ಗದುಗಿನ ವೀರೇಶ್ವರ ಪುಣ್ಯಾಶ್ರಮಕ್ಕೆಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ

ಈಗಾಗಲೇ ಶತಮಾನೋತ್ಸವ ಕಂಡಿದ್ದು, 107 ವಸಂತಗಳನ್ನು ಪೂರೈಸಿದೆ.

Team Udayavani, Nov 1, 2021, 8:14 PM IST

ಗದುಗಿನ ವೀರೇಶ್ವರ ಪುಣ್ಯಾಶ್ರಮಕ್ಕೆಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ

ಗದಗ: ಸಂಗೀತ ಸಾಧಕರ ಪುಣ್ಯಭೂಮಿ ಎಂದೇ ಖ್ಯಾತಿ ಪಡೆದಿರುವ ಇಲ್ಲಿನ ವೀರೇಶ್ವರ ಪುಣ್ಯಾಶ್ರಮದ ಅಂಧ ಮಕ್ಕಳ ಶಾಲೆಗೆ ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಸ್ಮರಣೆಗಾಗಿ ರಾಜ್ಯ ಸರಕಾರ ಪ್ರಕಟಿಸಿರುವ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ ಸಂದಿದೆ.

ಹಾನಗಲ್‌ ಕುಮಾರೇಶ್ವರ ಸ್ವಾಮೀಗಳ ಪ್ರೇರಣೆಯಿಂದ ಪ| ಪಂಚಾಕ್ಷರಿ ಗವಾಯಿಗಳು 1914ರಲ್ಲಿ ಗುರುಕುಲ ಪದ್ಧತಿಯಲ್ಲಿ ಸ್ಥಾಪನೆಗೊಂಡಿರುವ ಶ್ರೀ ವೀರೇಶ್ವರ ಪುಣ್ಯಾಶ್ರಮ ಪಂ| ಪಂಚಾಕ್ಷರ ಗವಾಯಿಗಳವರ ಅಂಧ ಮಕ್ಕಳ ಸಂಗೀತ, ಸಾಹಿತ್ಯ ಮಹಾವಿದ್ಯಾಲಯ ಈಗಾಗಲೇ ಶತಮಾನೋತ್ಸವ ಕಂಡಿದ್ದು, 107 ವಸಂತಗಳನ್ನು ಪೂರೈಸಿದೆ.

ಪ್ರತಿನಿತ್ಯ ನಿರಂತರ ಅನ್ನದಾಸೋಹ, ಸಂಗೀತ ದಾಸೋಹ, ಅಕ್ಷರ ದಾಸೋಹ ಹೀಗೆ ತ್ರಿವಿಧ ದಾಸೋಹಗಳೊಂದಿಗೆ ಸಂಗೀತ, ಲಲಿತ ಕಲೆಗಳಿಗೆ ಒತ್ತು ನೀಡಲಾಗಿದೆ. ತ್ರಿಭಾಷಾ ಕವಿ ಗಾನಯೋಗಿ ಲಿಂ|ಡಾ|ಪಂ| ಪುಟ್ಟರಾಜ ಕವಿ ಗುರುವರ್ಯರು 1989-90ರಲ್ಲಿ ಸಂಸ್ಥಾಪಕ ಆಜೀವ ಅಧ್ಯಕ್ಷತೆಯಲ್ಲಿ ಡಾ| ಪಂ.ಪುಟ್ಟರಾಜ ಗವಾಯಿಗಳವರ ಅಂಧರ ಶಿಕ್ಷಣ ಸಮಿತಿ ಸ್ಥಾಪಿಸಿ, ಅದರ ಅಡಿಯಲ್ಲಿ ತಮ್ಮ ಗುರುಗಳಾದ ಪಂ| ಪಂಚಾಕ್ಷರ ಗವಾಯಿಗಳವರ ಹೆಸರಿನಲ್ಲಿ ಪಂ| ಪಂಚಾಕ್ಷರ ಗವಾಯಿಗಳವರ ಅಂಧರ ವಸತಿಯುತ ವಿಶೇಷ ಸಂಗೀತ ಪಾಠಶಾಲೆ ಸೇರಿದಂತೆ ಸುಮಾರು 14ಕ್ಕೂ ಹೆಚ್ಚು ಶಾಲಾ-ಕಾಲೇಜು ಆರಂಭಿಸಿದರು.

ಪುಣ್ಯಾಶ್ರಮದಲ್ಲಿ ಅಂಧ, ಅಂಗವಿಕಲ ಹಾಗೂ ಸರ್ವಜಾತಿಯ ಬಡಮಕ್ಕಳು ಒಮ್ಮೆ ಪ್ರವೇಶ ಪಡೆದರೆ ಪ್ರಾಥಮಿಕ ಹಂತದಿಂದ ಸಂಗೀತದಲ್ಲಿ ಮತ್ತು ಶಿಕ್ಷಣದಲ್ಲಿ ಉನ್ನತ ಪದವಿ ಮುಗಿಸಿ ಸಮಾಜದ ಉತ್ತಮ ಪ್ರಜೆಯನ್ನಾಗಿಸುವುದು ಶ್ರೀಗುರು ಪುಟ್ಟರಾಜರ ಸದಾಶಯವಾಗಿತ್ತು. ಪೂಜ್ಯರು ಲಿಂಗೈಕ್ಯರಾದ ನಂತರ ಪೂಜ್ಯಡಾ| ಕಲ್ಲಯ್ಯಜ್ಜನವರು ಕಾರ್ಯಾಧ್ಯಕ್ಷರಾಗಿ ಗುರುವರ್ಯರು ಹಾಕಿಕೊಟ್ಟ ಮಾರ್ಗದಲ್ಲೇ ಉಚಿತ ಊಟ-ವಸತಿಯೊಂದಿಗೆ ಸಂಗೀತ, ಸಾಹಿತ್ಯದೊಂದಿಗೆ ಅಂಧ ಮಕ್ಕಳಿಗೆ ವಿಶೇಷ ಶಿಕ್ಷಣ, ಬ್ರೆçಲ್‌ ಲಿಪಿ ಕಲಿಕೆ, ಸಂಗೀತ ವಿದ್ವಾನರಿಂದ ಕಾರ್ಯಾಗಾರ, ಮೋಬಿಲಿಟಿ ತರಬೇತಿ ಹೀಗೆ ನೂರಾರು ಅಂಧ ಮಕ್ಕಳಿಗೆ ವರ್ಷದುದ್ದಕ್ಕೂ ರಚನಾತ್ಮಕ ಕಾರ್ಯಕ್ರಮಗಳನ್ನು ನಿರ್ವಹಿಸಲಾಗುತ್ತಿದೆ.

ಪಂ| ಪುಟ್ಟರಾಜಕವಿ ಗವಾಯಿಗಳ ಅವರ ಅವ ಧಿಯಲ್ಲೇ ಪುಣ್ಯಾಶ್ರಮದ ಸಂಗೀತ ಮತ್ತು ಸಾಮಾಜಿಕ ಕಾರ್ಯಗಳು ಹೆಚ್ಚು ಬೆಳಕಿಗೆ ಬಂದಿದ್ದವು. ಅಂಧರು ಕುಟುಂಬಕ್ಕೆ ಹೊರೆಯಾಗದಂತೆ ಅವರನ್ನು ಸ್ವಾವಲಂಬಿಯನ್ನಾಗಿಸುವ ಪೂಜ್ಯರ ಪ್ರಯತ್ನ ಫಲಿಸಿದೆ. ಸಂಗೀತ ಸಾಧನೆಯೊಂದಿಗೆ ಅಂಧ ಮಕ್ಕಳ ಶಾಲಾ ವಿದ್ಯಾರ್ಥಿಗಳು ಬರಹಗಾರರ ನೆರವಿನೊಂದಿಗೆ ಎಸ್‌ ಎಸ್‌ಎಲ್‌ಸಿ, ಪಿಯುಸಿ ಮತ್ತು ಪದವಿ ತರಗತಿಗಳನ್ನೂ ಪೂರೈಸುತ್ತಿದ್ದಾರೆ. ಕಳೆದ 100 ವರ್ಷಗಳಿಂದ ಲಕ್ಷಾಂತರ ವಿದ್ಯಾರ್ಥಿಗಳು ಕಲಾವಿದರಾಗಿ ಹೊರ ಹೊಮ್ಮಿದ್ದಾರೆ.

ಶಾಲೆಯ ಹಳೇ ವಿದ್ಯಾರ್ಥಿಗಳಾದ ಸಿದ್ದಪ್ಪ ಮಾಸ್ತರ್‌ ಗುಳೆಂ, ರೇವಣಪ್ಪ ಕುಂಕುಮಗಾರ, ಗೋವಿಂದರಾಜ ಬೊಮ್ಮಳಾಪುರ, ಸೇರಿದಂತೆ ಹಲವರು ಸಂಗೀತ, ನಾಟಕ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಖ್ಯಾತಿ ಗಳಿಸಿದ್ದಾರೆ. 300ರಿಂದ 400 ಹಳೇ ವಿದ್ಯಾರ್ಥಿಗಳು ರಾಣಿಚನ್ನಮ್ಮ, ನವೋದಯ, ಮೊರಾರ್ಜಿ ಸೇರಿದಂತೆ ವಿವಿಧ ವಸತಿ ಶಾಲೆಗಳಲ್ಲಿ ಸಂಗೀತ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ರೋಟರಿ ಕ್ಲಬ್‌ ನೆರವು: ವೀರೇಶ್ವರ ಪುಣ್ಯಾಶ್ರಮದ ಸಾಮಾಜಿಕ ಮತ್ತು ಸಂಗೀತ ಸೇವೆ ಗೌರವಿಸಿ ರೋಟರಿ ಅಂತಾರಾಷ್ಟ್ರೀಯ ಕ್ಲಬ್‌ನಿಂದ 90ರ ದಶಕದಲ್ಲಿ ಶಾಲಾ ಅಭಿವೃದ್ಧಿಗೆ ಅನುದಾನದಡಿ ಸುಮಾರು 20 ಕೊಠಡಿಗಳನ್ನು ನಿರ್ಮಿಸಿಕೊಟ್ಟಿದ್ದು ವಿಶೇಷ. ಜತೆಗೆ 2014 ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗಕರು ಮತ್ತು ವಿಕಲಚೇತನರ ಇಲಾಖೆಯಿಂದ ರಾಜ್ಯ ಪ್ರಶಸ್ತಿ ಸೇರಿದಂತೆ ಸಂಸ್ಥೆಗೆ ನೂರಾರು ಪ್ರಶಸ್ತಿ, ಪುರಸ್ಕಾರಗಳು ಸಂದಿವೆ.

*ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.