ಆಧಾರ್‌ ನೋಂದಣಿಗೆ ತಪ್ಪದ ನಿತ್ಯ ಪರದಾಟ


Team Udayavani, Jun 26, 2019, 10:27 AM IST

gadaga-tdy-1..

ಗದಗ: ಆಧಾರ್‌ ನೋಂದಣಿಗಾಗಿ ಇಲ್ಲಿನ ಎಸಿ ಕಚೇರಿಯಲ್ಲಿರುವ ಗದಗ ಒನ್‌ ಎದುರು ಜನರು ಸಾಲುಗಟ್ಟಿದ್ದರು.

ಗದಗ: ಮಕ್ಕಳ ಶಾಲಾ ದಾಖಲಾತಿ ಸೇರಿದಂತೆ ಸರಕಾರದ ಪ್ರತಿ ಯೋಜನೆಗಳಿಗೂ ಆಧಾರ್‌ ಕಾರ್ಡ್‌ ಸಲ್ಲಿಕೆ ಕಡ್ಡಾಯ. ಆದರೆ, ಸರ್ವರ್‌ ಸಮಸ್ಯೆ, ಬ್ಯಾಂಕುಗಳ ನಿರಾಸಕ್ತಿಯಿಂದ ಸಾರ್ವಜನಿಕರು ನಿತ್ಯ ಪರದಾಡುವಂತಾಗಿದೆ.ಆಧಾರ್‌ ಕಾರ್ಡ್‌ ನೋಂದಣಿಗಾಗಿ ಜನರು ರಾತ್ರಿಯಿಡೀ ಜಾಗರಣೆ ಮಾಡುವಂತಾಗಿರುವುದು ಶೋಚನೀಯ.

ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪಡಿತರ ಚೀಟಿದಾರರ ಕುಟುಂಬ ಸದಸ್ಯರು ಇ-ಕೆವೈಸಿ ಮಾಡಿಸಬೇಕೆಂದು ಆದೇಶಿಸಿತ್ತು. ಆನಂತರ ಈ ಆದೇಶವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದರೂ ಜನರು ಮಾತ್ರ ಆಧಾರ್‌ಗೆ ಅರ್ಜಿ ಸಲ್ಲಿಸಲು ಮುಗಿ ಬಿದ್ದಿದ್ದಾರೆ.

ಮಕ್ಕಳ ಶಿಷ್ಯವೇತನ, ಶಾಲಾ ದಾಖಲಾತಿ, ಕೃಷಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಮತ್ತಿತರೆ ಕಾರಣಗಳಿಂದ ಹೊಸದಾಗಿ ಆಧಾರ್‌ಗೆ ಅರ್ಜಿ ಸಲ್ಲಿಕೆ, ತಿದ್ದುಪಡಿ ಮಾಡಿಸುವವರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಅಲ್ಲದೇ ಆಧಾರ್‌ ನೋಂದಾಯಿಸುವ ಖಾಸಗಿ ಫ್ರಾಂಚೈಸಿಗಳಿಗೆ ನೀಡಿದ್ದ ಅನುಮತಿಯನ್ನು ಸರಕಾರ ಹಿಂಪಡೆದಿರುವುದು ಸಮಸ್ಯೆಯನ್ನು ಮತ್ತಷ್ಟು ಬಿಗಡಾಯಿಸಿದೆ.

ಕೆಲ ಕಡೆ ಸರ್ವರ್‌ ಸಮಸ್ಯೆ: ಜಿಲ್ಲಾಡಳಿತ ಭವನದಲ್ಲಿರುವ ಆಧಾರ್‌ ಕೇಂದ್ರ, ಗದಗ ಓನ್‌ ಐಸಿಐಸಿಐ ಹಾಗೂ ಇತರೆ ಒಂದೆರಡು ಬ್ಯಾಂಕ್‌ಗಳಲ್ಲಿ ಮಾತ್ರ ಆಧಾರ್‌ ನೋಂದಾಯಿಸಲಾಗುತ್ತದೆ. ಆ ಪೈಕಿ ಇಲ್ಲಿನ ಗಾಂಧಿ ವೃತ್ತದಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಸರ್ವಸ್‌ ಸಮಸ್ಯೆಯಿಂದ ಕಳೆದ 15 ದಿನಗಳಿಂದ ಆಧಾರ್‌ ನೋಂದಣಿ ಮಾಡುತ್ತಿಲ್ಲ ಎನ್ನುತ್ತಾರೆ ಬ್ಯಾಂಕ್‌ನ ಸಿಬ್ಬಂದಿ.

