ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸದಿದ್ದರೆ ಕ್ರಮ


Team Udayavani, Jun 4, 2019, 8:04 AM IST

gadaga tdy 2

ರೋಣ: ಪಟ್ಟಣದ ತಾಪಂ ಸಭಾಭವನದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ರೋಣ: ಪರಿಸರ ಸಂರಕ್ಷಣೆ, ಮಳೆ ನೀರು ಸಂಗ್ರಹ ಸೇರಿದಂತೆ ಅನೇಕ ಮಹತ್ವದ ಉದ್ದೇಶಗಳನ್ನು ಹೊಂದಿರುವ ನದಿ ಪುನಶ್ಚೇತನ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಮಾಡಿ ಮುಗಿಸದಿದ್ದರೆ ಪಿಡಿಒ ಹಾಗೂ ತಾಂತ್ರಿಕ ಸಹಾಯಕರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕಳಕಪ್ಪ ಬಂಡಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಪಟ್ಟಣದ ತಾಪಂ ಸಭಾಭವಣದಲ್ಲಿ ಸೋಮವಾರ ಜರುಗಿದ ನರೇಗ ಯೋಜನೆಯ ನದಿ ಪುನಶ್ಚೇತ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ನಡೆಸಿ ಅವರು ಮಾತನಾಡಿದರು. ತಾಲೂಕಿನ ವಿವಿಧ ಗ್ರಾಪಂಗಳಲ್ಲಿ ಇಲ್ಲಿಯವರೆ ನಿಗದಿತ ಗುರಿ ಮುಟ್ಟದೆ ಇರುವ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ನಿಮ್ಮ ಕೆಲಸಗಳನ್ನು ಮಾಡಲು ಪ್ರಧಾನ ಮಂತ್ರಿ ಬರಬೇಕೊ ಅಥವಾ ಮುಖ್ಯಮಂತ್ರಿಗಳು ಬರಬೇಕೋ, ಇಲ್ಲ ನೀವೆ ಮಾಡಿ ಮುಗಿಸುತ್ತೀರಾ? ಎಂದು ಪಶ್ನಿಸಿದರು.

ಸರ್ಕಾರದ ಯೋಜನೆಗಳನ್ನು ಜಾರಿಗೆ ತರಲು ಆಗುವುದಿಲ್ಲ ಎಂದರೆ ಯಾಕೆ ಕೆಲಸ ಮಾಡಬೇಕು.ನಿಮಗೆ ನೀಡಿದ 100 ಗುರಿಯಲ್ಲಿ ಕೇವಲ 20 ಕಾಮಗಾರಿಗಳನ್ನು ಮಾಡಿರುವಿರಾ ಎಂದರೆ ನೀವು ಏನು ಮಾಡುತ್ತಿದ್ದಿರಾ ಎಂದು ಹಿರೇಹಾಳ ಪಿಡಿಒ ಬಸವರಾಜ ದಳವಾಯಿ ಹಾಗೂ ಸಂತೋಷ ಪಾಟೀಲ ಅವರಿಗೆ ಶಾಸಕ ತರಾಟೆಗೆ ತೆಗೆದುಕೊಂಡರು.

ನೇರವಾಗಿ ಇಲಾಖೆಯಿಂದ ಪರೀಕ್ಷೆ ಬರೆದು ನೇಮಕವಾಗಿರುವ ಪಿಡಿಒಗಳು ಸರಿಯಾಗಿ ಕೆಲಸ ಮಾಡದೆ, ನರೇಗ ಯೋಜನೆಯ ಮಹತ್ವ ಕಳೆಯುತ್ತಿದ್ದಿರಿ. ಬಿಲ್ ಕಲೆಕ್ಟರ್‌ ಆಗಿ ಕಾರ್ಯನಿರ್ವಹಿಸಿ ಈಗ ಪಿಡಿಒ ಆದವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಗದಗ ಉಪ ಕಾರ್ಯದರ್ಶಿ ಪ್ರಾಣೇಶ್‌ ರಾವ್‌ ಹೇಳಿದರು.

