ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರ

ದೇಗುಲಗಳ ಜಗುಲಿ-ಅರಳಿಕಟ್ಟೆ-ಬಸ್‌ ನಿಲ್ದಾಣ-ಹೋಟೆಲ್‌ನಲ್ಲಿ ಚುನಾವಣೆಯದ್ದೇ ಮಾತು,ಸ್ಟ್ರಾಂಗ್‌ರೂಂಗೆ ಸರ್ಪಗಾವಲು

Team Udayavani, Dec 24, 2020, 3:09 PM IST

ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರ

ಗದಗ: ಜಿಲ್ಲೆಯ ಮೂರು ತಾಲೂಕುಗಳಲ್ಲಿ ಮಂಗಳವಾರ ನಡೆದ ಮೊದಲನೇ ಹಂತದ ಗ್ರಾ.ಪಂ. ಚುನಾವಣೆಯಲ್ಲಿ ಒಟ್ಟು 1,96,863 ಮತದಾರರು ಹಕ್ಕು ಚಲಾಯಿಸಿದ್ದು, ಶೇ.79.43 ರಷ್ಟು ಮತದಾನ ದಾಖಲಾಗಿದೆ. ಮೊದಲ ಹಂತದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 2216 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದ್ದು, ಗ್ರಾಮೀಣ ಭಾಗದಲ್ಲಿ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರ ಶುರುವಾಗಿದೆ.

ಜಿಲ್ಲೆಯ 3 ತಾಲೂಕುಗಳಲ್ಲಿ 1,25,209 ಪುರುಷರು, 1,22,625 ಮಹಿಳೆಯರು ಸೇರಿದಂತೆಒಟ್ಟು 2,47,834 ಮತದಾರರಿದ್ದಾರೆ. ಈ ಪೈಕಿ ಗದಗ ತಾಲೂಕಿನಲ್ಲಿ 54,819 ಪುರುಷರು,51,347 ಮಹಿಳೆಯರು ಸೇರಿ 1,06,166 ಜನ ಮತ ಚಲಾಯಿಸಿದ್ದಾರೆ. ಲಕ್ಷ್ಮೇಶ್ವರದಲ್ಲಿ 22,040 ಪುರುಷರು, 20,442 ಮಹಿಳೆಯರು ಸೇರಿ 42,482, ಶಿರಹಟ್ಟಿಯಲ್ಲಿ 25,139 ಪುರುಷರು, 23,076 ಮಹಿಳೆಯರು ಸೇರಿ 48,215 ಮತದಾರರು ಮತ ಚಲಾಯಿಸಿದ್ದು, ಒಟ್ಟಾರೆಯಾಗಿ 1,96,863 ಮಂದಿಮತದಾನ ಮಾಡಿದ್ದಾರೆ. ಇದು ಕಳೆದ ಬಾರಿಗಿಂತ ಶೇ.76 ರಷ್ಟು ಮತದಾನ ದಾಖಲಾಗಿದ್ದು, ಈ ಬಾರಿಶೇ.4 ರಷ್ಟು ಹೆಚ್ಚಿದೆ ಎನ್ನಲಾಗಿದೆ. ಮತದಾನದಬಳಿಕ ಆಯಾ ತಾಲೂಕಿನ ಸ್ಟ್ರಾಂಗ್‌ ರೂಂಗಳಲ್ಲಿ ಮತಪೆಟ್ಟಿಗೆಗಳನ್ನು ಭದ್ರಪಡಿಲಾಗಿದೆ.

