ಅಡ್ನೂರ ಪಂಚಾಕ್ಷರ ಶ್ರೀಗಳು ಲಿಂಗೈಕ್ಯ
Team Udayavani, Oct 16, 2020, 3:03 PM IST
ಗದಗ: ಅಡ್ನೂರು ಬೃಹನ್ಮಠದ ಪಟ್ಟಾಧ್ಯಕ್ಷ ಶ್ರೀ ಘನ ಚಕ್ರವರ್ತಿ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ (70) ಶುಕ್ರವಾರ ನಗರದಲ್ಲಿ ಲಿಂಗೈಕ್ಯರಾದರು.
ಕೋವಿಡ್ ಸೋಂಕು ಕಂಡು ಬಂದಿದ್ದರಿಂದ ಇತ್ತೀಚೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದ ಕಾರಣ ಶುಕ್ರವಾರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಶಿವನಪಾದ ಸೇರಿದರು.
ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಅಡ್ನೂರು, ಕೊಪ್ಪಳ ಜಿಲ್ಲೆಯ ರಾಜೂರು ಹಾಗೂ ಹಾಗೂ ಗದಗ ನಗರದ ಹಾತಲಗೇರಿ ರಸ್ತೆಯಲ್ಲಿರುವ ಬೃಹನ್ಮಠದ ಪಟ್ಟಾಧ್ಯಕ್ಷರಾಗಿದ್ದರು. ಲಿಂ|ಪಂ|ಪುಟ್ಟರಾಜ ಕವಿ ಗವಾಯಿಗಳಿಗೆ ಕ್ರಿಯಾಮೂರ್ತಿಗಳಾಗಿದ್ದರು. ಪಂ|ಪುಟ್ಟರಾಜ ಕವಿ ಗವಾಯಿಗಳು ಪ್ರತಿನಿತ್ಯ ಶಿವನ ಪೂಜೆ ನೆರವೇರಿಸಿ, ಪಂಚಾಕ್ಷರ ಸ್ವಾಮೀಜಿಗಳಿಂದ ಪಾದೋದಕ ಸ್ವೀಕರಿಸಿದ ಬಳಿಕವೇ ಪ್ರಸಾದ ಸೇವಿಸುತ್ತಿದ್ದರು. ಶ್ರೀಗಳ ಅಗಲಿಕೆಯಿಂದ ಮೂರು ಮಠಗಳ ಅಪಾರ ಭಕ್ತ ಸಮೂಹ ಶೋಕ ಸಾಗರದಲ್ಲಿ ಮುಳುಗಿದೆ.
ಇದನ್ನೂ ಓದಿ:ಪ್ರವಾಹದ ನೀರಿನಿಂದಾಗಿ ಮರವೇರಿ ಕುಳಿತಿದ್ದ ಶತಾಯುಷಿ ವೃದ್ಧೆ, ಮಗನ ರಕ್ಷಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು