ಅಂಗನವಾಡಿ ಕೇಂದ್ರವೀಗ ಹಂದಿಗಳ ತಾಣ!


Team Udayavani, Nov 3, 2018, 5:15 PM IST

3-november-21.gif

ಗದಗ: ಕಳಸಾಪುರ ರಸ್ತೆಯ ಬಾಪೂಜಿ ನಗರದಲ್ಲಿರುವ 190ನೇ ಅಂಗನವಾಡಿ ಕೇಂದ್ರ ಅಕ್ಷರಶಃ ಹಂದಿಗಳ ಆವಾಸ ತಾಣವಾಗಿದ್ದು, ಅಂಗನವಾಡಿ ಮುಂಭಾಗ ಚರಂಡಿಯಲ್ಲಿ ಕೊಳಚೆ ನೀರು ತುಂಬಿ ಗಬ್ಬೆದ್ದು ನಾರುತ್ತಿದೆ.

ಗದಗ- ಬೆಟಗೇರಿ ಅವಳಿ ನಗರದ ನಗರಸಭೆ ವಾರ್ಡ್‌ ನಂ.35ರ ವ್ಯಾಪ್ತಿಯ ಬಾಪೂಜಿ ನಗರದಲ್ಲಿ ಬಹುತೇಕ ಪರಿಶಿಷ್ಟ ಹಾಗೂ ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸವಿದ್ದಾರೆ. ಈ ಬಡಾವಣೆಯಲ್ಲಿರುವ ಏಕೈಕ ಅಂಗನವಾಡಿ ಕೇಂದ್ರ ಇದಾಗಿದ್ದು, 30 ವಿದ್ಯಾರ್ಥಿಗಳ ಹಾಜರಾತಿ ಇದೆ. ನಿತ್ಯ 18 ರಿಂದ 20 ವಿದ್ಯಾರ್ಥಿಗಳು ಹಾಜರಾಗುತ್ತಾರೆ. ಮಾತೃಪೂರ್ಣ ಯೋಜನೆಯಡಿ ನಾಲ್ವರು ಗರ್ಭಿಣಿಯರು, ನಾಲ್ವರು ಬಾಣಂತಿಯರು ನೋಂದಾಯಿಸಿಕೊಂಡಿದ್ದಾರೆ. ಅಂಗನವಾಡಿ ಸುತ್ತಲಿನ ಕಲುಷಿತ ವಾತಾವರಣವಿದ್ದು, ಸದಾ ದುರ್ವಾಸನೆ ಬೀರುತ್ತಿರುತ್ತದೆ. 190ನೇ ಅಂಗನವಾಡಿ ಕೇಂದ್ರ ಆರಂಭಗೊಂಡು ದಶಕ ಕಳೆದರೂ ಮೂಲಸೌಲಭ್ಯಗಳಿಂದ ವಂಚಿತವಾಗಿದೆ. ಕಾಂಪೌಂಡ್‌, ಶೌಚಾಲಯ, ಕುಡಿಯುವ ನೀರಿನ ನಲ್ಲಿಯ ಸೌಲಭ್ಯವಿಲ್ಲದೆ ಮಕ್ಕಳು ಪರಿತಪಿಸುವಂತಾಗಿದೆ.

