ಪಪಂ ಅಧಿಕಾರಿಗಳಿಂದ ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ
Team Udayavani, Apr 27, 2019, 2:19 PM IST
ನರೇಗಲ್ಲ: ಪಟ್ಟಣದ ವಾರ್ಡ್ ನಂ. 3ರ ಆಶ್ರಯ ಕಾಲೋನಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸುವ ಪ್ರಸಂಗವಿತ್ತು. ಇದಕ್ಕೆ ಪ.ಪಂ ಅಧಿಕಾರಿಗಳು ಪರ್ಯಾಯ ವ್ಯವಸ್ಥೆ ಮಾಡಿ, ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದಾರೆ.
ಆಶ್ರಯ ಕಾಲೋನಿಗೆ ಭೇಟಿ ನೀಡಿ ಅಲ್ಲಿರುವ ನೀರಿನ ಸಮಸ್ಯೆ ಮತ್ತು ಕೊಳವಿ ಬಾವಿ ಪರೀಶಿಲನೆ ನಡೆಸಿದ್ದಾರೆ. ಈ ವೇಳೆ ಪ.ಪಂ ಮುಖ್ಯಾಧಿಕಾರಿ ಎಸ್.ಎಸ್. ಹುಲ್ಲಮ್ಮನವರ ಮಾತನಾಡಿ, ಸತತವಾಗಿ ಮಳೆ ಕೈಕೊಟ್ಟಿರುವುದರಿಂದ ಪ್ರತಿಯೊಂದು ಕೊಳವಿ ಬಾವಿಗಳಲ್ಲಿರುವ ನೀರು ಕೆಳಮಟ್ಟಕ್ಕೆ ಹೋಗಿದ್ದು, ಅಂತರ್ಜಲ ಮಟ್ಟ ಕುಸಿದಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಖಾಸಗಿ ಬೋರ್ಗಳನ್ನು ಬಳಕೆ ಮಾಡಿಕೊಂಡು ನಗರದ ನಿವಾಸಿಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ.
ಒಂದು ವಾರದೊಳಗೆ ಆಶ್ರಯ ಕಾಲೋನಿಯಲ್ಲಿರುವ ಕೊಳವಿ ಬಾವಿಯನ್ನು ಆಳಗೊಳಿಸುವ (ಪುನಶ್ಚೇತನ) ಮೂಲಕ ವಾರ್ಡ್ನ ಜನರಿಗೆ ನೀರು ಸರಬರಾಜು ಮಾಡಲಾಗುವುದು. ಈ ಕೊಳವಿ ಬಾವಿಯ ಸುತ್ತಮುತ್ತಲಿನ ಗುಡಿಸಲುಗಳನ್ನು ಬೋರ್ವೆಲ್ ವಾಹನ ಬಂದಾಗ ತೆರವುಗೊಳಿಸಿ ಕೆಲಸಕ್ಕೆ ಸಹಕಾರ ನೀಡಬೇಕು. ಕುಡಿಯುವ ನೀರು ಅಮೂಲ್ಯವಾಗಿದೆ. ಅದನ್ನು ಮಿತವಾಗಿ ಬಳಸಬೇಕು. ಪ್ರತಿ ಜೀವಿಗೂ ಬದುಕಲು ನೀರು ಬೇಕು. ಹೀಗಾಗಿ ಜಲ ಮೂಲಗಳ ಸಂರಕ್ಷಣೆ ಮಾಡುವುದು ಹಾಗೂ ನೀರು ಪೋಲು ಆಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಕುರಿತು ಸಹಾಯವಾಣಿ ಸಂಖ್ಯೆ 08381-268228 ಕರೆ ಮಾಡಿ ದೂರು ನೀಡಬಹುದು ಎಂದು ತಿಳಿಸಿದರು.
ಪ.ಪಂ ಸಹಾಯಕ ಅಭಿಯಂತರ ವಿ.ಪಿ. ಕಾಟೇವಾಲೆ, ಇಸ್ಮಾಯಿಲ್ ಮನಿಯಾರ, ನಾಗಪ್ಪ ಮಾರನಬಸರಿ, ಮಲ್ಲಯ್ಯ ಗುರುವಡೇಯವರ ಇದ್ದರು.
ಪಟ್ಟಣದ ವಾರ್ಡ್ ನಂ. 3ರ ಆಶ್ರಯ ಕಾಲೋನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಉದಯವಾಣಿ ಪತ್ರಿಕೆಯಲ್ಲಿ ಏ. 25ರಂದು ನೀರಿನ ಸಾಲು-ಕೇಳುವಿರಾ ಗೋಳು ಎಂಬ ತಲೆ ಬರಹದೊಂದಿಗೆ ಸಚಿತ್ರ ವರದಿ ಪ್ರಕಟಗೊಂಡಿತ್ತು. ಇದೀಗ ವರದಿಗೆ ಸ್ಪಂದಿಸಿದ ಪ.ಪಂ ಅಧಿಕಾರಿಗಳು ಆಶ್ರಯ ಕಾಲೋನಿಗೆ ಭೇಟಿ ನೀಡಿ ಅಲ್ಲಿರುವ ನೀರಿನ ಸಮಸ್ಯೆ ಮತ್ತು ಕೊಳವಿ ಬಾವಿ ಪರೀಶಿಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