ದೇಶಪ್ರೇಮ ಮೂಡಿಸಲು ಅಮೃತೋತ್ಸವ

ರಾಷ್ಟ್ರಪ್ರೇಮದ ಹಬ್ಬವಾಗಿ ಆಚರಣೆ ; ಹೊಂಬಳದಲ್ಲಿ 150 ಮಾಜಿ ಯೋಧರಿಗೆ ಸತ್ಕಾರ: ಸಚಿವ ಸಿ.ಸಿ.ಪಾಟೀಲ

Team Udayavani, Aug 11, 2022, 5:57 PM IST

22

ನರಗುಂದ: ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸುವ ಜೊತೆಗೆ ನಾಡು, ನೆಲ, ಜಲದ ಬಗ್ಗೆ ಗೌರವ ಮೂಡಿಸುವುದು ಹಾಗೂ ಸಮೃದ್ಧ ಭಾರತ ನಿರ್ಮಾಣಕ್ಕಾಗಿ ಹೊಸ ಪೀಳಿಗೆಯಾದ ಇಂದಿನ ಯುವಕರಲ್ಲಿ ದೇಶಪ್ರೇಮ ಬಡಿದೆಬ್ಬಿಸುವುದೇ ಅಮೃತ ಮಹೋತ್ಸವದ ಮೂಲ ಉದ್ದೇಶ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಆಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ನಡೆಯುತ್ತಿರುವ ಸ್ವಾತಂತ್ರ್ಯ ಅಮೃತ ಮಹೋತ್ಸವ ರಾಷ್ಟ್ರಪ್ರೇಮದ ಕಾರ್ಯಕ್ರಮ ಎಂದರು.

ಆ.13ರ ಬೆಳಿಗ್ಗೆಯಿಂದ ಆ.15ರ ಸಾಯಂಕಾಲದವರೆಗೆ ಪ್ರತಿಯೊಬ್ಬ ಭಾರತೀಯರು ಮನೆ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ನಾವು ದೇಶಪ್ರೇಮ ಮೆರೆಯಬೇಕಾಗಿದೆ. ಇದಕ್ಕಾಗಿ ಧ್ವಜ ಸಂಹಿತೆಯನ್ನು ಕೇಂದ್ರ ಸರ್ಕಾರ ಸಡಿಲಗೊಳಿಸಿದೆ. ಗದಗ ಜಿಲ್ಲೆಯಲ್ಲಿ ಅಮೃತ ಮಹೋತ್ಸವ ಸಂಪೂರ್ಣ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಸಿದ್ಧತೆ ನಡೆಸಲಾಗಿದೆ. ನರಗುಂದ ಮತಕ್ಷೇತ್ರದಲ್ಲಿ 34,500 ರಾಷ್ಟ್ರಧ್ವಜ ವಿತರಿಸಲಾಗುತ್ತಿದೆ ಎಂದು ಸಚಿವ ಸಿ.ಸಿ.ಪಾಟೀಲ ಹೇಳಿದರು.

ತಿರಂಗಾ ಯಾತ್ರೆ ಯಶಸ್ವಿಗೊಳಿಸಿ: ಆ.12ರಂದು ಮತಕ್ಷೇತ್ರದ ಹೊಂಬಳ ಗ್ರಾಮ ಹಾಗೂ ಆ.13ರಂದು ನರಗುಂದ ನಗರದಲ್ಲಿ 100 ಮೀಟರ್‌ ಉದ್ದದ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರಾರಂಭಿಸಿ ಉಡಚಾ ಪರಮೇಶ್ವರಿ ದೇವಸ್ಥಾನದ ಮಾರ್ಗವಾಗಿ ಬಾಬಾಸಾಹೇಬ ಪುತ್ಥಳಿ, ಬಸವೇಶ್ವರ ವೃತ್ತ, ಶಿವಾಜಿ ವೃತ್ತದ ಮೂಲಕ ಚೆನ್ನಮ್ಮ ವೃತ್ತಕ್ಕೆ ಸಮಾಪ್ತಿಗೊಳ್ಳಲಿದೆ ಎಂದರು.

ತಿರಂಗಾ ಯಾತ್ರೆಯಲ್ಲಿ ಶಾಲಾ ಮಕ್ಕಳು, ನಾಗರಿಕರು, ನಮ್ಮ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನಸಮೂಹ ಪಾಲ್ಗೊಂಡು ಯಶಸ್ವಿಗೊಳ್ಳಲು ಕೈಜೋಡಿಸಬೇಕು. ಹೊಂಬಳ ಗ್ರಾಮದಲ್ಲಿ ತಿರಂಗಾ ಯಾತ್ರೆ ಅಂಗವಾಗಿ 150 ಜನ ಮಾಜಿ ಯೋಧರನ್ನು ಗೌರವಿಸಲಾಗುವುದು ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಮುತ್ತಣ್ಣ ಲಿಂಗನಗೌಡ್ರ, ನರಗುಂದ ಬಿಜೆಪಿ ಮಂಡಲ ಅಧ್ಯಕ್ಷ ಗುರಪ್ಪ ಆದೆಪ್ಪನವರ, ಪ್ರದೀಪ ಲಿಂಗದಾಳ, ಶಿವಕುಮಾರ ನೀಲಗುಂದ, ಪ್ರದೀಪ ನವಲಗುಂದ, ಸಂಭಾಜಿ ಕಾಶೀದ, ಹನುಮಂತ ಹವಾಲ್ದಾರ, ಮಹೇಶ ಹಟ್ಟಿ, ಬಿ.ಜಿ.ಸುಂಕದ, ಮಂಜುನಾಥ ಮೆಣಸಗಿ, ಸಿದ್ದೇಶ ಹೂಗಾರ, ಶರಣು ಪಿಡ್ಡನಾಯ್ಕರ, ಶಿವು ಅಂಗಡಿ, ರಮೇಶ ಪಲ್ಲೇದ, ವಿಠ್ಠಲ ಹವಾಲ್ದಾರ ಮುಂತಾದವರಿದ್ದರು.

ಆ.12ರಂದು ಮತಕ್ಷೇತ್ರದ ಹೊಂಬಳ ಗ್ರಾಮ ಹಾಗೂ ಆ.13ರಂದು ನರಗುಂದ ನಗರದಲ್ಲಿ 100 ಮೀಟರ್‌ ಉದ್ದದ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಹೊಂಬಳ ಗ್ರಾಮದಲ್ಲಿ ತಿರಂಗಾ ಯಾತ್ರೆ ಅಂಗವಾಗಿ 150 ಜನ ಮಾಜಿ ಯೋಧರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. -ಸಿ.ಸಿ.ಪಾಟೀಲ, ಲೋಕೋಪಯೋಗಿ ಸಚಿವರು

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.