ನರಗುಂದ ಗುಡ್ಡದ ಸುತ್ತ ಅರಣ್ಯೀಕರಣ; ಸಚಿವ ಸಿ.ಸಿ.ಪಾಟೀಲ

ಕಚ್ಚಾ ರಸ್ತೆಯನ್ನು ಸುಧಾರಣೆ ಮಾಡಿ ಪ್ರವಾಸಿಗರ ಸುಗಮ ಸಂಚಾರಕ್ಕೆ ಪ್ರಯತ್ನ ಮಾಡುತ್ತೇವೆ

Team Udayavani, Jul 9, 2022, 5:58 PM IST

ನರಗುಂದ ಗುಡ್ಡದ ಸುತ್ತ ಅರಣ್ಯೀಕರಣ; ಸಚಿವ ಸಿ.ಸಿ.ಪಾಟೀಲ

ನರಗುಂದ: ಮಲಗಿದ ಸಿಂಹದಂತೆ ಗೋಚರಿಸುವ ಪಟ್ಟಣದ ಐತಿಹಾಸಿಕ ಹಿನ್ನೆಲೆಯ ಗುಡ್ಡದಲ್ಲಿ ಒಂದು ಕಾಲದಲ್ಲಿ ಸೀತಾ ಫಲ ಗಿಡಗಳು ಕಂಗೊಳಿಸುತ್ತಿದ್ದವು. ಇದೀಗ ಮತ್ತೆ ಆ ವೈಭವ ಮರುಕಳಿಸುವ ಪ್ರಯತ್ನದೊಂದಿಗೆ ಗುಡ್ಡದ ಸುತ್ತ ಇನ್ನೂ ಹೆಚ್ಚೆಚ್ಚು ಹಸಿರು ಬೆಳೆಸುವ ಮೂಲಕ ಅರಣ್ಯೀಕರಣ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

ಶುಕ್ರವಾರ ಪಟ್ಟಣದ ಗುಡ್ಡದ ವಾರೆಯಲ್ಲಿರುವ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಗದಗ ಪ್ರಾದೇಶಿಕ ಅರಣ್ಯ ವಿಭಾಗ ಮತ್ತು ಸಾಮಾಜಿಕ ಅರಣ್ಯ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ವನಮಹೋತ್ಸವ-2022ರ ಕಾರ್ಯಕ್ರಮಕ್ಕೆ ಸಸಿ ನೆಟ್ಟು ನೀರುಣಿಸುವ ಮೂಲಕ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ನಾವು ಜೀವಿಸಲು ಅಗತ್ಯವಾಗಿ ಬೇಕಾದ ಆಮ್ಲಜನಕ ಪಡೆಯಲು ಹಸಿರು ಬೆಳೆಸಲೇಬೇಕು. ಆದರೆ, ಇಂದು ಗೃಹ ಬಳಕೆ ವಸ್ತುಗಳಿಗಾಗಿ ಗಿಡಗಳನ್ನು ಕಡಿಯುವ ಸಂದರ್ಭದಲ್ಲಿ ಮರಳಿ ಸಸಿ ನೆಟ್ಟು ಬೆಳೆಸುವುದು ವಿರಳವಾಗುತ್ತಿದೆ. ಹಿಂದೆ ನಾನು ಅರಣ್ಯ ಖಾತೆ ಸಚಿವನಾಗಿದ್ದಾಗ ಇಲ್ಲಿ ಟ್ರೀ ಪಾರ್ಕ್‌ ಸ್ಥಾಪಿಸಲು ನೆಟ್ಟ ಸಸಿಗಳು ಇಂದು ಹೆಮ್ಮರವಾಗಿ ಬೆಳೆದಿರುವುದು ನೋಡಿ ಬಹಳ ಸಂತಸವೆನಿಸುತ್ತಿದೆ. ಪರಿಶ್ರಮದಿಂದ ಸಸ್ಯೋದ್ಯಾನ ಸುಂದರಗೊಳಿಸಿದ ಅರಣ್ಯ ಇಲಾಖೆ
ಅಧಿಕಾರಿಗಳು, ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ ಎಂದು ಸಚಿವ ಸಿ.ಸಿ.ಪಾಟೀಲ ಹೇಳಿದರು.

ಗುಡ್ಡದ ಮೇಲಿರುವ ಭೋರೂಕಾ ಪವರ್‌ ವಿಂಡ್‌ ಅವರಿಂದ ಸಿಎಸ್‌ಆರ್‌ ಫಂಡ್‌ ಇದ್ದರೆ ಅದರ ಮೂಲಕ ಗುಡ್ಡದ ಪ್ರದೇಶ ಇನ್ನೂ ಹೆಚ್ಚೆಚ್ಚು ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ. ಸಸ್ಯೋದ್ಯಾನಕ್ಕೆ ಬರಬೇಕಾದರೆ ಇರುವ 1 ಕಿಮೀ ಕಚ್ಚಾ ರಸ್ತೆಯನ್ನು ಸುಧಾರಣೆ ಮಾಡಿ ಪ್ರವಾಸಿಗರ ಸುಗಮ ಸಂಚಾರಕ್ಕೆ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಪ್ರಕಾಶ ಹಾದಿಮನಿ, ಚಂದ್ರಗೌಡ ಪಾಟೀಲ, ರಾಚನಗೌಡ ಪಾಟೀಲ, ಹುಸೇನಸಾಬ ಗೋಟೂರ, ಪ್ರಶಾಂತ ಜೋಶಿ, ಸುನೀಲ ಕುಷ್ಟಗಿ, ಟಿಎಪಿಸಿಎಂಎಸ್‌ ಅಧ್ಯಕ್ಷ ಅಜ್ಜಪ್ಪ ಹುಡೇದ, ಬಸು ಪಾಟೀಲ, ಸಿದ್ದಪ್ಪ ಯಲಿಗಾರ, ಹನುಮಂತ ಹವಾಲ್ದಾರ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ದೀಪಿಕಾ ಭಾಜಪೈ, ಆರ್‌.ಎಸ್‌ .ನಾಗಶೆಟ್ಟಿ, ಸಹಾಯಕ ಉಪಅರಣ್ಯ ಸಂರಕ್ಷಣಾಧಿಕಾರಿಗಳಾದ ವಿ.ಎಚ್‌.ಪರಿಮಳ, ಸಂಗಮೇಶ
ಪ್ರಕಾಕರ, ವಲಯ ಅರಣ್ಯಾಧಿ ಕಾರಿಗಳಾದ ರಾಜು ಗೋಂದಕರ, ಸ್ನೇಹಾ ಕೊಪ್ಪಳ, ಸತೀಶ ಮಾಲಾಪೂರ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.

ಗುಡ್ಡದ ಸುತ್ತ ಬಳ್ಳಾರಿ ಜಾಲಿ ತೀವ್ರಗತಿಯಲ್ಲಿ ಹಬ್ಬುತ್ತಿರುವುದರಿಂದ ಸೀತಾಫಲ ಫಸಲು ಕಣ್ಮರೆಯಾಗಿತ್ತು. ಇದೀಗ ಅರಣ್ಯ ಇಲಾಖೆಯಿಂದ ಗುಡ್ಡದ ಎರಡೂವರೆ ಹೆಕ್ಟೇರ್‌ ಪ್ರದೇಶದಲ್ಲಿ ಸೀತಾಫಲ ಬೆಳೆಸಲಾಗಿದ್ದು, ಇನ್ನೂ ಹೆಚ್ಚು ಸೀತಾಫಲ ಬೆಳೆಸಲಾಗುವುದು.
ಸಿ.ಸಿ.ಪಾಟೀಲ,
ಲೋಕೋಪಯೋಗಿ ಸಚಿವರು

ಟಾಪ್ ನ್ಯೂಸ್

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.