ಅಭ್ಯರ್ಥಿಗಳ ತೀರ್ಥಯಾತ್ರೆ: ಗ್ರಾ.ಪಂ. ಚುನಾವಣೆ ಘೋಷಣೆಯಾಗುವುದಕ್ಕೂ ಮುನ್ನವೇ ಪಂಚಾಯತಿ ರಾಜಕೀಯದಲ್ಲಿ ಬ್ಯುಸಿಯಾಗಿದ್ದಅಭ್ಯರ್ಥಿಗಳು ಹಾಗೂ ಮುಖಂಡರು ಚುನಾವಣೆ ಮುಗುಯುತ್ತಿದ್ದಂತೆ ಕೆಲವರು ಧರ್ಮಸ್ಥಳ, ಬದಾಮಿ ಬನಶಂಕರಿ, ಸವದತ್ತಿ ಯಲ್ಲಮ್ಮದೇಗುಲಗಳತ್ತ ಪ್ರಯಾಣ ಬೆಳೆಸಿದ್ದಾರೆ. ಈ ಬಾರಿಯ ಪಂಚಾಯಿತಿ ಚುನಾವಣೆಯಲ್ಲಿ ವಿಜಯ ಮಾಲೆಗಾಗಿ ದೇವರಲ್ಲಿ ಪ್ರಾರ್ಥಿಸಿ, ವಿಶೇಷ ಪೂಜೆಗಳನ್ನು ಸಲ್ಲಿಸುತ್ತಿದ್ದಾರೆ. ಇನ್ನೂ ಕೆಲವರು ಮನೆಯಲ್ಲೇ ಉಳಿದುಕೊಂಡು ವಿಶ್ರಾಂತಿ ಪಡೆಯುತ್ತಿದ್ದಾರೆ. ಬೆಂಬಲಿತ ಪಕ್ಷಗಳ ನಾಯಕರ ಬಳಿಗೆ ತೆರಳಿ, ಚುನಾವಣೆ ಹಾಗೂ ಮತದಾನದ ವರದಿ ಒಪ್ಪಿಸುತ್ತಿದ್ದಾರೆ.

ಸೋಲು-ಗೆಲುವಿನ ಲೆಕ್ಕಾಚಾರ: ಮೊದಲ ಹಂತದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆಗೆ ಮತದಾನ ಪ್ರಕ್ರಿಯ ಪೂರ್ಣಗೊಳ್ಳುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ತಮ್ಮ ಗ್ರಾ.ಪಂ.ಗಳಿಗೆ ಸ್ಪ ರ್ಧಿಸಿರುವ ಅಭ್ಯರ್ಥಿಗಳ ಸೋಲು- ಗೆಲುವಿನ ಚರ್ಚೆ ಜೋರಾಗಿದೆ. ಗ್ರಾಮದ ದೇವಸ್ಥಾನಗಳ ಜಗುಲಿ, ಅರಳಿ ಮರದ ಕಟ್ಟೆ, ಬಸ್‌ ನಿಲ್ದಾಣ ಹಾಗೂ ಚಹ ಅಂಗಡಿಗಳಲ್ಲಿ ಹಳ್ಳಿ ರಾಜಕೀಯದ ಫಲಿತಾಂಶದ ಬಗ್ಗೆ ಭವಿಷ್ಯ ನುಡಿಯುತ್ತಿದ್ದಾರೆ.

ಇನ್ನೂ ಕೆಲವರು ಅಭ್ಯರ್ಥಿಗಳು ಬೆಂಬಲಿತ ಪಕ್ಷ, ಜಾತಿ ಹಾಗೂ ಸ್ಥಳೀಯ ಪ್ರಭಾವವನ್ನು ಆಧರಿಸಿ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ತಮ್ಮ ನೆಚ್ಚಿನಅಭ್ಯರ್ಥಿ ಹಾಗೂ ಎದುರಾಳಿ ಪರ ಆಗಿರಬಹುದಾದಮತಗಳನ್ನು ಕೂಡಿಸಿ, ಕಳೆದು, ಗುಣಿಸಿ, ಭಾಗಿಸುವಸಂಖ್ಯಾಶಾಸ್ತ್ರದ ಪರಿಣಿತಿಯನ್ನು ಪ್ರದರ್ಶಿಸುತ್ತಿದ್ದಾರೆ.ಅದರೊಂದಿಗೆ ನೆಚ್ಚಿನ ಅಭ್ಯರ್ಥಿಗಳ ಪರ 100, 500 ರೂ. ಪಣಕ್ಕಿಟ್ಟು, ಗೆಲುವಿನ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

 

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

4-mangaluru

Mangaluru: ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು ಸೂಚನೆ

asia cup 2023

Hybrid Model ಒಪ್ಪದ ಎಸಿಸಿ: ಏಷ್ಯಾ ಕಪ್ ಆಡದಿರಲು ಪಾಕಿಸ್ತಾನ ಚಿಂತನೆ

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಶಾಸಕರ ಜೊತೆ ಟೋಲ್ ಸಿಬ್ಬಂದಿ ಕಿರಿಕ್

