ಮಕ್ಕಳಿಲ್ಲದ ದಂಪತಿಗೆ ಮಗು ಹಸ್ತಾಂತರ

ಉತ್ತಮ ಸಂಸ್ಕಾರ, ಶಿಕ್ಷಣ ನೀಡಿ ಮಗುವಿನ ಉತ್ತಮ ಭವಿಷ್ಯ ನಿರ್ಮಿಸಬೇಕು

Team Udayavani, Jan 1, 2022, 6:19 PM IST

ಮಕ್ಕಳಿಲ್ಲದ ದಂಪತಿಗೆ ಮಗು ಹಸ್ತಾಂತರ

ಗದಗ: ಮಕ್ಕಳಿಲ್ಲದ ದಂಪತಿಗಳ ಮಡಿಲಿಗೆ ಮಗುವನ್ನು ನೀಡುವುದು ಪುಣ್ಯದ ಕೆಲಸ. ಇಂತಹ ಕಾರ್ಯದಲ್ಲಿ ಸಮರ್ಪಿಸಿಕೊಂಡ ಸೇವಾ ಭಾರತಿ ಟ್ರಸ್ಟ್‌ನ ಅಮೂಲ್ಯ ವಿಶೇಷ ದತ್ತು ಸ್ವೀಕಾರ ಸಂಸ್ಥೆಯ ಸಮಾಜಮುಖೀ ಕಾರ್ಯ ಶ್ಲಾಘನೀಯ ಎಂದು ಹರ್ಲಾಪುರ-ಹಳ್ಳಿಗುಡಿಯ ಕೊಟ್ಟೂರೇಶ್ವರ ಮಠದ ಅಭಿನವ ಡಾ| ಕೊಟ್ಟೂರೇಶ್ವರ ಸಾಮೀಜಿ ಹೇಳಿದರು.

ಬೆಟಗೇರಿಯ ಅಮೂಲ್ಯ ವಿಶೇಷ ದತ್ತು ಸ್ವೀಕಾರ ಸಂಸ್ಥೆಯಲ್ಲಿ ಏರ್ಪಡಿಸಿದ್ದ ದತ್ತು ಪೂರ್ವ ಪೋಷಕತ್ವದಡಿ ಮಕ್ಕಳಿಲ್ಲದ ದಂಪತಿಗೆ ಮಗುವನ್ನು ಹಸ್ತಾಂತರಿಸುವ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿ, ಮಕ್ಕಳಿಲ್ಲದ ದಂಪತಿಗಳು ದತ್ತು ಪಡೆದ ಮಗುವಿಗೆ ತಾವೇ ಜನ್ಮ ನೀಡಿದ ಮಗುವಿನಂತೆ ಪ್ರೀತಿ, ಮಮತೆ, ಕಕ್ಕುಲತೆಯಿಂದ ಪೋಷಿಸಿ ಉತ್ತಮ ಸಂಸ್ಕಾರ, ಶಿಕ್ಷಣ ನೀಡಿ ಮಗುವಿನ ಉತ್ತಮ ಭವಿಷ್ಯ ನಿರ್ಮಿಸಬೇಕು ಎಂದರು.

ಹೆತ್ತವರಿಗೆ ಬೇಡವಾದ ಮಕ್ಕಳನ್ನು ಪೋಷಿಸಿ ಮಕ್ಕಳಿಲ್ಲದ ದಂಪತಿಗೆ ಕಾನೂನಿನ ಚೌಕಟ್ಟಿಗೆ ಒಳಪಟ್ಟು ದತ್ತು ಪೋಷಕತ್ವದಡಿ ಹಸ್ತಾಂತರಿಸುವ ಗುರುತರವಾದ ಜವಾಬ್ದಾರಿ ನಿಭಾಯಿಸುತ್ತಿರುವ ಸಂಸ್ಥೆ ಪುಣ್ಯದ ಕೆಲಸ ಮಾಡುತ್ತಿದೆ. ಇಲ್ಲಿನ ಆಯಾಗಳು ತಾಯಿ ಇಲ್ಲದ ಮಗುವಿಗೆ ತಾಯಿ ಸ್ಥಾನ ಕೊಟ್ಟು ಅಂತಹ ಮಕ್ಕಳನ್ನು ಲಾಲನೆ, ಪಾಲನೆ, ಪೋಷಣೆಯಲ್ಲಿ ಹಗಲಿರುಳು ಸಮರ್ಪಣಾ ಭಾವದಿಂದ ತಮ್ಮನ್ನು ತೊಡಗಿಸಿಕೊಂಡಿರುವುದೂ ಪುಣ್ಯಪ್ರಾಪ್ತಿಯ ಕಾರ್ಯ ಎಂದರು.

