Gadag; ಕರಿಯಮ್ಮದೇವಿಯ 95ನೇ ಜಾತ್ರಾಮಹೋತ್ಸವ ಏ. 8ರಿಂದ ಆರಂಭ


Team Udayavani, Apr 6, 2024, 12:12 PM IST

ಕರಿಯಮ್ಮದೇವಿಯ 95ನೇ ಜಾತ್ರಾಮಹೋತ್ಸವ ಏ. 8ರಿಂದ ಆರಂಭ

ಗದಗ: ಕರಿಯಮ್ಮಕಲ್ಲು ಬಡಾವಣೆ ಸುಧಾರಣಾ ಸಮಿತಿ ವತಿಯಿಂದ ನಗರದ ಕರಿಯಮ್ಮದೇವಿಯ 95ನೇ ಜಾತ್ರಾ ಮಹೋತ್ಸವವನ್ನು ಏ. 8ರಿಂದ 10ರ ವರೆಗೆ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಎಲ್.ಡಿ. ವಂದಾವರಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ. 8ರಂದು ಬೆಳಿಗ್ಗೆ 10ಕ್ಕೆ ಕರಿಯಮ್ಮದೇವಿ ಬೆಳ್ಳಿ ಉತ್ಸವ ಮೂರ್ತಿ ದರ್ಶನಕ್ಕೆ ಇಡಲಾಗುವುದು. ನಂತರ ರಂಗೋಲಿ ಸ್ಪರ್ಧೆ, 11ಕ್ಕೆ ಚಿತ್ರಕಲಾ ಸ್ಪರ್ಧೆ, 11.30ಕ್ಕೆ ವಚನ ಗಾಯನ ಸ್ಪರ್ಧೆ ನಡೆಯಲಿದೆ ಎಂದರು.

ಏ. 8ರಂದು ಸಂಜೆ 6ಕ್ಕೆ ಜಾತ್ರಾ ಪ್ರಾರಂಭೋತ್ಸವ ನೆರವೇರಲಿದ್ದು, ಹಂಪಸಾಗರ ನವಲಿ ಹಿರೇಮಠದ ಅಭಿನವ ಶಿವಲಿಂಗೇಶ್ವರ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ನಗರಸಭೆ ಸದಸ್ಯರಾದ ವಿಜಯಲಕ್ಷ್ಮಿ ದಿಂಡೂರ, ಶ್ವೇತಾ ಬೆನಕವಾರಿ ಪಾಲ್ಗೊಳ್ಳುವರು ಎಂದು ಹೇಳಿದರು.

ಏ. 9ರಂದು ಮಧ್ಯಾಹ್ನ 2.30ಕ್ಕೆ ಸಕಲ ಮಂಗಳ ವಾದ್ಯಗಳೊಂದಿಗೆ ಕರಿಯಮ್ಮದೇವಿ ಪಾಲಕಿ ಉತ್ಸವ ನೆರವೇರಲಿದೆ. ಜಾತ್ರಾ ಸಮಿತಿ ಅಧ್ಯಕ್ಷ ಜಗದೀಶ ಪೂಜಾರ, ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಈಶಣ್ಣ ಮುನವಳ್ಳಿ, ಕಾಮನಳ್ಳಿ ಎಂ.ಎನ್. ಪಾಲ್ಗೊಳ್ಳುವರು. ಸಂಜೆ 5.30ಕ್ಕೆ ಮಹಾರಥೋತ್ಸವ ಜರುಗಲಿದೆ. ನಂತರ ಕೊತಬಾಳದ ಅರುಣೋದಯ ಜಾನಪದ ಕಲಾತಂಡದ ಶಂಕರಪ್ಪ ಸಂಕಣ್ಣವರ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.

ಏ. 10ರಂದು ಮಧ್ಯಾಹ್ನ 1ಕ್ಕೆ ಅನ್ನಸಂತರ್ಪಣೆ, ಸಂಜೆ 6ಕ್ಕೆ ಕಡುಬಿನ ಕಾಳಗ, 7ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಸಮಿತಿ ಕಾರ್ಯಾಧ್ಯಕ್ಷ ಸಿ.ಕೆ. ಮಾಳಶೆಟ್ಟಿ, ಮಂಜುನಾಥ ಪೂಜಾರ ಹಾಗೂ ಗೋವಿಂದಪ್ಪ ಗೌಡಪ್ಪಗೋಳ ಪಾಲ್ಗೊಳ್ಳುವರು ಎಂದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆ ಸದಸ್ಯೆ ವಿಜಯಲಕ್ಷ್ಮಿ ದಿಂಡೂರ, ಮುಖಂಡರಾದ ಸಿ.ಕೆ. ಮಾಳಶೆಟ್ಟಿ, ಶಶಿಧರ ದಿಂಡೂರ, ಬಸವರಾಜ ನರೇಗಲ್, ಜಗದೀಶ್ ಪೂಜಾರ, ಶಂಕರ ಹಾನಗಲ್ ಇದ್ದರು.

Ad

ಟಾಪ್ ನ್ಯೂಸ್

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

1-gurme

Udupi: ಶಾಸಕರೊಬ್ಬರ ಹೇಳಿಕೆ ರಾಜ್ಯ ಕಾಂಗ್ರೆಸ್ ಸರಕಾರದ ಇಂದಿನ ನೈಜ ಸ್ಥಿತಿ ಅನಾವರಣ: ಗುರ್ಮೆ

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Gadag:‌ ನಾಯಿಗಳ ಕಡಿತ ಪ್ರಕರಣಗಳು ಹೆಚ್ಚಳ

Madhu-Bangarappa

ಆರ್‌ಎಸ್‌ಎಸ್‌ ಬ್ಯಾನ್‌ ಮಾಡುವುದು ಒಳ್ಳೆಯದು: ಸಚಿವ ಮಧು ಬಂಗಾರಪ್ಪ

16

Naregal: ವರುಣನಿಗಾಗಿ ಮಹಿಳೆಯರಿಂದ ಮೌನಾಚರಣೆ

Gadag: NREGA outsourced staff starts non-cooperation movement in front of the Taluk Panchayath

Gadag: ತಾ.ಪಂ ಎದುರು ನರೇಗಾ ಹೊರಗುತ್ತಿಗೆ ಸಿಬ್ಬಂದಿಯಿಂದ ಅಸಹಕಾರ ಚಳುವಳಿ ಆರಂಭ

Muharram: ಸಡಗರದ ಮೊಹರಂ; ಬೆಂಕಿಯ ಕುಂಡದಲ್ಲಿ ಕಂಬಳಿ ಹಾಸಿ ನಮಾಜ್ ಮಾಡಿದ ಮೌಲ್ವಿ

Muharram: ಸಡಗರದ ಮೊಹರಂ; ಬೆಂಕಿಯ ಕುಂಡದಲ್ಲಿ ಕಂಬಳಿ ಹಾಸಿ ನಮಾಜ್ ಮಾಡಿದ ಮೌಲ್ವಿ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

15

Gadag:‌ ನಾಯಿಗಳ ಕಡಿತ ಪ್ರಕರಣಗಳು ಹೆಚ್ಚಳ

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

14

Belagavi: ಬಿತ್ತನೆ ಕಾರ್ಯಕ್ಕೆ ಹೊಸ ಚೈತನ್ಯ ನೀಡಿದ ಮುಂಗಾರು

13

Badami: ಕಟ್ಟಡ ರೆಡಿಯಾದ್ರೂ ಶುರುವಾಗದ ಕ್ಯಾಂಟೀನ್‌

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.