ಅಪೌಷ್ಟಿಕತೆ ನಿವಾರಣೆಗೆ ಆರೈಕೆ ತಂತ್ರ

ಮಕ್ಕಳ ದೈಹಿಕ ತೂಕದಲ್ಲಿ ಅಲ್ಪಸ್ವಲ್ಪ ಸುಧಾರಣೆ­ಫಲಪ್ರದವಾದ ಜಿಲ್ಲಾಡಳಿತದ ವಿಶಿಷ್ಟ ಕ್ರಮ

Team Udayavani, Jul 14, 2021, 8:55 PM IST

13gadag 1a (4)

ವೀರೇಂದ್ರ ನಾಗಲದಿನ್ನಿ

 ಗದಗ: ಸಂಭಾವ್ಯ ಕೋವಿಡ್‌-19 ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರಲಿದೆ ಎಂಬ ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಲವು ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದೆ.

ಜಿಲ್ಲೆಯಲ್ಲಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ಸುಧಾರಣೆಗೆ ಜಿಲ್ಲಾಡಳಿತ ಕೈಗೊಂಡು ಕ್ರಮ ಫಲಪ್ರಧವಾಗಿದೆ. ಮಕ್ಕಳ ದೈಹಿಕ ತೂಕದಲ್ಲಿ ಅಲ್ಪಸ್ವಲ್ಪ ಸುಧಾರಣೆ ಕಂಡು ಬರುವುದರೊಂದಿಗೆ ಅವರ ಪೋಷಕರಲ್ಲಿ ಜಾಗೃತಿ ಹೆಚ್ಚಿಸಿದೆ. ಜಿಲ್ಲೆಯಲ್ಲಿ 13,909 ಮಕ್ಕಳು ಸಾಧಾರಣ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅವರಲ್ಲಿ 243 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅಂತಹ ಮಕ್ಕಳಿಗೆ ಬಹುಬೇಗ ಕೋವಿಡ್‌ ಸೋಂಕು ತಗುಲುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅಪೌಷ್ಟಿಕ ಮಕ್ಕಳ ಬಲವರ್ದನೆಗೆ ಜಿಲ್ಲಾಡಳಿತ ವಿಶೇಷ ಕಾರ್ಯಕ್ರಮ ಹಾಕಿಕೊಂಡಿದೆ. ಜಿಲ್ಲೆಯ ಗಜೇಂದ್ರಗದ ಹೊರತಾಗಿ 6 ತಾಲೂಕುಗಳಲ್ಲಿ ತಲಾವೊಂದು “ಪೌಷ್ಟಿಕ ಮಕ್ಕಳ ವಿಶೇಷ ಶಿಬಿರ’ ಆಯೋಜಿಸಿದೆ. ಒಟ್ಟು 243 ಅಪೌಷ್ಟಿಕ ಮಕ್ಕಳಲ್ಲಿ 123 ಮಕ್ಕಳನ್ನು ಅವರ ತಾಯಂದಿರೊಂದಿಗೆ 14 ದಿನಗಳ ಕಾಲ ವಿಶೇಷ ಶಿಬಿರಕ್ಕೆ ಸ್ಥಳಾಂತರಿಸಿ, ಪೌಷ್ಟಿಕ ಆಹಾರ ಹಾಗೂ ಅಗತ್ಯ ಔಷಧಿಗಳೊಂದಿಗೆ ಆರೈಕೆ ಮಾಡುತ್ತಿದೆ.

ಅಪೌಷ್ಟಿಕ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಸುವುದು ಶಿಬಿರದ ಉದ್ದೇಶವಾಗಿದೆ. ಮಕ್ಕಳಲ್ಲಿ ಹೆಚ್ಚಿದ ತೂಕ: ಜಿಲ್ಲೆಯ ವಿವಿಧೆಡೆ ಸುಸಜ್ಜಿತ ವಸತಿ ನಿಲಯಗಳಲ್ಲಿ “ಪೌಷ್ಟಿಕ ಮಕ್ಕಳ ವಿಶೇಷ ಶಿಬಿರ’ಗಳನ್ನು ನಿರ್ವಹಿಸಲಾಗುತ್ತಿದೆ. ಅಪೌಷ್ಟಿಕ ಮಕ್ಕಳ ದೈಹಿಕ ತೂಕ ಹೆಚ್ಚಿಸಲು ಸರಕಾರ ನಿರ್ದೇಶಿತ ಪೌಷ್ಟಿಕ ಆಹಾರ ನೀಡಲಾಗುತ್ತದೆ. ಪ್ರತಿನಿತ್ಯ ಬೆಳಗ್ಗೆಯಿಂದ ರಾತ್ರಿ ಮಗು ಮಲಗುವವರೆಗೆ 10 ಬಾರಿ ಪೌಷ್ಟಿಕ ಆಹಾರ ಮತ್ತು ಎರಡು ಬಾರಿ ಹಾಲು ನೀಡಲಾಗುತ್ತಿದೆ. ಜೊತೆಗೆ ಬಾಳೆ ಹಣ್ಣು ಮತ್ತು ಮೊಟ್ಟೆ, ಕ್ಯಾಲ್ಸಿಯಂ, ಮಲ್ಟಿ ವಿಟಾಮಿನ್‌ ಪೌಡರ್‌, ಪ್ರೊಟಿನ್‌ ಪೌಡರ್‌ ಹಾಗೂ ಜಿಂಕೋವಿಟ್‌ ಪೌಡರ್‌ ಒದಗಿಸಲಾಗುತ್ತದೆ. ಶಿಬಿರದಲ್ಲಿ ನಿಯಮಿತವಾಗಿ ಪೌಷ್ಟಿಕ ಆಹಾರದ ಜೊತೆಗೆ ಸರಳ ಚಟುವಟಿಕೆಗಳು ಅವರ ಬೌದ್ಧಿಕ ಬೆಳವಣಿಗೆಗೂ ಸಹಕಾರಿಯಾಗಿವೆ.

ಬಣ್ಣ ಬಳಸಿ ಮಕ್ಕಳಿಂದ ಚಿತ್ರ ಬಿಡುಸುವುದು, ಆಕೃತಿಗಳನ್ನು ಬರೆಯುವುದು ಹಾಗೂ ಬಣ್ಣದಲ್ಲಿ ಅಂಗೈ, ತರಕಾರಿ ಅದ್ದಿ ಹಚ್ಚೆ ಒತ್ತುವ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮಕ್ಕಳಲ್ಲಿ ಹೊಸ ಅನುಭೂತಿ ಮೂಡಿಸುತ್ತವೆ. ಜೊತೆಗೆ ನಿರೀಕ್ಷೆಯಂತೆ ಆಹಾರ ಸೇವಿಸುತ್ತವೆ. ಮಕ್ಕಳ ದೈನಂದಿನ ಜೀವನ ಶೈಲಿಯಲ್ಲಿ ಸಣ್ಣಪುಟ್ಟ ಬದಲಾವಣೆಯಿಂದ 14 ದಿನಗಳ ಶಿಬಿರದಲ್ಲಿರುವ ಮಕ್ಕಳಲ್ಲಿ ಸರಾಸರಿ 400 ಗ್ರಾಂ ತೂಕ ಹೆಚ್ಚಿದೆ ಎನ್ನುತ್ತಾರೆ ಗದಗ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಗಿರಿಜಾ ದೊಡ್ಡಮನಿ. ಮಕ್ಕಳ ಪೋಷಕರಿಗೆ ತರಬೇತಿ: ಮಕ್ಕಳೊಂದಿಗೆ ಇರುವ ಪೋಷಕರಿಗೆ ಪೌಷ್ಟಿಕ ಆಹಾರಗಳ ಮಹತ್ವ, ಅವುಗಳ ಬಳಕೆ ಹಾಗೂ ಸಿರಿ ಧಾನ್ಯಗಳನ್ನು ಬಳಸಿ ಮನೆಯಲ್ಲೇ ತಯಾರಿಸಬಹುದಾದ ವಿವಿಧ ಬಗೆಯ ಅಡುಗೆಗಳ ಬಗ್ಗೆ ತರಬೇತಿ ನೀಡಲಾಗಿದೆ. ಮಕ್ಕಳ ಮಾನಸಿಕ ಸ್ಥಿತಿ ಮತ್ತು ಆಹಾರ ಒದಗಿಸುವ ರೀತಿಯನ್ನು ಮನದಟ್ಟು ಮಾಡಲಾಗಿದೆ.

ಶಿಬಿರದಲ್ಲಿ ನೀಡಲಾದ ಸಲಹೆ, ಸೂಚನೆಗಳನ್ನು ನಿರಂತರ ಪಾಲಿಸಿದ್ದಲ್ಲಿ ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ಶಾಶ್ವತವಾಗಿ ದೂರವಾಗಲಿದೆ ಎನ್ನುತ್ತಾರೆ ತಜ್ಞರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.