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಶಾಸಕರ ಜೊತೆ ಟೋಲ್ ಸಿಬ್ಬಂದಿ ಕಿರಿಕ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಫಹಾದ್‌ – ಸ್ವರಾ ಭಾಸ್ಕರ್‌ ದಂಪತಿ: Baby Bump ಫೋಟೋ ವೈರಲ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಫಹಾದ್‌ – ಸ್ವರಾ ಭಾಸ್ಕರ್‌ ದಂಪತಿ: Baby Bump ಫೋಟೋ ವೈರಲ್

pavitra lokesh and naresh starer matte maduve releasing on June 9

ಮದುವೆ ಓಡಾಟದಲ್ಲಿ ಪವಿತ್ರ-ನರೇಶ್‌

siddaramaiah

Guarantee Scheme ಬಗ್ಗೆ ಪ್ರತಿಭಟನೆ ಮಾಡಲು ಬಿಜೆಪಿಗೆ ನೈತಿಕ ಹಕ್ಕಿಲ್ಲ; ಸಿದ್ದರಾಮಯ್ಯ

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

ಮುಂಡರಗಿ: ದ್ವಿ ಚಕ್ರ ವಾಹನ-ಬಸ್‌ ಅಪಘಾತ; ಸವಾರ ಸಾವು

ಗದಗ: ನರೇಗಾದಡಿ ಸದ್ದು ಮಾಡಿದ ರೋಣ ತಾಲೂಕು ಪಂಚಾಯ್ತಿ

ಗದಗ: ನರೇಗಾದಡಿ ಸದ್ದು ಮಾಡಿದ ರೋಣ ತಾಲೂಕು ಪಂಚಾಯ್ತಿ

ನರಗುಂದ: ಹೇಮರಡ್ಡಿ ಮಲ್ಲಮ್ಮ ಜೀವನ ಆದರ್ಶಪ್ರಾಯ

ನರಗುಂದ: ಹೇಮರಡ್ಡಿ ಮಲ್ಲಮ್ಮ ಜೀವನ ಆದರ್ಶಪ್ರಾಯ

ಬ್ಯಾಡಗಿ: ಹಳೇ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಯತ್ನ

ಬ್ಯಾಡಗಿ: ಹಳೇ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಯತ್ನ

ನರಗುಂದ: ಆಯುರ್ವೇದದಲ್ಲಿದೆ ಪರಿಣಾಮಕಾರಿ ಚಿಕಿತ್ಸೆ

ನರಗುಂದ: ಆಯುರ್ವೇದದಲ್ಲಿದೆ ಪರಿಣಾಮಕಾರಿ ಚಿಕಿತ್ಸೆ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

tdy-13ಹಾಲು-ನೀರು ಹಗರಣ ಸಿಬಿಐ ತನಿಖೆಗೆ?

ಹಾಲು-ನೀರು ಹಗರಣ ಸಿಬಿಐ ತನಿಖೆಗೆ?

ವಿದ್ಯುತ್‌ ದರ ಏರಿಕೆ ಖಂಡಿಸಿ ಪ್ರತಿಭಟನೆ

ವಿದ್ಯುತ್‌ ದರ ಏರಿಕೆ ಖಂಡಿಸಿ ಪ್ರತಿಭಟನೆ

ಆಕ್ಸಿಜನ್‌ ದುರಂತ: 50 ಲಕ್ಷ ರೂ. ಪರಿಹಾರಕ್ಕೆ ಒತ್ತಾಯ

ಆಕ್ಸಿಜನ್‌ ದುರಂತ: 50 ಲಕ್ಷ ರೂ. ಪರಿಹಾರಕ್ಕೆ ಒತ್ತಾಯ

ಕಾಡಾನೆ ಸೆರೆ ಸಮಸ್ಯೆಗೆ ಪರಿಹಾರವೇ?

ಕಾಡಾನೆ ಸೆರೆ ಸಮಸ್ಯೆಗೆ ಪರಿಹಾರವೇ?

ಕೋರ್ಟ್‌ ಆದೇಶಕ್ಕೂ ತಲೆಬಾಗದ ಕುಟುಂಬ  

ಕೋರ್ಟ್‌ ಆದೇಶಕ್ಕೂ ತಲೆಬಾಗದ ಕುಟುಂಬ