ಅಂಗನವಾಡಿ ಕಾರ್ಯಕರ್ತೆಯರ ಧರಣಿ
Team Udayavani, Jul 7, 2019, 3:40 PM IST
ನರಗುಂದ: ಅಂಗನವಾಡಿ ಕಾರ್ಯಕರ್ತೆಯರು ತಹಶೀಲ್ದಾರ ಆಶಪ್ಪ ಪೂಜಾರ ಅವರಿಗೆ ಮನವಿ ಸಲ್ಲಿಸಿದರು.
ನರಗುಂದ: ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಪ್ರಾರಂಭಿಸಿ ಅಂಗನವಾಡಿ ಕೇಂದ್ರಗಳ ಮೇಲೆ ಅನ್ಯಾಯ ಎಸೆಗುತ್ತಿದೆ ಎಂದು ಆರೋಪಿಸಿ ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳ ಸಿಬ್ಬಂದಿ ಮಿನಿವಿಧಾನಸೌಧ ಎದುರು ಶನಿವಾರ ಧರಣಿ ನಡೆಸಿದರು.
ಎಐಟಿಯುಸಿ ಜಿಲ್ಲಾ ಸಂಚಾಲಕ ಎನ್.ಎ. ಖಾಜಿ ಮಾತನಾಡಿ, ಪ್ರಾಥಮಿಕ ಪೂರ್ವ ಶಿಕ್ಷಣದಲ್ಲಿ ಅಂಗನವಾಡಿ ಕೇಂದ್ರಗಳ ಶ್ರಮ ಸಾಕಷ್ಟಿದೆ. ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭಿಸಿದ ಸರ್ಕಾರದ ಕ್ರಮದಿಂದ ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳು 7 ಕೇಂದ್ರಗಳು ಬಾಗಿಲು ಮುಚ್ಚಿವೆ ಎಂದು ಆರೋಪಿಸಿದರು.
ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸದ ಸರ್ಕಾರ ಎಲ್ಕೆಜಿ, ಯುಕೆಜಿ ಪ್ರಾರಂಭಿಸಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಯಿಂದ ವಂಚಿತ ಆಗುವಂತೆ ಮಾಡುತ್ತಿದೆ. ಹೀಗಿದ್ದರೆ ಪ್ರಾಥಮಿಕ ಶಾಲೆಗಳಲ್ಲಿ ಪ್ರಾರಂಭಿಸಿದ ಎಲ್ಕೆಜಿ, ಯುಕೆಜಿಗೆ ಅಂಗನವಾಡಿ ಕಾರ್ಯಕರ್ತೆಯರನ್ನು ನೇಮಿಸಿಕೊಳ್ಳಲಿ ಎಂದು ಒತ್ತಾಯಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ ತಾಲೂಕು ಅಧ್ಯಕ್ಷೆ ಶಾರದಾ ಹಳೇಮನಿ, ಕಾರ್ಯದರ್ಶಿ ಶಾರದಾ ರೋಣದ, ಚಾಂದಬಿ ಮುಲ್ಲಾನವರ, ಜಿ.ಎಸ್.ಬೆಳವಟಗಿ, ಎ.ಬಿ.ಕುರಹಟ್ಟಿ, ಕೆ.ಬಿ.ಪೂಜಾರ, ಎಸ್.ಜಿ. ಬಾಗಲಕೋಟಿ, ಆರ್.ಎಲ್. ಹುಜರತ್ತಿ, ಎಲ್.ಎಚ್. ಭಜಂತ್ರಿ, ದೇವಕ್ಕ ಮಾಮನಿ, ಭೀಮವ್ವ ನವಲಗುಂದ ಹಾಗೂ ಎಲ್ಲ ಕಾರ್ಯಕರ್ತೆ, ಸಹಾಯಕಿಯರು ಧರಣಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