ಹಂದಿಗಳ ಆವಾಸ ತಾಣ: ಬಡಾವಣೆಯ ಕೊನೆಯ ಭಾಗದಲ್ಲಿರುವ ಅಂಗನವಾಡಿ ಮುಂಭಾಗದಲ್ಲೇ ಇಡೀ ಬಡಾವಣೆ ಕೊಳಚೆ ನೀರು ನಿಲ್ಲುತ್ತದೆ. ಪರಿಣಾಮ ಸುತ್ತಲಿನ ಖಾಲಿ ಪ್ರದೇಶ ದಲ್ಲಿ ಮುಳ್ಳು ಕಂಟಿಗಳು ಬೆಳೆದಿದ್ದು, ನೂರಾರು ಹಂದಿಗಳ ಆವಾಸ ತಾಣವಾಗಿ ಮಾರ್ಪಟ್ಟಿದೆ. ಅಂಗನವಾಡಿಗೆ ಬರುವ ಮಕ್ಕಳು ಕೈಯಲ್ಲಿ ಬ್ರೆಡ್‌, ಉಂಡಿ ಸೇರಿದಂತೆ ಇನ್ನಿತರೆ ತಿನಿಸುಗಳನ್ನುಡಿದು ರಸ್ತೆಗಿಳಿದರೆ, ಮಕ್ಕಳ ಕೈಯಲ್ಲಿರುವ ತಿಂಡಿ- ತಿನಿಸಿಗಾಗಿ ಹಂದಿಗಳು ದಾಳಿ ನಡೆಸುತ್ತವೆ. ಅದರಂತೆ 2017ರ ಅಕ್ಟೋಬರ್‌ ನಲ್ಲಿ ಇದೇ ಅಂಗನವಾ ಡಿಯ ಬಾಲಕಿಯೊಬ್ಬಳು ಹಂದಿ ದಾಳಿಗೆ ಒಳಗಾಗಿದ್ದಳು. ಇದರಿಂದಾಗಿ ಅಂಗನವಾಡಿಗೆ ಕಳುಹಿಸಲು ಪಾಲಕರೂ ಹಿಂಜರಿಯುತ್ತಾರೆ. ದಿನವಿಡೀ ಮಕ್ಕಳನ್ನು ಕಾಯುವುದು ಸವಾಲಿನ ಕೆಲಸವಾಗಿದೆ ಎಂಬುದು ಅಂಗನವಾಡಿ ಕಾರ್ಯಕರ್ತೆ ಮೀನಾಕ್ಷಿ ಹಮ್ಮಗಿ ಅವರ ಅಳಲು.

ಕಳೆದ ಒಂದು ವರ್ಷದಿಂದ ಅಡುಗೆ ಸಹಾಯಕಿ ಇಲ್ಲದೇ ಎಲ್ಲ ಕೆಲಸವನ್ನು ನಾನೇ ಮಾಡಿಕೊಳ್ಳುತ್ತಿದ್ದೇನೆ. ಈ ಬಗ್ಗೆ ಇಲಾಖೆ ಅ ಧಿಕಾರಿಗಳ ಗಮನಕ್ಕೂ ತಂದಿದ್ದೇನೆ. ಆಗೊಮ್ಮೆ? ಈಗೊಮ್ಮೆ ಅಂಗನವಾಡಿ ಬಯಲು ಸ್ವಚ್ಛಗೊಳಿಸಿದರೂ, ಮತ್ತೆ ಅದೇ ಪರಿಸ್ಥಿತಿ.
ಮೀನಾಕ್ಷಿ ಹಮ್ಮಗಿ,
ಅಂಗನವಾಡಿ ಸಹಾಯಕಿ

ಶೀಘ್ರ ಭೇಟಿ
ಈ ಬಗ್ಗೆ ನನ್ನ ಗಮನಕ್ಕಿರಲಿಲ್ಲಿ. ಇನ್ನೆರಡು ದಿನಗಳಲ್ಲಿ ಬಾಪೂಜಿ ನಗರದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು. ಅಂಗನವಾಡಿ ಸುತ್ತ ಬೆಳೆದಿರುವ ಮುಳ್ಳು, ಬೇಲಿ ತೆರವುಗೊಳಿಸಿ, ಸ್ವಚ್ಛತೆ ಮಾಡಿಕೊಂಡುವಂತೆ ನಗರಸಭೆ ಅಧಿಕಾರಿಗಳಿಗೆ ಮನವಿ ಮಾಡುತ್ತೇನೆ. ಈಗಾಗಲೇ ಶೌಚಾಲಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಇನ್ನುಳಿದಂತೆ ಕಾಂಪೌಂಡ್‌ ನಿರ್ಮಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
.ರಾಮಕೃಷ್ಣ ಪಡಗಣ್ಣವರ,
 ಉಪನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ.