ಉದ್ಯಮಿ ಡಾ| ವಿಜಯ ಸಂಕೇಶ್ವರ ಮಾತನಾಡಿ, ಹೆತ್ತ ಮಗುವನ್ನು ತ್ಯಜಿಸಿವುದು, ಮಗು ಮಾರಾಟದಂತಹ ಘಟನೆಗಳನ್ನು ತಡೆಗಟ್ಟಬೇಕು. ಸಮಾಜ ಮತ್ತು ಸರಕಾರ ಜಾಗೃತವಾಗಬೇಕು. ವ್ಯಾಮೋಹ, ಸರಿಯಾದ ವಯಸ್ಸಿನಲ್ಲಿ ಮದುವೆ ಆಗದೇ, ಅನ್ಯ ಕಾರಣದಿಂದ ಜನಿಸುವ ಮಕ್ಕಳು, ಹೆಣ್ಣು ಮಗು ಬೇಡವೆಂದು ಹೆತ್ತ ಮಗುವನ್ನು ಬೇಕಾದಲ್ಲಿ ಬಿಟ್ಟು ಹೋಗುವುದು ಮುಗ್ಧ ಕಂದಮ್ಮಗಳ ಅನಾಥ ಸ್ಥಿತಿಗೆ ಕಾರಣವಾಗಲಿದೆ. ಪ್ರಜ್ಞಾವಂತರು ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕು ಎಂದು ಸಲಹೆ ನೀಡಿದರು.

ಹುಬ್ಬಳ್ಳಿಯ ಸೇವಾ ಭಾರತಿ ಟ್ರಸ್ಟ್‌ನ ಅಧ್ಯಕ್ಷ ರಘು ಅಕಮಂಚಿ ಮಾತನಾಡಿ, ಟ್ರಸ್ಟ್‌ನ ಸಮಾಜಮುಖೀ ಕಾರ್ಯವನ್ನು ವಿವರಿಸಿದರು. ಬೆಟಗೇರಿಯ ಅಮೂಲ್ಯ ವಿಶೇಷ ದತ್ತು ಸ್ವೀಕಾರ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಬೆಲ್ಲದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಾ| ಶೇಖರ ಸಜ್ಜನರ, ಡಾ| ರಾಜಶೇಖರ ಬಳ್ಳಾರಿ, ವಿಜಯಕುಮಾರ ಗಡ್ಡಿ, ಸುಧೀಂದ್ರ ಘೋರ್ಪಡೆ, ಶ್ರೀಧರ ಸುಲ್ತಾನಪುರ, ಬಸವರಾಜ ನಾಗಲಾಪುರ, ಬಾಲಕೃಷ್ಣ ಕಾಮತ, ಪಟ್ಟಣಶೆಟ್ಟಿ, ಬೂದೇಶ ಬ್ಯಾಹಟ್ಟಿ, ಚನ್ನಯ್ಯ ಬೊಮ್ಮನಹಳ್ಳಿ, ರಾಜೇಶ ಖಟವಟೆ, ನಾಗವೇಣಿ ಕಟ್ಟಿಮನಿ, ಶ್ರೀಧರ ಉಡುಪಿ, ಲಲಿತಾಬಾಯಿ ಮೇರವಾಡೆ, ಪ್ರಲಾದರಾಜ ಕಾರ್ಕಳ
ಇದ್ದರು. ಪ್ರಾಚಾರ್ಯ ಮಾರುತಿ ಕಟ್ಟಿಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಕಾಶ ಗಾಣಿಗೇರ ನಿರೂಪಿಸಿದರು. ಕಾರ್ಯದರ್ಶಿ ಸುಭಾಸ ಬಬಲಾದಿ ವಂದಿಸಿದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.