ರಾಜ್ಯದ ಅಮರನಾಥ ಯಾತ್ರಿಗಳು ಸುರಕ್ಷಿತ: ಸಚಿವ ಎಚ್.ಕೆ. ಪಾಟೀಲ
Team Udayavani, Jul 9, 2023, 3:04 PM IST
ಗದಗ: ಅಮರನಾಥ ಯಾತ್ರೆಗೆ ಗದಗ ಜಿಲ್ಲೆ ಸೇರಿ ರಾಜ್ಯದಿಂದ ತೆರಳಿದ್ದ 300ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ. ಅವರನ್ನು ಆದಷ್ಟು ಬೇಗ ಕರೆ ತರುವ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹವಾಮಾನ ವೈಪರೀತ್ಯ ಹಾಗೂ ಗುಡ್ಡ ಕುಸಿತದಿಂದಾಗಿ ಜಿಲ್ಲೆಯ 23 ಯಾತ್ರಿಗಳು ಪಂಚತರಣಿ ಬೇಸ್ ಕ್ಯಾಂಪ್ ಕಳೆದರಡು ದಿನಗಳಿಂದ ರಕ್ಷಣೆ ಪಡೆಯುತ್ತಿದ್ದಾರೆ. ಕೆಲವರ ಜತೆ ನಾನು ಮಾತನಾಡಿದ್ದೇನೆ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ ಎಂದರು.
ರವಿವಾರ ಬೆಳಗ್ಗೆ ತೊಂದರೆಯಲ್ಲಿದ್ದ ಪಂಚತರಣಿ ಕ್ಯಾಂಪ್ ನಿಂದ ಸೇನಾ ಹೆಲಿಕಾಪ್ಟರ್ ಮೂಲಕ ನೀಲ್ ಗ್ರಥ ಕ್ಯಾಂಪ್ ಗೆ ಲಿಫ್ಟ್ ಮಾಡಲಾಗುತ್ತಿದ್ದು, ಈಗಾಗಲೇ ಕೆಲವು ಯಾತ್ರಿಗಳು ನೀಲ್ ಗ್ರಥ್ ಕ್ಯಾಂಪ್ ಗೆ ಬಂದಿಳಿದಿದ್ದಾರೆ. ಪ್ರತಿ 8 ನಿಮಿಷಕ್ಕೊಂದರಂತೆ ಹೆಲಿಕಾಪ್ಟರ್ ಗಳು ರೆಸ್ಕ್ಯೂ ಕಾರ್ಯ ನಡೆಸುತ್ತಿವೆ ಎಂದರು.
ಗದಗ ಜಿಲ್ಲೆಯ ಎಲ್ಲ 23 ಯಾತ್ರಿಗಳು ರಾತ್ರಿಯೊಳಗಾಗಿ ನೀಲ್ ಗ್ರಥ್ ಕ್ಯಾಂಪ್ ನಿಂದ ಶ್ರೀನಗರಕ್ಕೆ ಆಗಮಿಸಬಹುದು ಎಂದು ನಿರೀಕ್ಷೆ ಮಾಡಲಾಗಿದೆ. ಹವಾಮಾನ ವೈಪರೀತ್ಯ ಹಾಗೂ ಅತೀಯಾದ ಚಳಿಯಿಂದಾಗಿ ಸಮಸ್ಯೆಯಾಗಿತ್ತು. ಅಮರನಾಥ ಆಡಳಿತ ಮಂಡಳಿ, ಮಿಲಿಟರಿ ಅಧಿಕಾರಿಗಳು ಎಲ್ಲರಿಗೂ ಅಗತ್ಯ ನೆರವನ್ನು ನೀಡಿದ್ದು ಅವರನ್ನು ನಾನು ಅಭಿನಂದಿಸುತ್ತೇನೆ ಎಂದರು.
ಇದನ್ನೂ ಓದಿ:ಎಚ್ಚರ ಎಕ್ಸ್ಪ್ರೆಸ್ ವೇನಲ್ಲಿ ಯಾಮಾರಿದ್ರೆ ದಂಡ!
ಅಲ್ಲಿರುವ ಯಾರಿಗೂ ಯಾವುದೇ ತೊಂದರೆ ಇಲ್ಲ. ಹಾಗಾಗಿ ಯಾರೂ ಭಯ ಪಡುವಂತ ಅವಶ್ಯಕತೆ ಇಲ್ಲ. ಯಾತ್ರಾರ್ಥಿಗಳಿಗೆ ಮೆಡಿಕಲ್ ಹಾಗೂ ಹಾಸಿಗೆ ಹೊದಿಕೆ ನೀಡಿ ವಿಶೇಷ ಕಾಳಜಿ ವಹಿಸಲಾಗಿದೆ ಎಂದರು.
ರವಿವಾರ ಬೆಳಗ್ಗೆ ನಾನು ತೊಂದರೆಯಲ್ಲಿದ್ದ ವಿನೋದ ಅನ್ನುವವರ ಜತೆ ನಾನು ಮಾತನಾಡಿದ್ದೇನೆ. ರಾಜ್ಯ ಸರಕಾರದ ಹಿರಿಯ ಅಧಿಕಾರಿ ರಶ್ಮಿ ಮಹೇಶ ಹಾಗೂ ಇನ್ನೋರ್ವ ಹಿರಿಯ ಅಧಿಕಾರಿ ಸುನೀಲಕುಮಾರ ಶ್ರೀನಗರ ತಲುಪಿದ್ದಾರೆ. ನಾಲ್ಕೈದು ದಿನಗಳಲ್ಲಿ ಅವರೆಲ್ಲರೂ ಸೇಫ್ ಆಗಿ ಜಿಲ್ಲೆಗೆ ಮರಳಿ ಬರುತ್ತಾರೆ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