ದನದ ಸಂತೆಗೂ ತಟ್ಟಿದ ಬರದ ಬಿಸಿ


Team Udayavani, Feb 6, 2019, 10:10 AM IST

6-february-17.jpg

ಗಜೇಂದ್ರಗಡ: ತಾಲೂಕಿನಲ್ಲಿ ಭೀಕರ ಬರಗಾಲದ ಬಿಸಿ ಜಾರುವಾರುಗಳ ಸಂತೆಗೂ ತಟ್ಟಿದೆ. ದನ ಕರುಗಳನ್ನು ಖರೀದಿಸುವವರಿಲ್ಲದೇ ಬಿಕೋ ಎನ್ನುತ್ತಿವೆ. ಮಾರಲು ಸಂತೆಗೆ ಬರುವ ರೈತರು ದನಗಳನ್ನು ಹಿಡಿದು ಮರಳಿ ಮನೆಗೆ ವಾಪಸ್ಸಾಗುವುದು ಎಲ್ಲೆಡೆ ಸಾಮಾನ್ಯವಾಗಿದೆ.

ಗಜೇಂದ್ರಗಡದ ಜಾನುವಾರುಗಳ ಸಂತೆ ದಿನವಾದ ಮಂಗಳವಾರ ಪಟ್ಟಣ ಸೇರಿದಂತೆ ಸುತ್ತಲಿನ ನೂರಾರು ಗ್ರಾಮಗಳ ರೈತರು ಜಾನುವಾರುಗಳನ್ನು ಕೊಂಡುಕೊಳ್ಳಲು ಪಟ್ಟಣಕ್ಕೆ ಆಗಮಿಸುತ್ತಾರೆ. ಆದರೆ ಈ ವಾರ ದನಗಳನ್ನು ಖರೀದಿಸುವವರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿತ್ತು. ಇದಕ್ಕೆ ಕಾರಣ ಭೀಕರ ಬರದ ಛಾಯೆ. ಸಮಯಕ್ಕೆ ಸರಿಯಾಗಿ ಮಳೆಯಾಗದ ರೈತರು ಬೇಸಾಯ ಮಾಡದೇ ಸಂಕಷ್ಟದ ದಿನಗಳನ್ನು ಎದರಿಸುತ್ತಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಬರ ಆವರಿಸಿದೆ. ಒಂದೆಡೆ ಕುಡಿಯುವ ನೀರಿನ ಕೊರತೆ, ಇನ್ನೊಂದೆಡೆ ಮೇವಿನ ಅಭಾವದಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಅನ್ನದಾತನ ಸಂಗಾತಿಗಳಾದ ಎತ್ತು, ಎಮ್ಮೆಗಳಿಗೆ ಸಾಮಾನ್ಯವಾಗಿ ಹೊಲ, ಗದ್ದೆಗಳಲ್ಲಿ ಬೆಳೆಯುವ ಹುಲ್ಲನ್ನೇ ಹೆಚ್ಚಾಗಿ ಬಳಸಲಾಗುತ್ತದೆ. ಆದರೆ ಈ ಬಾರಿ ವರುಣನ ಮುನಿಸಿನಿಂದಾಗಿ ಹಸಿರು ಇಲ್ಲದಂತಾಗಿ ಜಾನುವಾರುಗಳಿಗೆ ಆಹಾರದ ಸಮಸ್ಯೆ ಬಿಗಡಾಯಿಸಿದೆ.

ಜಾನುವಾರುಗಳಿಗೆ ಸಜ್ಜೆ, ಮೆಕ್ಕೆಜೋಳ, ಭತ್ತದ ಹುಲ್ಲು, ಶೇಂಗಾ ಹೊಟ್ಟು, ಕಡಲೆ ಹೊಟ್ಟು ಹೀಗೆ ಇತರೆ ಧಾನ್ಯಗಳ ಹೊಟ್ಟು ಆಹಾರದ ವಸ್ತುಗಳಾಗಿದ್ದರೂ ಜೋಳದ ಮೇವು ಆಹಾರದ ಮುಖ್ಯ ವಸ್ತುವಾಗಿದೆ. ಆದರೆ ರೈತರು ಇತ್ತೀಚಿನ ದಿನಗಳಲ್ಲಿ ಆಹಾರ ಧಾನ್ಯಗಳ ಬೆಳೆಗಳನ್ನು ಕೈ ಬಿಟ್ಟು ವಾಣಿಜ್ಯ ಬೆಳೆಗಳತ್ತ ಮುಖ ಮಾಡಿರುವುದು ಮೇವಿನ ಅಭಾವ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ರೈತರು ಹೈನುರಾಸುಗಳನ್ನು ಹೊರತುಪಡಿಸಿ ಉಳಿದ ಜಾನುವಾರುಗಳನ್ನು ಸಿಕ್ಕಷ್ಟು ಬೆಲೆಗೆ ಮಾರುತ್ತಿದ್ದಾರೆ.

