ಕೃಷಿ ಪರಿಕರ ಮಾರಾಟ ಲೋಪ; ನೋಟಿಸ್ ಜಾರಿ
Team Udayavani, May 17, 2020, 11:25 AM IST
ಗದಗ: ತಾಲೂಕಿನ ವಿವಿಧ ಕೃಷಿ ಪರಿಕರಗಳ ಮಾರಾಟಗಾರರ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದ ಜಾರಿ ದಳ ತಂಡ ಅನೀರಿಕ್ಷಿತವಾಗಿ ಭೇಟಿದ್ದು, ಕೃಷಿ ಪರಿಕರ ಗುಣ ನಿಯಂತ್ರಣ ಕಾಯ್ದೆಯ ನಿಯಮಾವಳಿಯಲ್ಲಿ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ ತಾಲೂಕಿನ ನಾಲ್ವರು ಮಾರಾಟಗಾರರಿಗೆ ಇಲಾಖೆಯಿಂದ ನೋಟಿಸ್ ಜಾರಿಗೊಳಿಸಿದೆ.
ಜಾರಿ ದಳದ ಅಧಿಕಾರಿ ಸಂತೋಷ ಪಟ್ಟದಕಲ್ಲ, ಮಲ್ಲಯ್ಯ ಕೂರವನವರ, ಕೃಷಿ ಅಧಿಕಾರಿ ಪವನಕುಮಾರ ಖಮ್ಕಿತರ್ ಅವರನ್ನೊಳಗೊಂಡ ಅಧಿಕಾರಿಗಳ ತಂಡ ಶುಕ್ರವಾರ ಗದಗ, ಬೆಟಗೇರಿ, ಲಕ್ಕುಂಡಿ ಸೇರಿದಂತೆ ನಾಲ್ಕು ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಕರ ಹಾಗೂ ದಾಖಲೆಗಳನ್ನು ಪರಿಶೀಲನೆ ನಡೆಸಿದಾಗ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ ನೋಟಿಸ್ ನೀಡಿದೆ.
ಜೊತೆಗೆ ರೈತರಿಗೆ ನೋಂದಾಯಿತ ಕಂಪನಿಯ ಪ್ರಮಾಣೀಕರಿಸಿದ ಬೀಜಗಳನ್ನು ಮಾರಾಟ ಮಾಡಬೇಕು. ನಿಗದಿತ ದರವನ್ನು ಸೂಚನಾ ಫಲಕದಲ್ಲಿ ನಮೂದಿಸಿ ಕಂಪನಿಯು ನಿರ್ದಿಷ್ಟಪಡಿಸಿದ ದರದಲ್ಲಿ ಕೃಷಿ ಪರಿಕರಗಳ ಮಾರಾಟ ಮಾಡಬೇಕು. ಮಾರುಕಟ್ಟೆ ಬೆಲೆಗಿಂತ ಹೆಚ್ಚು ಬೆಲೆಗೆ ಹಾಗೂ ಅವಧಿ ಮುಗಿದ ಬೀಜಗಳನ್ನು ಮಾರಾಟ ಮಾಡಬಾರದು. ಕಳಪೆ ಬೀಜಗಳ ಕಂಡು ಬಂದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದರು. ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಮಾರಾಟ ಕೇಂದ್ರ, ಮಳಿಗೆಗಳಲ್ಲಿ ಸಾಮಾಜಿಕ ಅಂತರ ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದ್ದಾರೆ ಎಂದು ಗದಗ ಸಹಾಯಕ ಕೃಷಿ ನಿರ್ದೇಶಕ ವೀರಣ್ಣ ವಿ.ಗಡಾದ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು