ವಿದ್ಯಾರ್ಥಿಗಳ ಮೇಲೆ ಕಟ್ಟಡ ಬೀಳುವ ಆತಂಕ


Team Udayavani, Jul 27, 2019, 9:43 AM IST

gadaga-tdy-2

ಲಕ್ಷ್ಮೇಶ್ವರ: ಗೊಜನೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಕಸ್ತೂರಿಬಾ ವಸತಿ ಶಾಲೆಗೆ ಹೊಂದಿಕೊಂಡಿರುವ ಶಿಥಿಲಗೊಂಡಿರುವ ಗ್ರಾಪಂ ಕಟ್ಟಡ.

ಲಕ್ಷ್ಮೇಶ್ವರ: ತಾಲೂಕಿನ ಗೊಜನೂರ ಗ್ರಾಮದ ಶಾಲಾ ಆವರಣದಲ್ಲಿರುವ ಗ್ರಾಪಂ ಹಳೆಯದಾದ ಕಟ್ಟಡ ಸಂಪೂರ್ಣ ಶಿಥಿಲಗೊಂಡು ಆಗಲೋ-ಈಗಲೋ ನೆಲಕಚ್ಚುವ ಸ್ಥಿತಿಯಲ್ಲಿದ್ದು, ಈ ಪ್ರಾಂಗಣದಲ್ಲಿ ಓದುತ್ತಿರುವ ನೂರಾರು ಮಕ್ಕಳ ಪ್ರಾಣಕ್ಕೆ ಎರವಾಗುವಂತಿದೆ.

ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದೊಳಗೆ ಇರುವ ಗ್ರಾಪಂ ಕಟ್ಟಡ ಸಂಪೂರ್ಣ ಶಿಥಿಲಗೊಂಡಿರುವುದರಿಂದ ಕಳೆದ ಅನೇಕ ವರ್ಷಗಳ ಹಿಂದೆಯೇ ಕಾರ್ಯಾಲಯವನ್ನು ಗ್ರಾಮದ ಸಮುದಾಯ ಭವನದಲ್ಲಿ ನಡೆಸುತ್ತಿದ್ದಾರೆ. ಶಿಥಿಲಗೊಂಡು ಅರ್ಧಮರ್ಧ ಉಳಿದಿರುವ ಕಲ್ಲಿನ ಕಟ್ಟಡ ಬೀಳುವ ಸ್ಥಿತಿಯಲ್ಲಿದೆ. ಈ ಕಟ್ಟಡಕ್ಕೆ ಹೊಂದಿಕೊಂಡಂತೆ 40 ಮಕ್ಕಳು ಓದುವ ಅಂಗನವಾಡಿ, 80 ಮಕ್ಕಳಿರುವ ಕರ್ನಾಟಕ ಕಸ್ತೂರಿಬಾ ವಸತಿ ನಿಲಯ ಮತ್ತು 275ಕ್ಕೂ ಹೆಚ್ಚು ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳು ನಿತ್ಯವೂ ಇದರಡಿಯೇ ಕಾಲ ಕಳೆಯುತ್ತಿದ್ದಾರೆ.

ಇದೀಗ ಮಳೆಗಾಲವಾಗಿದ್ದರಿಂದ ಬಿರುಕು ಬಿಟ್ಟಿರುವ ಕಲ್ಲು ಮಣ್ಣಿನ ಗೋಡೆಯಲ್ಲಿ ನೀರಿಳಿದು ನೆಲಕಚ್ಚುವ ಹಂತದಲ್ಲಿದೆ. ಇದರಿಂದ ಇಲ್ಲಿನ ಮಕ್ಕಳು ಜೀವ ಹಿಡಿದುಕೊಂಡು ಶಾಲಾವಧಿ ಕಳೆಯಬೇಕಾಗಿದೆ. ಅಲ್ಲದೇ ಇದು ಇಲ್ಲಿನ ಶಿಕ್ಷಕರಿಗೂ ದೊಡ್ಡ ಜವಾಬ್ದಾರಿಯಾಗಿದೆ. ಒಂದೊಮ್ಮೆ ಏನಾದರೂ ಅವಘಡ ಸಂಭವಿಸಿದರೆ ಯಾರು ಹೊಣೆ ಎಂಬುದು ಶಿಕ್ಷಕರನ್ನು ಕಾಡುತ್ತಿರುವ ಪ್ರಶ್ನೆಯಾಗಿದೆ. ಪಾಲಕರೂ ತಮ್ಮ ಮಕ್ಕಳಿಗೆ ಕಟ್ಟಡದತ್ತ ಸುಳಿಯದಂತೆ ತಾಕೀತು ಮಾಡಿ ಕಳಿಸುತ್ತಿದ್ದಾರೆ. ಗ್ರಾಪಂನವರು ಸಮುದಾಯ ಭವನಕ್ಕೆ ಕಾರ್ಯಾಲಯ ಸ್ಥಳಾಂತರಗೊಳಿಸಿದ ನಂತರ ಅರ್ಧಕ್ಕೆ ಕೆಡವಿ ನಿಂತಿರುವ ಕಟ್ಟಡದತ್ತ ಚಿತ್ತ ಹರಿಸಿಲ್ಲ. ಈ ಕಟ್ಟಡ ನೆಲಸಮಗೊಳಿಸುವಂತೆ ಶಿಕ್ಷಕ ಮತ್ತು ಪಾಲಕರು ಸಂಬಂಧಪಟ್ಟವರಿಗೆ ತಿಳಿಸುತ್ತಾ ಬಂದಿದ್ದಾರೆ. ಆದರೂ ಯಾರೊಬ್ಬರೂ ಇದರ ಬಗ್ಗೆ ನಿಗಾವಹಿಸುತ್ತಿಲ್ಲ. ಇನ್ನಾದರೂ ಗ್ರಾಪಂನವರು ಅವಘಡ ಸಂಭವಿಸುವ ಮೊದಲೇ ಶಿಥಿಲ ಕಟ್ಟಡ ತೆರವುಗೊಳಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಕುರಿತು ಬಿಇಒ ವಿ.ವಿ. ಸಾಲಿಮಠ ಅವರನ್ನು ಸಂಪರ್ಕಿಸಿದರೆ ಕಟ್ಟಡ ತೆರವು ಗೊಳಿಸಲು ಪಿಡಿಒ ಅವರಿಗೆ ತಿಳಿಸಲಾಗಿದೆ ಎನ್ನುತ್ತಾರೆ. ಗ್ರಾಪಂ ಪಿಡಿಒ ಎಸ್‌.ಎಫ್‌. ಮಾಳವಾಡ ಅವರನ್ನು ಸಂಪರ್ಕಿಸಿದರೆ ಈ ಕಟ್ಟಡದ ಅರ್ಧಭಾಗ ಈಗಾಗಲೇ ತೆರವುಗೊಳಿಸಲಾಗಿದೆ. ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಇನ್ನುಳಿದ ಕಟ್ಟಡ ತೆರವುಗೊಳಿಸುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.