ವಿಶಿಷ್ಟ ಕೌಶಲ ವೃದ್ಧಿಸಿಕೊಳ್ಳಲು ಸಲಹೆ
ತೋಂಟದಾರ್ಯ ಕಾಲೇಜಿನಲ್ಲಿ ಕ್ರೀಡಾ-ಸಾಂಸ್ಕೃತಿಕ ಚಟುವಟಿಕೆಗೆ ಚಾಲನೆ
Team Udayavani, Aug 11, 2019, 12:13 PM IST
ಗದಗ: ಕೆಎಲ್ಇ ಸಂಸ್ಥೆಯ ಜ| ತೋಂಟದಾರ್ಯ ಮಹಾವಿದ್ಯಾಲಯದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರೊ| ಎಸ್.ವಿ. ಸಂಕನೂರ ಮಾತನಾಡಿದರು.
ಗದಗ: ವಿದ್ಯಾರ್ಥಿಗಳು ಜೀವನದ ಉದ್ದಕ್ಕೂ ಸ್ವಯಂ ಪ್ರೇರಣೆ ಹಾಗೂ ಕ್ರಿಯಾಶೀಲತೆಯಿಂದ ಎಲ್ಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಇದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಲು ಸಹಾಯಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರೊ| ಎಸ್.ವಿ. ಸಂಕನೂರ ಹೇಳಿದರು.
ನಗರದ ಕೆಎಲ್ಇ ಸಂಸ್ಥೆಯ ಜಗದ್ಗುರು ತೋಂಟದಾರ್ಯ ಮಹಾವಿದ್ಯಾಲಯದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕೇವಲ ಹೆಚ್ಚು ಅಂಕ ಪಡೆಯಬೇಕೆಂಬ ಹುಮ್ಮಸ್ಸು ಹೊಂದದೇ ತಮ್ಮ ಆಸಕ್ತಿದಾಯಕ ಕ್ಷೇತ್ರಗಳಿಗೆ ಅನುಗುಣವಾಗಿ ಪಠ್ಯದೊಂದಿಗೆ ವಿಶಿಷ್ಟ ಕೌಶಲ ವೃದ್ಧಿಸಿಕೊಳ್ಳಬೇಕು. ಉತ್ಸಾಹದಿಂದ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಾಗುತ್ತದೆ. ಇದಕ್ಕಿಂತ ಮಿಗಿಲಾಗಿ ಭಾವನಾತ್ಮಕ ಬೆಳವಣಿಗೆಯೂ ಹೆಚ್ಚುತ್ತದೆ. ಆಗಮಾತ್ರ ಸರ್ವತೋಮುಖ ಅಭಿವೃದ್ಧಿಯಾಗಲು ಸಾಧ್ಯ ಎಂದರು.
ಯುಪಿಎಸ್ಸಿಯಲ್ಲಿ ದೇಶಕ್ಕೆ 17ನೇ ರ್ಯಾಂಕ್ ಗಳಿಸಿದ ರಾಹುಲ್ ಸಂಕನೂರ ಮಾತನಾಡಿ, ಹಳ್ಳಿಯ ಯುವಜನರು ಕೀಳರಿಮೆ ತೊರೆದು ಆತ್ಮವಿಶ್ವಾಸದಿಂದ ಮುನ್ನುಗ್ಗಬೇಕು ಎಂದರು.
ಪದವಿ ಕಾಲೇಜಿನ ಪ್ರಾಚಾರ್ಯ ಸಿ. ಲಿಂಗಾರೆಡ್ಡಿ ಮಾತನಾಡಿ, ಬಡತನ, ಹಳ್ಳಿ ಬದುಕು ಸಾಧನೆಗೆ ಅಡೆತಡೆಯಾಗದು ಎಂದರು. ಪ್ರೊ| ಎಸ್.ಎಂ. ಬೆಂಗಳೂರ, ಶರಣಪ್ಪ ಸಂಕನೂರ, ಎಸ್.ಪಿ. ಸಂಶಿಮಠ, ವೀರೇಶ ಕೂಗು, ಅಶೋಕ ನಿಲೂಗಲ್ ಇದ್ದರು. ಪ್ರೊ| ಎಸ್.ಜೆ. ಹಿರೇಮಠ ಸ್ವಾಗತಿಸಿದರು. ಪ್ರೊ| ಎಂ.ಎಂ. ನರಗುಂದ ಪರಿಚಯಿಸಿದರು. ರಘುವೀರ ಕಲ್ಬುರ್ಗಿ ವಂದಿಸಿದರು. ಪ್ರೊ| ಶ್ವೇತಾ ಗುಂಡಾ ಹಾಗೂ ಪ್ರೊ| ಎಸ್.ಬಿ. ಹಾವೇರಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?