ಸುಗಮ ಸಂಚಾರಕ್ಕೆ ಹೊಸ ಪ್ಲಾನ್‌

•ಸಂಚಾರ ದಟ್ಟಣೆ ತಗ್ಗಿಸಲು ಜಿಲ್ಲಾ ಪೊಲೀಸ್‌ ಇಲಾಖೆ-ನಗರಸಭೆ ಅಧಿಕಾರಿಗಳಿಂದ ಅಗತ್ಯ ಕ್ರಮ

Team Udayavani, Jun 7, 2019, 9:11 AM IST

gadaga-tdy-1..

ಗದಗ: ಕೆಸಿ ರಾಣಿ ವೃತ್ತದಲ್ಲಿ ವಾಹನಗಳ ಪಾರ್ಕಿಂಗ್‌ ಪ್ಲೇಸ್‌ ಹಾಗೂ ಏಕಮುಖೀ ಸಂಚಾರ ಅನುಷ್ಠಾನದ ಕುರಿತು ಎಸ್‌ಪಿ ಶ್ರೀನಾಥ ಜೋಶಿ ಹಾಗೂ ನಗರಸಭೆ ಅಭಿಯಂತರ ಎಲ್.ಜಿ. ಪತ್ತಾರ ಪರಿಶೀಲಿಸಿದರು.

ಗದಗ: ದಿನಕಳೆದಂತೆ ಅವಳಿ ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಸಂಚಾರ ದಟ್ಟಣೆ ಹೆಚ್ಚುತ್ತಿದೆ. ಎಲ್ಲೆಂದರಲ್ಲಿ ವಾಹನಗಳ ನಿಲುಗಡೆ, ಅಡ್ಡಾದಿಡ್ಡಿ ವಾಹನಗಳ ಚಲಾವಣೆಯಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿ ತಪ್ಪಿಸಲು ಕೈಗೊಳ್ಳಬೇಕಾದ ಉಪಕ್ರಮಗಳ ಬಗ್ಗೆ ಜಿಲ್ಲಾ ಪೊಲೀಸ್‌ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ಅಧ್ಯಯನ ಶುರುಮಾಡಿದ್ದಾರೆ.

ಜಿಲ್ಲಾ ಕೇಂದ್ರವಾಗಿರುವ ಗದಗ ನಗರದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ವಿಪರೀತವಾಗಿ ಹೆಚ್ಚುತ್ತಿದೆ. ಆದರೆ, ರಸ್ತೆಗಳ ಅಗಲೀಕರಣವಾಗದೇ ಇಕ್ಕಟ್ಟಿನ ರಸ್ತೆಗಳಲ್ಲೇ ವಾಹನಗಳ ಚಾಲನೆಗೆ ಸವಾರರು ಪ್ರಯಾಸ ಪಡುವಂತಾಗಿದೆ. ಅದರೊಂದಿಗೆ ಮುಖ್ಯ ರಸ್ತೆಗಳ ಎರಡೂ ಬದಿ ಫುಟ್ಪಾತ್‌ಗಳನ್ನು ತಳ್ಳುಗಾಡಿಗಳು, ಬೀದಿ ಬದಿ ವ್ಯಾಪಾರಸ್ಥರು ಅತಿಕ್ರಮಿಸಿದ್ದರಿಂದ ಪಾದಚಾರಿಗಳು ರಸ್ತೆಗಿಳಿಯುತ್ತಿದ್ದಾರೆ. ಇದರಿಂದಾಗಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡುತ್ತಿದೆ.

