ರೈತರ ಮನೆಬಾಗಿಲಿಗೆ ಕೃಷಿ ಮಾಹಿತಿ

ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಶಾಸಕ ಕಳಕಪ್ಪ ಬಂಡಿ ಚಾಲನೆ •

Team Udayavani, Aug 4, 2019, 12:04 PM IST

GADAGA-TDY-02

ಗಜೇಂದ್ರಗಡ: ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ನಡೆದ ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಶಾಸಕ ಕಳಕಪ್ಪ ಬಂಡಿ, ಎಪಿಎಂಸಿ ಸದಸ್ಯರಾದ ಅಂಬರೀಶ ಬಳಿಗೇರ, ಸುಗಿರೇಶ ಕಾಜಗಾರ ಚಾಲನೆ ನೀಡಿದರು.

ಗಜೇಂದ್ರಗಡ: ಕೃಷಿ ಇಲಾಖೆ ರೈತರಿಗೆ ಬೇಕಾದ ಎಲ್ಲ ಮಾಹಿತಿಯನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಮಾಡುತ್ತಿದ್ದು, ರೈತರು ಇದರ ಸದುಪಯೋಗ ಪಡೆಯಬೇಕು. ಈ ಮೂಲಕ ಹೆಚ್ಚು ಬೆಳೆ ಬೆಳೆದು ಆರ್ಥಿಕ ಸಬಲತೆ ಕಾಣುವ ದೃಷ್ಟಿಯಿಂದ ಕೃಷಿ ಇಲಾಖೆ ಮಾರ್ಗದರ್ಶನ ಪಡೆದುಕೊಳ್ಳಬೇಕಿದೆ ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು.

ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಜಿಪಂ, ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಶನಿವಾರ ನಡೆದ ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಕೃಷಿ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಹಲವಾರು ಕಾರ್ಯಕ್ರಮಗಳನ್ನು ಪ್ರತಿವರ್ಷ ಅನುಷ್ಠಾನಕ್ಕೆ ತರುತ್ತಿದೆ. ಅಲ್ಲದೇ ಆಧುನಿಕತೆಗೆ ತಕ್ಕಂತೆ ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುವ ಉದ್ದೇಶದಿಂದ ಹಲವಾರು ಬದಲಾವಣೆ ಅನುಸರಿಸುತ್ತಿದೆ. ಇದರ ಮಾಹಿತಿಯನ್ನು ರೈತರಿಗೆ ತಲುಪಿಸುವ ಕಾರ್ಯವೂ ನಡೆದಿದೆ. ಪ್ರಸ್ತುತ ಪಾರಂಪರಿಕ ಪದ್ಧತಿ ಜೊತೆಗೆ ಆಧುನಿಕ ಪದ್ಧತಿ ಅಳವಡಿಸಿಕೊಂಡರೆ ಉತ್ತಮ. ಇದಕ್ಕಾಗಿ ಕೃಷಿ ಇಲಾಖೆ ವತಿಯಿಂದ ರೈತರಿಗೆ ದೊರೆಯುವ ವಿವಿಧ ಸೌಲಭ್ಯ ಸದ್ಬಳಕೆ ಮಾಡಿಕೊಂಡು ಹೆಚ್ಚಿನ ಲಾಭ ಪಡೆಯಲು ಮುಂದಾಗಬೇಕು. ಜೊತೆಗೆ ಅಧಿಕಾರಿಗಳು ಎಲ್ಲ ರೈತರಿಗೆ ಯೋಜನೆಗಳ ಸಂಪೂರ್ಣ ಮಾಹಿತಿ ನೀಡಲು ಹಿಂಜರಿಯಬಾರದು ಎಂದು ಸೂಚಿಸಿದರು.

ಎಪಿಎಂಸಿ ಸದಸ್ಯ ಅಂಬರೀಶ ಬಳಿಗೇರ ಮಾತನಾಡಿ, ರೈತರು ಸಮರ್ಪಣಾಭಾವದಲ್ಲಿ ತೊಡಗಿಸಿ ತಮ್ಮ ಕಾರ್ಯ ಮಾಡುತ್ತಿದ್ದು, ಕೃಷಿಯಿಂದ ನಮ್ಮ ಸಂಸ್ಕೃತಿ, ಬದುಕು, ದೇಶದ ಬೆಳವಣಿಗೆ ಸಾಧ್ಯ. ಆದ್ದರಿಂದ ರೈತರಿಗೆ ಬೆನ್ನೆಲುಬಾಗಿ ನಿಂತು ಮಾಹಿತಿ, ಸೌಲಭ್ಯ ನೀಡಲು ಸರಕಾರ ಕೃಷಿ ಅಭಿಯಾನ ಹಮ್ಮಿಕೊಂಡಿದ್ದು, ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ಜಿಲ್ಲಾ ಉಪ ಕೃಷಿ ನಿರ್ದೇಶಕ ಮೋಹನದಾಸ್‌ ಕೆ.ಎಸ್‌. ಮಾತನಾಡಿ, ಈ ರಥವು ಎಲ್ಲ ಹಳ್ಳಿಗಳಲ್ಲಿಯೂ ಸಂಚರಿಸಿ ಕೃಷಿ ಉತ್ಪಾದಕತೆ ಹೆಚ್ಚಿಸುವ ನಿಟ್ಟಿನಲ್ಲಿ ಅವಶ್ಯವಿರುವ ತಂತ್ರಜ್ಞಾನವನ್ನು ರೈತರಿಗೆ ತಲುಪಿಸಲು ಏಕಗವಾಕ್ಷಿ ವಿಸ್ತರಣೆ ಪದ್ಧತಿಯಲ್ಲಿ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಶೀರ್ಷಿಕೆ ಅಡಿಯಲ್ಲಿ ಹೋಬಳಿ ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ. ಮೊದಲನೆ ಮತ್ತು ಎರಡನೆಯ ದಿನ ಪ್ರತಿಯೊಂದು ಹೋಬಳಿಯಲ್ಲಿ ಗ್ರಾಪಂವಾರು ಕಾರ್ಯತಂಡ ರಚಿಸಿ ರೈತರಿಗೆ ಮಾಹಿತಿ ನೀಡಲಾಗುವುದು. ರೈತರು ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ಯಶಸ್ಸಿಗೊಳಿಸಬೇಕು ಎಂದರು.

ಎಪಿಎಂಸಿ ಸದಸ್ಯ ಸುಗಿರೇಶ ಕಾಜಗಾರ, ಎಸ್‌.ಎಸ್‌. ಅರಹುಣಸಿ, ಶಂಕರ ಕಲಿಗೊಣ್ಣವರ, ಭಾಸ್ಕರ ರಾಯಬಾಗಿ, ಎಸ್‌.ಎಸ್‌. ವಾಲಿ, ಶರಣಪ್ಪ ರೇವಡಿ, ಹಿರಿಯ ತೋಟಗಾರಿಕಾ ಅಧಿಕಾರಿ ಎಂ.ಎಂ. ತಾಂಬೋಟಿ, ಸಹಾಯಕ ತೋಟಗಾರಿಕಾ ಅಧಿಕಾರಿ ಶರಣಯ್ಯ ಅಂಗಡಿ, ಚನ್ನಪ್ಪ ಅಂಗಡಿ, ಎಸ್‌.ಎಫ್‌. ತಹಶೀಲ್ದಾರ್‌, ಸಾವಿತ್ರಿ ಶಿವನಗೌಡರ, ಬುಡ್ಡಪ್ಪ ಮೂಲಿಮನಿ, ಶರಣಪ್ಪ ಕಂಬಳಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.