ಜುಲೈ ಮೊದಲನೇ ವಾರದಲ್ಲಿ ಮತ್ತೆ ಸಭೆ ತೆಗೆದುಕೊಳ್ಳುತ್ತೇನೆ. ಅಷ್ಟರಲ್ಲಿ ನಿಮಗೆ ನೀಡಿರುವ ಕೆಲಸ ಮುಗಿಸಬೇಕು. ಇಲ್ಲವಾದರೆ ತೊಂದರೆ ಅನುಭವಿಸಬೇಕಾಗಿತ್ತದೆ ಎಂದು ಎಚ್ಚರಿಕೆ ನೀಡಿದರು.

ನೂರು ಯೋಜನೆಗಳಿಗೆ ಸಮವಾದ ಯೋಜನೆ ನರೇಗಾ. ಈ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಉತ್ತಮ ಜಲ ಸಂರಕ್ಷಣೆ, ಮಣ್ಣಿನ ಸವಕಳಿ ತಡೆಗಟ್ಟಲು ಕ್ರಮ ಕೈಗೊಳ್ಳಬಹುದು. ಜೊತೆಗೆ ಬರಗಾಲ ಬರಲು ಮುಖ್ಯ ಕಾರಣಗಳೆಂದರೆ ಅರಣ್ಯ ನಾಶ, ಮಣ್ಣಿನ ಸವಕಳಿ. ಇಂತಹ ಸಮಸ್ಯೆಗಳನ್ನು ಹೋಗಲಾಡಿಸುವ ಶಕ್ತಿ ನರೇಗ ಯೋಜನೆಯ ನದಿ ಪುನಶ್ವೇತನ ಕಾರ್ಯಕ್ರಮಕ್ಕೆ ಇದೆ. ಅದನ್ನು ಸರಿಯಾಗಿ ಎಲ್ಲ ಅಧಿಕಾರಿಗಳು ಅನುಷ್ಠಾನಗೊಳಿಸಬೇಕು ಎಂದು ಗದಗ ಉಪ ಕಾರ್ಯದರ್ಶಿ ಪ್ರಾನೇಶ ರಾವ್‌ ಅಧಿಕಾರಿಗಳಿಗೆ ಹೇಳಿದರು.

ತಾಪಂ ಇಒ ಎಂ.ವಿ. ಚಳಗೇರಿ, ಎಸ್‌.ವೈ. ಜಿಗಣಿ, ಸಂತೋಷ ಪಾಟೀಲ, ಎಂ.ಎಂ. ತರಫದಾರ ಸೇರಿದಂತೆ ತಾಲೂಕಿನ ವಿವಿಧ ಪಿಡಿಒ ಹಾಗೂ ತಾಂತ್ರಿಕ ಸಹಾಯಕರು ಇದ್ದರು.

ಜೂ. 30 ರೊಳಗೆ ಮಾನವ ದಿನಗಳನ್ನು ಬಳಸಿಕೊಂಡು ಕೆಲಸ ಮಾಡದಿದ್ದರೆ ಅವರಿಗೆ ಆ ತಿಂಗಳ ಸಂಬಳ ನೀಡಿಬೇಡಿ. ಇಂಗು ಗುಂಡಿ ಕಾಮಗಾರಿಗಳ ಎಂ.ಐ.ಎಸ್‌ ಮಾಡದ ಪರಿಣಾಮ ಜನರು ನಿಮ್ಮ ಹತ್ತಿರ ತಿರುಗಾಡಬೇಕಾ? ಒಂದೊಮ್ಮೆ ಜನ ನಿಮ್ಮ ಮೇಲೆ ತಿರುಗಿ ಬಿದ್ದರೆ ಯಾರು ಏನು ಮಾಡಲಿಕ್ಕೆ ಆಗುವುದಿಲ್ಲ. ಜನರು ತಮ್ಮ ತಾಳ್ಮೆ ಕಳೆದುಕೊಳ್ಳುವ ಮುನ್ನ ಅವರ ಕೆಲಸ ಮಾಡಿಕೊಡಿ.•ಕಳಕಪ್ಪ ಬಂಡಿ, ಶಾಸಕ

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.