ಅದರಲ್ಲೂ ನಗರದ ಹೃದಯ ಭಾಗದಲ್ಲಿರುವ ರೋಟರಿ ಸರ್ಕಲ್ ಹಾಗೂ ತೋಂಟದಾರ್ಯ ಮಠದ ಹೆಬ್ಟಾಗಿಲು, ಗಾಂಧಿ ಸರ್ಕಲ್ನಲ್ಲಿ ವಾಹನಗಳ ದಟ್ಟಣೆ ಹೆಚ್ಚುತ್ತಿದೆ. ಗದಗದಿಂದ ರೋಣ, ಗಜೇಂದ್ರಗಡ, ನರೇಗಲ್ ಸೇರಿದಂತೆ ಬೆಟಗೇರಿ ಮಾರ್ಗವಾಗಿ ಸಂಚರಿಸುವ ಸಾರಿಗೆ ಬಸ್‌ಗಳು, ಟಂಟಂ ಆಟೋಗಳನ್ನು ಬೇಕಾಬಿಟ್ಟಿ ಯಾಗಿ ರಸ್ತೆ ಮಧ್ಯೆದಲ್ಲೇ ನಿಲ್ಲಿಸಲಾಗುತ್ತಿದೆ. ರೋಟರಿ ಸರ್ಕಲ್ ಮತ್ತು ಮಹಾತ್ಮಗಾಂಧಿ ವೃತ್ತದಲ್ಲಿ ನೋಪಾರ್ಕಿಂಗ್‌ಎಂದು ಗುರುತಿಸಿರುವ ಸ್ಥಳದಲ್ಲೇ ಸಾರಿಗೆ ಬಸ್‌ಗಳನ್ನು ನಿಲ್ಲಿಸಲಾಗುತ್ತಿದ್ದು, ಉಭಯ ವೃತ್ತಗಳಲ್ಲಿ ಸಂಚಾರ ಸಮಸ್ಯೆಗೆ ಕಾರಣವಾಗುತ್ತಿದೆ. ಮೊದಲೇ ಇಕ್ಕಟ್ಟಾಗಿರುವ ರಸ್ತೆಗಳಲ್ಲಿ ಸಾರಿಗೆ ಬಸ್‌ ಚಾಲಕರ ನಡೆಗೆ ಸಾರ್ವಜನಿಕ ವಲಯದಲ್ಲಿ ಟೀಕೆಗಳೂ ವ್ಯಕ್ತವಾಗುತ್ತಿವೆ. ಪ್ರಮುಖ ವೃತ್ತಗಳಿಂದ ಸ್ವಲ್ಪ ದೂರದಲ್ಲಿ ಬಸ್‌ಗಳನ್ನು ನಿಲ್ಲಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂಬ ಮನವಿಗೂ ಬಸ್‌ ಚಾಲಕರು ಸ್ಪಂದಿಸುತ್ತಿಲ್ಲ. ಕೆಲವೊಮ್ಮೆ ಸರ್ಕಲ್ನಿಂದ ದೂರ ಬಸ್‌ ನಿಲ್ಲಿಸಿದರೆ, ನಮಗೆ ಕಲೆಕ್ಷನ್‌ ಹೇಗಾಗುತ್ತದೆ ಎಂದು ಚಾಲಕ, ನಿರ್ವಾಹಕರು ತಮ್ಮೊಂದಿಗೇ ವಾಗ್ವಾದಕ್ಕಿಳಿಯುತ್ತಾರೆ. ಹೀಗಾಗಿ ಕೆಲವೊಮ್ಮೆ ಬಸ್‌ ಚಾಲಕರಿಗೆ ನೋಪಾರ್ಕಿಂಗ್‌ ಪಾರ್ಕಿಂಗ್‌ಗಾಗಿ 100 ದಂಡ ವಿಧಿಸಲಾಗುತ್ತದೆ. ಇದರಿಂದ ಟಂಟಂ ಆಟೋಗಳ ಆವಳಿ ಬಗ್ಗೆ ಹೇಳುವಂತಿಲ್ಲ ಎಂಬುದು ಹೆಸರು ಹೇಳಲಿಚ್ಛಿಸದ ಟ್ರಾಫಿಕ್ಸ್‌ ಪೊಲೀಸರ ಅಳಲು.

