ಮುಂದುವರಿದ ಅಧಿಕಾರ ಹಂಚಿಕೆ ಸೂತ್ರ!

•ಆರ್‌ಡಿಪಿಆರ್‌ ಕಾಯ್ದೆಗೆ ಸಿಗುತ್ತಿಲ್ಲ ಮನ್ನಣೆ •ಜಿ.ಪಂ ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ ಹಂಗಾಮಿ ಅಧ್ಯಕ್ಷೆ

Team Udayavani, Sep 4, 2019, 10:12 AM IST

gadaga-tdy-1

ಗದಗದ: ಜಿ.ಪಂ ಉಪಾಧ್ಯಕ್ಷೆ ಶಕುಂತಲಾ ಆರ್‌.ಮೂಲಿಮನಿ ಅವರಿಗೆ ಅಧಿಕಾರ ಹಸ್ತಾಂತರಿಸಿದ ಎಸ್‌.ಪಿ.ಬಳಿಗಾರ.

ಗದಗ: ಜಿಲ್ಲಾ ಪಂಚಾಯತ್‌ ವ್ಯವಸ್ಥೆಯಲ್ಲಿ ಕುದುರೆ ವ್ಯಾಪಾರಕ್ಕೆ ಕಡಿವಾಣ ಹಾಕುವುದರೊಂದಿಗೆ ಆಡಳಿತ ವ್ಯವಸ್ಥೆ ಗಟ್ಟಿಗೊಳಿಸುವ ಮಹದಾಸೆಯಿಂದ ಹಿಂದಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವರಾಗಿದ್ದ ಎಚ್.ಕೆ. ಪಾಟೀಲ ಆರ್‌ಡಿಪಿಆರ್‌ ಕಾಯ್ದೆಗೆ ತಿದ್ದುಪಡಿ ತಂದಿದ್ದರು. ಆದರೆ, ಈ ಕಾಯ್ದೆಯ ಮಹದಾಸೆಗೆ ಎಚ್ಕೆ ಅವರ ತವರು ಜಿಲ್ಲೆಯಲ್ಲಿ ಸ್ವಪಕ್ಷೀಯರಿಂದಲೇ ಎಳ್ಳೆನೀರು ಬಿಡುತ್ತಿರುವುದು ವಿಪರ್ಯಾಸ!

ಹಿಂದಿನ ಕಾಂಗ್ರೆಸ್‌ ಸರಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾಗಿದ್ದ ಎಚ್.ಕೆ. ಪಾಟೀಲ ಅನುಷ್ಠಾನಕ್ಕೆ ತಂದ ಮಹತ್ವದ ಕಾರ್ಯಗಳಲ್ಲಿ ಆರ್‌ಡಿಪಿಆರ್‌ ಕಾಯ್ದೆ ತಿದ್ದುಪಡಿಯೂ ಒಂದು. ಈ ತಿದ್ದುಪಡಿಯಡಿ ದೇಶದ ಮೊಟ್ಟ ಮೊದಲ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯ ಸ್ಥಾಪನೆಗೊಂಡಿದೆ. ಅದರಂತೆ ಜಿ.ಪಂ, ತಾ.ಪಂ. ಹಾಗೂ ಗ್ರಾ.ಪಂ. ಅಧ್ಯಕ್ಷರ ಅಧಿಕಾರವಧಿಯನ್ನು ಐದು ವರ್ಷಗಳಿಗೆ ವಿಸ್ತರಿಸಿ, ಜಿ.ಪಂ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನವನ್ನು ಕಲ್ಪಿಸಿದ್ದರು.

ಈ ಕಾಯ್ದೆ ತಿದ್ದುಪಡಿ ಬಳಿಕ ನಡೆದ ಜಿ.ಪಂ. ಚುನಾವಣೆಯಲ್ಲಿ ಜಿಲ್ಲೆಯ 19 ಸ್ಥಾನಗಳ ಪೈಕಿ ಕಾಂಗ್ರೆಸ್‌ 11 ಸ್ಥಾನಗಳನ್ನು ಬಾಚಿಕೊಂಡು, ಅಧಿಕಾರಕ್ಕೇರಿದೆ. ಆದರೆ, ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಸದಸ್ಯರಲ್ಲೇ ತೀವ್ರ ಪೈಪೋಟಿ ಇದೆ. ಸದಸ್ಯರ ಓಲೈಕೆಗಾಗಿ ಒಬ್ಬೊಬ್ಬರಿಗೆ 20, 10 ತಿಂಗಳು ಅಧಿಕಾರ ನೀಡುವ ಪರಿಹಾರ ಸೂತ್ರ ಕಂಡುಕೊಂಡಿದೆ. ಆದರೆ, ಇದು ತಮ್ಮದೇ ಸರಕಾರ ಅನುಷ್ಠಾನಕ್ಕೆ ತಂದಿರುವ ಕಾಯ್ದೆಯನ್ನು ಮೂಲೆ ಗುಂಪು ಮಾಡುತ್ತಿದೆ. 8-10 ತಿಂಗಳಿಗೆ ಒಬ್ಬರಂತೆ ಜಿ.ಪಂ ಅಧ್ಯಕ್ಷರ ಬದಲಾವಣೆಯಿಂದ ಆಡಳಿತದಲ್ಲಿ ಹಿಡಿತ ಸಿಗದು ಎಂಬ ವಿಪಕ್ಷಗಳ ನಾಯಕರ ಟೀಕೆಗೆ ಗುರಿಯಾಗುತ್ತಿದೆ.

ಮತ್ತೆ ತ್ರಿಕೋನ ಸ್ಪರ್ಧೆ: ಎಸ್‌.ಪಿ.ಬಳಿಗಾರ ಅವರ ರಾಜೀನಾಮೆಯಿಂದ ತೆರವಾಗಿರುವ ಅಧ್ಯಕ್ಷ ಸ್ಥಾನಕ್ಕೇರಲು ಲಕ್ಕುಂಡಿ ಕ್ಷೇತ್ರದ ಸಿದ್ದು ಪಾಟೀಲ, ಕೊಣ್ಣೂರು ಕ್ಷೇತ್ರದ ರಾಜೂಗೌಡ ಕೆಂಚಗೌಡ್ರ ಹಾಗೂ ಹಿರೇವಡ್ಡಟ್ಟಿ ಕ್ಷೇತ್ರದ ಈರಪ್ಪ ಈಶ್ವರಪ್ಪ ನಾಡಗೌಡ್ರ ಅವರು ಪ್ರಮುಖ ಆಕಾಂಕ್ಷಿಗಳು ಎಂಬ ಹೆಸರು ಕೇಳಿ ಬರುತ್ತಿವೆ. ಈ ಪೈಕಿ ಯಾರಿಗೆ ಅಧ್ಯಕ್ಷ ಗಾದಿ ಒಲಿಯುತ್ತದೆ ಎಂಬುದನ್ನು ಇನ್ನಷ್ಟೇ ಕಾದು ನೋಡಬೇಕಿದೆ.

 

•ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.