ಸಂಗ್ರಹಿಸಬೇಕು. ಭಾಗವಹಿಸುವ ಎಲ್ಲ ಅತಿಥಿಗಳು ಆರೋಗ್ಯ ಸೇತು ಆ್ಯಪ್ ಹೊಂದಿರಬೇಕು. ಕೋವಿಡ್ ಸಂಬಂಧಿತ ಯಾವುದೇ ಮಾಹಿತಿಗೆ ಸಹಾಯವಾಣಿ ಸಂಖ್ಯೆ 9745697456, 080- 4684600, 080-66692000 ಮತ್ತು ಆಪ್ತ ಮಿತ್ರ 14410 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
![1-assam](https://www.udayavani.com/wp-content/uploads/2024/07/1-assam-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.