ವಾರ್ಡ್‌ ನಂಬರ್‌ 35ನೇ
ವಾರ್ಡ್‌ನಲ್ಲಿರುವ 190 ಅಂಗನವಾಡಿ ಕೇಂದ್ರದ ಪರಿಸ್ಥಿತಿ ಶೋಚನೀಯವಾಗಿದೆ. ಸುತ್ತಲೂ ಬೆಳೆದಿರುವ ಜಾಲಿಗಿಡಗಳುನ್ನು ತೆರವುಗೊಳಿಸಲು ನಗರಸಭೆ ಮುಂದಾಗಬೇಕು. 
ಸುರೇಶ ಚಲವಾದಿ,
ದಲಿತ ವಿದ್ಯಾರ್ಥಿ ಪರಿಷತ್‌ ಜಿಲ್ಲಾಧ್ಯಕ್ಷ

Ad

ಟಾಪ್ ನ್ಯೂಸ್

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu-Bangarappa

ಆರ್‌ಎಸ್‌ಎಸ್‌ ಬ್ಯಾನ್‌ ಮಾಡುವುದು ಒಳ್ಳೆಯದು: ಸಚಿವ ಮಧು ಬಂಗಾರಪ್ಪ

16

Naregal: ವರುಣನಿಗಾಗಿ ಮಹಿಳೆಯರಿಂದ ಮೌನಾಚರಣೆ

Gadag: NREGA outsourced staff starts non-cooperation movement in front of the Taluk Panchayath

Gadag: ತಾ.ಪಂ ಎದುರು ನರೇಗಾ ಹೊರಗುತ್ತಿಗೆ ಸಿಬ್ಬಂದಿಯಿಂದ ಅಸಹಕಾರ ಚಳುವಳಿ ಆರಂಭ

Muharram: ಸಡಗರದ ಮೊಹರಂ; ಬೆಂಕಿಯ ಕುಂಡದಲ್ಲಿ ಕಂಬಳಿ ಹಾಸಿ ನಮಾಜ್ ಮಾಡಿದ ಮೌಲ್ವಿ

Muharram: ಸಡಗರದ ಮೊಹರಂ; ಬೆಂಕಿಯ ಕುಂಡದಲ್ಲಿ ಕಂಬಳಿ ಹಾಸಿ ನಮಾಜ್ ಮಾಡಿದ ಮೌಲ್ವಿ

1-dess

Gadag: ವರುಣನ ಕೃಪೆಗಾಗಿ ಮಹಿಳೆಯರ ಮೌನ ಪೂಜೆ!

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

Arrested: ಕರೆ ಮಾಡಲು ಕೊಟ್ಟ ಮೊಬೈಲ್‌ ವಾಪಸ್‌ ಕೇಳಿದ್ದಕ್ಕೆ ಹಲ್ಲೆ: ಬಂಧನ

Arrested: ಕರೆ ಮಾಡಲು ಕೊಟ್ಟ ಮೊಬೈಲ್‌ ವಾಪಸ್‌ ಕೇಳಿದ್ದಕ್ಕೆ ಹಲ್ಲೆ: ಬಂಧನ

ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ

ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ

Bengaluru: ವರದಕ್ಷಿಣೆ‌: ಡಿವೈಎಸ್ಪಿ ವಿರುದ್ಧ ಕೇಸ್‌

Bengaluru: ವರದಕ್ಷಿಣೆ‌: ಡಿವೈಎಸ್ಪಿ ವಿರುದ್ಧ ಕೇಸ್‌

High Court: ಗಾರ್ಡನ್‌ ಅಲ್ಲ, ಫ್ಲೆಕ್ಸ್‌ ಸಿಟಿ: ಹೈಕೋರ್ಟ್‌ ಚಾಟಿ

High Court: ಗಾರ್ಡನ್‌ ಅಲ್ಲ, ಫ್ಲೆಕ್ಸ್‌ ಸಿಟಿ: ಹೈಕೋರ್ಟ್‌ ಚಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.