ಪಟ್ಟಣದಲ್ಲಿ ಮಾರುಕಟ್ಟೆಯಲ್ಲಿ ಕಳೆದ ಎರಡ್ಮೂರು ವರ್ಷಗಳ ಹಿಂದೆ ಜಾನುವಾರುಗಳಿಗೆ ಎಲ್ಲಿಲ್ಲದ ಬೇಡಿಕೆ ಇತ್ತು. ಅಲ್ಲದೇ ಗಜೇಂದ್ರಗಡದ ಜಾನುವಾರುಗಳ ಸಂತೆ ಖರೀದಿಸುವವರಿಂದ ಗಿಜುಗುಡುತ್ತಿತ್ತು. ಆದರೀಗ ಕೊಂಡುಕೊಳ್ಳುವವರು ಇಲ್ಲದಂತಾಗಿದೆ. 60ರಿಂದ 70 ಸಾವಿರ ರೂ. ಬೆಲೆ ಬಾಳುವ ಜೋಡೆತ್ತುಗಳನ್ನು 20ರಿಂದ 25 ಸಾವಿರಕ್ಕೆ ಕೊಟ್ಟರೂ ಖರೀದಿಸುವವರು ಇಲ್ಲದಂತಾಗಿದೆ.

ಮೇವು ಬ್ಯಾಂಕ್‌ ಸ್ಥಾಪನೆಗೆ ಆಗ್ರಹ
ತಾಲೂಕಿನಲ್ಲಿ ಬರ ಆವರಿಸಿದ್ದು, ರೈತರು ತೀವ್ರ ಸಂಕಷ್ಟದ ದಿನಗಳನ್ನು ಎದುರಿಸುತ್ತಿದ್ದಾರೆ. ಜಾನುವಾರುಗಳಿಗೆ ಹೊಟ್ಟು, ಮೇವು ಇಲ್ಲದೆ ಪರದಾಡುವಂತಾಗಿದೆ. ಇಷ್ಟೆಲ್ಲ ಸಮಸ್ಯೆಯಿಂದ ಬಳಲುತ್ತಿರುವ ರೈತ ಸಮೂಹದ ನೆರವಿಗೆ ಸರ್ಕಾರ ಧಾವಿಸಿ ತಾಲೂಕಿನಲ್ಲಿ ಆದ್ಯತೆಕ್ಕಿಂತ ಹೆಚ್ಚು ಸುಸಜ್ಜಿತ ಮೇವು ಬ್ಯಾಂಕ್‌ ಸ್ಥಾಪನೆಗೆ ಮುಂದಾಗಬೇಕೆನ್ನುವುದು ಅನ್ನದಾತರ ಆಗ್ರಹವಾಗಿದೆ.

ಮಳೆಯ ಅವಕೃಪೆಯಿಂದಾಗಿ ಬಿತ್ತಿದ ಬೆಳೆ ಬಾರದೇ ಸಾಲದ ಸುಳಿಗೆ ಸಿಲುಕಿ ಊರು ಬಿಡೋ ಪರಿಸ್ಥಿತಿ ಬಂದೈತ್ರಿ. ಇದರ ಮಧ್ಯೆ ದನಕರುಗಳಿಗೆ ಹೊಟ್ಟು ಮೇವು ಇಲ್ಲದಂಗಾಗಿ ಬಾಳ ಕಷ್ಟಾಗೈತ್ರಿ. ಹೀಗಾಗಿ ಕೊಟ್ಟಷ್ಟ ಕೊಡ್ಲಿ ಅಂತ ಸಂತ್ಯಾಗ ದನಕರುಗಳನ್ನು ಮಾರಾಕ ಬಂದರೂ ಕೊಂಡಕೊಳ್ಳೋರಿಲ್ರಿ.
•ಹನಮಪ್ಪ ಕೊಡಕೇರಿ, ರೈತ

ಬರಗಾಲದ ಸಂದರ್ಭದಲ್ಲಿ ಜಾನುವಾರುಗಳಿಗೆ ಆಹಾರ ಒದಗಿಸುವ ನಿಟ್ಟಿನಲ್ಲಿ ಮೇವು ಬ್ಯಾಂಕ್‌ ತೆರೆಯಲು ಪಿಡಿಒ ಮತ್ತು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸ್ಥಳ ಗುರುತಿಸಲು ಸೂಚಿಸಲಾಗಿದೆ. ಹೋಬಳಿಗೆ ಒಂದರಂತೆ ಬ್ಯಾಂಕ್‌ ತೆರೆಯಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಆದ್ಯತೆ ಮೇರೆಗೆ ಇನ್ನೆರಡು ದಿನಗಳಲ್ಲಿ ಮೇವು ಬ್ಯಾಂಕ್‌ ಆರಂಭಕ್ಕೆ ಕ್ರಮ ಜರುಗಿಸಲಾಗುವುದು. 
•ಗುರುಸಿದ್ದಯ್ಯ ಹಿರೇಮಠ, ತಹಶೀಲ್ದಾರ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.