ಬಿಜೆಪಿಯಿಂದ ಅಧಿಕಾರ ದುರ್ಬಳಕೆ: ಪಾಟೀಲ
Team Udayavani, Apr 22, 2019, 2:33 PM IST
ಗಜೇಂದ್ರಗಡ: ಸಮಗ್ರ ಅಭಿವೃದ್ಧಿ ಕಾಣದೇ ಹಿಂದುಳಿದಿರುವ ಹಾವೇರಿ ಕ್ಷೇತ್ರದ ಗ್ರಾಮಾಭಿವೃದ್ಧಿಗೆ ಡಿ.ಆರ್. ಪಾಟೀಲರ ಗೆಲುವು ಅನಿವಾರ್ಯ. ಹೀಗಾಗಿ ಅಭಿವೃದ್ಧಿ ಬಯಸಿರುವ ಕ್ಷೇತ್ರದ ಜನತೆ ಬದಲಾವಣೆಗೆ ನಾಂದಿ ಹಾಡಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್. ಪಾಟೀಲ ಹೇಳಿದರು.
ಪಟ್ಟಣದ ದುರ್ಗಾ ವೃತ್ತದಲ್ಲಿ ರವಿವಾರ ಅಭ್ಯರ್ಥಿ ಡಿ.ಆರ್. ಪಾಟೀಲ ಪರ ಪ್ರಚಾರದಲ್ಲಿ ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿ ಅವರು ಮಾತನಾಡಿದರು.
ಕಳೆದ ಹತ್ತು ವರ್ಷಗಳಿಂದ ಹಾವೇರಿ ಲೋಕಸಭೆ ಕ್ಷೇತ್ರ ಅಭಿವೃದ್ಧಿಯಿಂದ ಸಂಪೂರ್ಣ ವಂಚಿತವಾಗಿದೆ. ಕೇಂದ್ರದಿಂದ ಯಾವೊಂದು ಹೇಳಿಕೊಳ್ಳುವ ಯೋಜನೆ ಜಾರಿಗೊಳಿಸಿಲ್ಲ. ಈ ಭಾಗದ ಜನತೆ ಮುಗ್ಧತೆ ದುರುಪಯೋಗಪಡಿಸಿಕೊಂಡಿರುವ ಬಿಜೆಪಿಗರು ಅಧಿಕಾರ ದುರ್ಬಳಕೆ ಮಾಡಿಕೊಂಡು ಆಡಳಿತ ನಡೆಸಿದ್ದಾರೆ. ಇಂಥವರ ಆಡಳಿತದಿಂದ ಬೇಸತ್ತಿರುವ ಮತದಾರರು ಈ ಬಾರಿ ಅಭಿವೃದ್ಧಿಗೆ ಸಂಪೂರ್ಣ ಬೆಂಬಲಿಸಲು ನಿರ್ಧರಿಸಿದ್ದು, ಡಿ.ಆರ್. ಪಾಟೀಲ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಅಶೋಕ ಬಾಗಮಾರ ಮಾತನಾಡಿ, ಹಸಿ ಸುಳ್ಳು ಹೇಳುವುದಲ್ಲದೇ, ಬಣ್ಣದ ಮಾತುಗಳನ್ನಾಡಿ ಮತದಾರರ ದಿಕ್ಕು ತಪ್ಪಿಸುವ ಬಿಜೆಪಿ ಆಟ ಈ ಬಾರಿ ಚುನಾವಣೆಯಲ್ಲಿ ನಡೆಯೋದಿಲ್ಲ. ಈಗಾಗಲೇ ದೇಶಾದ್ಯಂತ ಪ್ರಧಾನಿ ಮೋದಿ ಸುಳ್ಳಿನಾಟಕ್ಕೆ ಬ್ರೇಕ್ ಹಾಕುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಸುಳ್ಳಿನ ಭರವಸೆಗಳಿಗೆ ಮತದಾರರು ಸೊಪ್ಪು ಹಾಕುವುದಿಲ್ಲ ಎಂದರು.
ಇದಕ್ಕೂ ಮುನ್ನ ಕಾಲಕಾಲೇಶ್ವರ ವೃತ್ತದಿಂದ ಆರಂಭವಾದ ಬೃಹತ್ ರೋಡ್ ಶೋ ಜೋಡು ರಸ್ತೆ, ಹಿರೇಬಜಾರ್, ಕಟ್ಟಿಬಸವೇಶ್ವರ ರಂಗ ಮಂದಿರ, ಕೊಳ್ಳಿಯವರ ಕತ್ರಿ ಮೂಲಕ ದುರ್ಗಾ ವೃತ್ತದಲ್ಲಿ ಬಹಿರಂಗ ಸಭೆಯಾಗಿ ಮಾರ್ಪಟ್ಟಿತು.
ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ, ಐ.ಎಸ್. ಪಾಟೀಲ, ವೀರಣ್ಣ ಸೊನ್ನದ, ಶಿವರಾಜ ಘೋರ್ಪಡೆ, ಪರಶುರಾಮ ಅಳಗವಾಡಿ, ಯಲ್ಲಪ್ಪ ಬಂಕದ, ಎಸ್.ಎಂ. ಆರಗಿದ್ದಿ, ಎಂ.ವೈ. ಅವಧೂತ್, ಮಾರುತೆಪ್ಪ ಕಲ್ಲೋಡ್ಡರ, ಮುರ್ತುಜಾ ಡಾಲಾಯತ್, ರಾಜು ಸಾಂಗ್ಲಿಕಾರ, ಶಾರದಾ ರಾಠೊಡ, ಸುಮಂಗಲಾ ಇಟಗಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