9 ಜನ ಸೋಂಕಿತರು ಗುಣಮುಖ


Team Udayavani, Jun 6, 2020, 2:40 PM IST

9 ಜನ ಸೋಂಕಿತರು ಗುಣಮುಖ

ಗದಗ: ಕೋವಿಡ್‌-19 ಸೋಂಕಿನಿಂದ ಬಳಲುತ್ತಿದ್ದ ಜಿಲ್ಲೆಯ ಎಂಟು ವರ್ಷದ ಮಗು ಸೇರಿದಂತೆ ಒಟ್ಟು 9 ಜನರು ಗುಣಮುಖರಾಗಿದ್ದು, ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ದೃಢ ಪಟ್ಟಿರುವ ಒಟ್ಟು 37 ಪ್ರರಕಣಗಳಲ್ಲಿ ಇಂದಿನ 9 ಸೇರಿ 26 ಜನರು ಗುಣಮುಖರಾಗಿರುವುದು ಸಮಾಧಾನಕರವಾಗಿದ್ದರೂ, ದಿನಕಳೆದಂತೆ ಸೋಂಕು ನಿಗೂಢವಾಗಿ ಹರಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮುಂದುವರಿದಿದೆ.

ಗುಜರಾತದಿಂದ ಆಗಮಿಸಿದ್ದ 62 ವರ್ಷದ (ಪಿ.970) ವ್ಯಕ್ತಿ, ಮುಂಬೈನಿಂದ ಆಗಮಿಸಿದ್ದ 32 ವರ್ಷದ (ಪಿ. 1566) ವ್ಯಕ್ತಿಗೆ ಕ್ರಮವಾಗಿ ಮೇ 14 ಹಾಗೂ ಮೇ 21ರಂದು ಕೋವಿಡ್‌-19 ಸೋಂಕು ದೃಢ ಪಟ್ಟಿತ್ತು. ತಕ್ಷಣ ಅವರನ್ನು ನಿಗದಿತ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಜಿ ಬಸವೇಶ್ವರ ಸರ್ಕಲ್‌ ಪ್ರದೇಶದ ಪಿ-913 ಅವರ ದ್ವೀತಿಯ ಸಂಪರ್ಕದಿಂದ ಮೇ 23ರಂದು ಸೋಂಕಿಗೆ ಒಳಗಾಗಿದ್ದ, 50 ವರ್ಷದ ಮಹಿಳೆ(ಪಿ.1932), 19 ವರ್ಷದ ಯುವತಿ (ಪಿ. 1933), 22 ವರ್ಷದ ಯುವತಿ (ಪಿ. 1934), 18 ವರ್ಷದ ಯುವಕ (ಪಿ.1935), 48 ವರ್ಷದ ವ್ಯಕ್ತಿ (ಪಿ. 1936), 8 ವರ್ಷದ ಬಾಲಕಿ (ಪಿ. 1937) ಹಾಗೂ 21 ವರ್ಷದ ವ್ಯಕ್ತಿ (1938)ಗೆ ಸೋಂಕು ಕಂಡು ಬಂದಿತ್ತು. ಅವರನ್ನು ಕೂಡಲೇ ಇಲ್ಲಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜಿಮ್ಸ್‌ ಆಸ್ಪತ್ರೆಯ ತಜ್ಞ ವೈದ್ಯರು ಸೂಕ್ತ ಚಿಕಿತ್ಸೆ ನೀಡುವ ಮೂಲಕ ಸೋಂಕಿತರನ್ನು ಗುಣಪಡಿಸುವಲ್ಲಿ ಸಫಲರಾಗಿದ್ದಾರೆ.

ಹೀಗಾಗಿ ಅವರಲ್ಲಿ ಕೋವಿಡ್‌ಗೆ ಸಂಬಂಧಿಸಿ ಯಾವುದೇ ರೀತಿಯ ಗಂಭೀರ ಲಕ್ಷಣಗಳು ಕಂಡು ಬಂದಿಲ್ಲ. ಅಲ್ಲದೇ, ಜೂ. 4ರಂದು ಸೋಂಕಿತ 9 ಜನರ ಗಂಟಲಿನ ದ್ರವದ ಮಾದರಿಯನ್ನು ಕೋವಿಡ್‌ ಮರು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವೇಳೆ ವರದಿ ನೆಗೇಟಿವ್‌ ಆಗಿದ್ದರಿಂದ ಎಲ್ಲರೂ ಸೋಂಕಿನಿಂದ ಗುಣಮುಖರಾರುವುದು ಖಚಿತವಾದ ಹಿನ್ನೆಲೆಯಲ್ಲಿ ಶುಕ್ರವಾರ ಆಸ್ಪತ್ರೆಯಿಂದ ಡಿಸಾcರ್ಜ್‌ ಮಾಡಲಾಗಿದೆ ಎಂದು ಜಿಮ್ಸ್‌ ನಿರ್ದೇಶಕ ಡಾ|ಪಿ.ಎಸ್‌.ಭೂಸರೆಡ್ಡಿ ಮಾಹಿತಿ ನೀಡಿದರು.

ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಂತೆ ಆಸ್ಪತ್ರೆಯ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಚಪ್ಪಾಳೆ ತಟ್ಟಿ ಶುಭ ಕೋರಿದರು. ಇದೇ ವೇಳೆ ಸ್ಯಾನಿ ಟೈಸರ್‌, ಮಾಸ್ಕ್ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಿ, ಮುಂದಿನ 14 ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿ ಇರಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕವಾಗಿ ಓಡಾಡಬಾರದು ಎಂದು ವೈದ್ಯರು ಸೂಚಿಸಿದರು.

ಮುಂದುವರಿದ ಆತಂಕ: ಒಂದೆಡೆ ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಜೊತೆ ಜೊತೆಗೆ ನಗರ ಹಾಗೂ ಗ್ರಾಮೀಣ ಭಾಗದ ಜನರಲ್ಲಿ ಸೋಂಕು ಕಂಡು ಬರುತ್ತಿದೆ. ಯಾವುದೇ ರೀತಿಯ ಪ್ರಯಾಣದ ಹಿನ್ನೆಲೆ ಇರದ್ದರೂ, ನಿಗೂಢವಾಗಿ ಸೋಂಕು ಹರಡುತ್ತಿರುವುದು ಸಹಜವಾಗಿಯೇ ಜಿಲ್ಲಾಡಳಿತಕ್ಕೆ ತಲೆ ನೋವಾಗಿ ಪರಿಣಮಿಸಿದೆ.

ಗದಗ ನಗರದ ರಂಗನವಾಡದ ಪಿ.166, ಹಾಗೂ ಗಂಜೀ ಬಸವೇಶ್ವರ ಮೊದಲಗಳ ಮೂಲ ಇಂದಿಗೂ ಪತ್ತೆಯಾಗಿಲ್ಲ. ಅವರೊಂದಿಗೆ ಪ್ರಥಮ ಮತ್ತು ದ್ವಿತೀಯ ಸಂಪರ್ಕದಿಂದ ನಗರದಲ್ಲಿ ಸೋಂಕು ವ್ಯಾಪಿಸಿತ್ತು. ಗ್ರೀನ್‌ ಜೋನ್‌ನಲ್ಲಿದ್ದ ಅವಳಿ ನಗರ ಕೆಂಪು ವಲಯಕ್ಕೆ ತಿರುಗಿತ್ತು. ಇದರ ಮಧ್ಯೆ ನಗರದಲ್ಲಿ ಸೋಂಕಿತರು ಗುಣಮುಖರಾಗುತ್ತಿದ್ದರಿಂದ ಜನರು ನಿರಾಳರಾಗುಷ್ಟರಲ್ಲಿ ಮತ್ತೆ ಹೊಸ ಪ್ರಕರಣಗಳು ಕಂಡು ಬರುತ್ತಿವೆ. ಅದರಲ್ಲೂ ತಾಲೂಕಿನ ಲಕ್ಕುಂಡಿಯ ಹಾಗೂ ಹುಡ್ಕೋ ಕಾಲೋನಿಯ ವ್ಯಕ್ತಿಗಳಿಗೆ ಸೋಂಕು ಹರಿಡಿದ್ದು ಹೇಗೆ ಎಂಬುದು ನಿಗೂಢವಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ್ದ ಒಟ್ಟು 7,066 ಮಾದರಿಗಳಲ್ಲಿ 37 ಪಾಸಿಟಿವ್‌, 6,829 ಮಾದರಿಗಳು ನೆಗೆಟಿವ್‌ ಆಗಿವೆ. 26 ಜನರು ಸೋಂಕಿನಿಂದ ಮುಕ್ತರಾಗಿದ್ದು, 9 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದಂತೆ 200 ಜನರ ವರದಿ ಬರಲು ಬಾಕಿ ಇವೆ. –ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.