ಸಣ್ಣ ಮಕ್ಕಳಿಗೆ ಆಧಾರ್‌ ನೋಂದಾಯಿಸಲ್ಲ: ಗದಗ ತಹಶೀಲ್ದಾರ್‌ ಕಚೇರಿಯಲ್ಲಿರುವ ನೆಮ್ಮದಿ ಕೇಂದ್ರದಲ್ಲಿ ಆಧಾರ್‌ ಕಾರ್ಡ್‌ ನೋಂದಣಿಗೆ ಅಗತ್ಯವಿರುವ ರೆಟಿನಾ ಸ್ಕ್ತ್ರ್ಯಾನರ್‌(ಕಣ್ಣಿನ ಸ್ಕ್ತ್ರ್ಯಾನರ್‌) ಕೊರತೆಯಿಂದ ತಿದ್ದುಪಡಿ ಮಾತ್ರ ಮಾಡಲಾಗುತ್ತದೆ. ಹೀಗಾಗಿ ಹೊಸದಾಗಿ ಹಾಗೂ 20 ವರ್ಷದೊಳಗಿನ ಸಣ್ಣ ಮಕ್ಕಳಿಗೆ ಆಧಾರ್‌ ನೋಂದಾಯಿಸುವುದಿಲ್ಲವೆಂದು ಅಧಿಕೃತವಾಗಿ ಕರಪತ್ರ ಅಂಟಿಸಿದೆ.

ಮಾರುದ್ಧ ಸರದಿ: ಇನ್ನುಳಿದಂತೆ ಜಿಲ್ಲಾಡಳಿತ ಭವನದ ಆಧಾರ್‌ ಕೇಂದ್ರ, ಗದಗ ಓನ್‌ ಹಾಗೂ ಐಸಿಐಸಿಐ ಬ್ಯಾಂಕುಗಳಿಗೆ ಮುಗಿ ಬಿದ್ದಿದ್ದಾರೆ. ಐಸಿಐಸಿಐ ಬ್ಯಾಂಕ್‌ನಲ್ಲಿ ದಿನಕ್ಕೆ 15 ಜನರಿಗೆ ಮಾತ್ರ ಟೋಕನ್‌ ನೀಡಲಾಗುತ್ತಿದೆ. ಬೆಳಗಿನ ಜಾವ 5 ಗಂಟೆ ವೇಳೆಗೆ ಮಾರುದ್ಧ ಸರದಿ ಬೆಳೆದಿರುತ್ತದೆ. ಜಿಲ್ಲಾಡಳಿತ ಭವನ, ಗದಗ ಒನ್‌ ನಲ್ಲಿ ತಲಾ 30 ಜನರಿಗೆ ಅರ್ಜಿ ವಿತರಿಸಲಾಗುತ್ತಿದೆ. ದಿನಕ್ಕೆ ನೂರಾರು ಜನರು ಸರದಿಯಲ್ಲಿ ನಿಲ್ಲುತ್ತಿದ್ದರೂ, ಅನೇಕರಿಗೆ ಅರ್ಜಿ ದೊರೆಯದೇ ವಾಪಾಸ್ಸಾಗುತ್ತಿದ್ದಾರೆ. ಆಧಾರ್‌ ನೋಂದಣಿಗೆ ಕನಿಷ್ಠ ಎರಡ್ಮೂರು ದಿನ ಅಲೆಯಬೇಕು. ಇಲ್ಲವೇ ಒಂದು ದಿನ ಮುನ್ನ ರಾತ್ರಿ ಏಳೆಂಟು ಗಂಟೆಗೆಲ್ಲಾ ಬಂದು ಸರದಿಯಲ್ಲಿ ಕೂರುವಂತಾಗಿದೆ. ಹೀಗಾಗಿ ಕಳೆದ ನಾಲ್ಕೈದು ದಿನಗಳಿಂದ ಮಳೆ, ಗಾಳಿ ಎನ್ನದೇ, ಮಕ್ಕಳೊಂದಿಗೆ ಬರುವ ನಗರ ಹಾಗೂ ಗ್ರಾಮೀಣ ಜನರು ರಾತ್ರಿಯಿಡೀ ಇಲ್ಲೇ ಸೊಳ್ಳೆ ಪರದೆ ಕಟ್ಟಿಕೊಂಡು ಮಲಗುತ್ತಿರುವುದು ಶೋಚನೀಯ.

ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಕುರಿತು ಕಿಂಚಿತ್ತು ಗಮನ ಹರಿಸುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪ.

ಎಲ್ಲ ಬ್ಯಾಂಕುಗಳಲ್ಲಿ ಆಧಾರ್‌ ಸೆಲ್ ಆರಂಭಿಸಬೇಕೆಂಬ ನಿಮಯಕ್ಕೆ ಬ್ಯಾಂಕ್‌ ಅಧಿಕಾರಿಗಳು ಕಿಮ್ಮತ್ತು ನೀಡುತ್ತಿಲ್ಲ. ಸರಕಾರಿ ಸಂಸ್ಥೆಗಳೊಂದಿಗೆ ಬ್ಯಾಂಕ್‌ ಅಧಿಕಾರಿಗಳು ಕೈ ಜೋಡಿಸಿದರೆ, ಆಧಾರ್‌ ಕಾರ್ಡ್‌ ಸಮಸ್ಯೆ ಕೆಲವೇ ದಿನಗಳಲ್ಲಿ ದೂರವಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು.•ಚನ್ನಾರೆಡ್ಡಿ ಗೂಳರೆಡ್ಡಿ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರು

ಆಧಾರ್‌ ಕಾರ್ಡ್‌ ಅರ್ಜಿಗಾಗಿ ಎರಡು ದಿನಗಳಿಂದ ಬೆಳಗಿನ ಜಾವವೇ ಬಂದು ಸರದಿಯಲ್ಲಿ ನಿಂತಿದ್ದರೂ ಅರ್ಜಿ ಸಿಕ್ಕಿಲ್ಲ. ಹೀಗಾಗಿ ಕಳೆದ ರಾತ್ರಿಯೇ ಬಂದು ಇಲ್ಲಿ ಮಲಗಿದ್ದೇನೆ. ಇವತ್ತಾದರೂ, ಸಿಗುತ್ತೋ ಇಲ್ಲವೋ ಗೊತ್ತಿಲ್ಲ.•ನಾಗರಾಜ ಹೆಳವಿ,ಬೆಟಗೇರಿ ನಿವಾಸಿ.

ಆಧಾರ್‌ ಕಾರ್ಡ್‌ ನೋಂದಣಿ ರಾಜ್ಯಾದ್ಯಂತ ಸಮಸ್ಯೆಯಿದೆ. ಸದ್ಯ ಜಿಲ್ಲಾ ಕೇಂದ್ರದಲ್ಲಿ ಮೂರು, ತಾಲೂಕಿನಲ್ಲಿ ತಲಾ ಒಂದು ಆಧಾರ್‌ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಮುಂದಿನ 15 ದಿನಗಳಲ್ಲಿ ಇನ್ನೂ ಮೂರು ಲಾಗಿನ್‌ ಬರಲಿದ್ದು, ಸಮಸ್ಯೆ ಬಗೆಹರಿಯಲಿದೆ. ಅದರೊಂದಿಗೆ ಬ್ಯಾಂಕುಗಳಲ್ಲಿ ಆಧಾರ್‌ ಸೆಲ್ ಆರಂಭಿಸಲು ಸಂಬಂಧಿಸಿದವರಿಗೆ ಸೂಚಿಸುತ್ತೇನೆ.

 

•ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.