ಸುಗಮ ಸಂಚಾರಕ್ಕೆ ಹೊಸ ಪ್ಲಾನ್‌:

ನಗರದ ಎಲ್ಲ ಅವ್ಯವಸ್ಥೆ ಸರಿಪಡಿಸಲು ಈಗಾಗಲೇ ಜಿಲ್ಲಾ ಪೊಲೀಸ್‌ ಇಲಾಖೆ ಹಾಗೂ ಗದಗ-ಬೆಟಗೇರಿ ನಗರಸಭೆ ಅಧಿಕಾರಿಗಳು ಹೊಸ ಹೊಸ ಉಪಾಯ ಹುಡುಕುತ್ತಿದ್ದಾರೆ. ಅದರ ಭಾಗವಾಗಿ ಗುರುವಾರ ನಗರದ ರೋಟರಿ ಸರ್ಕಲ್, ತೋಂಟದಾರ್ಯ ಮಠದ ಹೆಬ್ಟಾಗಿಲು, ಗ್ರೇನ್‌ ಮಾರ್ಕೆಟ್ ಭಾಗಕ್ಕೆ ಭೇಟಿ ನೀಡಿದ ಎಸ್‌ಪಿ ಶ್ರೀನಾಥ ಜೋಶಿ ಹಾಗೂ ನಗರಸಭೆ ಮುಖ್ಯ ಅಭಿಯಂತರ ಎಲ್.ಜಿ. ಪತ್ತಾರ ಜಂಟಿಯಾಗಿ ಸಂಚಾರ ಸಮಸ್ಯೆ ಅಧ್ಯಯನ ನಡೆಸಿದರು.

ತೋಂಟದಾರ್ಯ ಮಠದ ಹೆಬ್ಟಾಗಿಲಿನಿಂದ ಕೆಸಿ ರಸ್ತೆ ಪ್ರವೇಶಿಸುವ ಮಾರ್ಗ ರದ್ದುಗೊಳಿಸಿ ಪಾಲಾ ಬದಾಮಿ ರಸ್ತೆಯಿಂದ ಮೊದಲ 50 ಮೀಟರ್‌ ವರೆಗೆ ಪಾರ್ಕಿಂಗ್‌ ಏರಿಯಾ ಮಾಡಬೇಕು. ಈ ಮಾರ್ಗಕ್ಕೆ ಪರ್ಯಾಯವಾಗಿರುವ ಹೆಡ್‌ ಪೋಸ್ಟ್‌ ಮಾರ್ಗವಾಗಿ ಕೆಸಿ ರಾಣಿ ರಸ್ತೆಗೆ ಹಾಗೂ ಕೆಸಿ ರಾಣಿ ರಸ್ತೆಯಿಂದ ಹೊಸ ಕಾಮತ್‌ ಹೋಟೆಲ್ ಮುಂಭಾಗಕ್ಕೆ ಏಕಮುಖ ಚಾಲನೆಯಲ್ಲಿ ಸಂಚಾರ ವ್ಯವಸ್ಥೆ ಮಾಡಬೇಕು. ಇಲ್ಲಿನ ಹಳೇ ಬಸ್‌ ನಿಲ್ದಾಣ ಸಮೀಪದ ವೃತ್ತದಿಂದ ಕೆ.ಎಚ್.ಪಾಟೀಲ ವೃತ್ತದವರೆಗೆ ಒಂದು ಬದಿಯಲ್ಲಿ ವಾಹನಗಳ ನಿಲುಗಡೆ ಅವಕಾಶ ಕಲ್ಪಿಸುವುದು, ಸುತ್ತಲಿನ ಬೀದಿ ಬದಿ ವ್ಯಾಪಾರಿಗಳನ್ನು ಸೊಸೈಟಿ ಸೀಮೆ ಎಣ್ಣೆ ಡಿಪೋ ಭಾಗದ ಖಾಲಿ ಜಾಗೆಗೆ ಸ್ಥಳಾಂತರಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಅದರೊಂದಿಗೆ ಅಲ್ಲಲ್ಲಿ ಪಾರ್ಕಿಂಗ್‌ ಜಾಗ ಗುರುತಿಸಲಾಗುತ್ತಿದೆ ಎಂದು ನಗರಸಭೆ ಅಭಿಯಂತರ ಎಲ್.ಜಿ.ಪತ್ತಾರ ಮಾಹಿತಿ ನೀಡಿದರು.

•ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.