ಜನಪ್ರತಿನಿಧಿಗಳ ನಿರಾಸಕ್ತಿ- ಡಂಬಳ ಗ್ರಾಪಂಗೆ ಪಟ್ಟಣ ಪಂಚಾಯಿತಿ ಭಾಗ್ಯ ಯಾವಾಗ?

ಪಟ್ಟಣ ಪಂಚಾಯತಿ ಮೇಲ್ದರ್ಜೆಗೇರಿದರೆ ಹೆಚ್ಚು ಅನುದಾನ ಬರುತ್ತದೆ.

Team Udayavani, Jul 6, 2023, 2:17 PM IST

ಜನಪ್ರತಿನಿಧಿಗಳ ನಿರಾಸಕ್ತಿ- ಡಂಬಳ ಗ್ರಾಪಂಗೆ ಪಟ್ಟಣ ಪಂಚಾಯಿತಿ ಭಾಗ್ಯ ಯಾವಾಗ?

ಡಂಬಳ: ಜಿಲ್ಲೆಯಲ್ಲೇ ಅತಿ ಹೆಚ್ಚು ಗ್ರಾಮ ಪಂಚಾಯಿತಿ ಸದಸ್ಯರನ್ನು ಹಾಗೂ ಮುಂಡರಗಿ ತಾಲೂಕಿನಲ್ಲೇ ಹೆಚ್ಚು ಜನಸಂಖ್ಯೆ ಹೊಂದಿರುವ ಡಂಬಳ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂಬ ಡಂಬಳ ಗ್ರಾಮಸ್ಥರ ಕೂಗು ಒಂದು ದಶಕಗಳಿಂದ ಕೇಳಿ ಬರುತ್ತಲೇ ಇದೆ. ಆದರೆ, ಈ ಕುರಿತು ಈ ಭಾಗದ ಜನಪ್ರತಿನಿಧಿಗಳು ಆಸಕ್ತಿ ತೋರುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

ಡಂಬಳ ಗ್ರಾಮ ಪಂಚಾಯಿತಿ 11 ವಾರ್ಡ್‌, 29 ಸದಸ್ಯರನ್ನು ಹೊಂದಿದೆ. ಗ್ರಾಮ ಪಂಚಾಯಿತಿಯಲ್ಲಿ 20 ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಂದಾಜು 20 ಸಾವಿರ ಜನಸಂಖ್ಯೆ ಇದ್ದು, 12 ಸಾವಿರ ಮತದಾರರಿದ್ದಾರೆ. 5-6 ಸಾವಿರ ಜನಸಂಖ್ಯೆ
ಹೊಂದಿರುವ ಗ್ರಾಮ ಪಂಚಾಯಿತಿಗಳಿಗೆ ನೀಡಲಾಗುವ ಅನುದಾನವನ್ನೇ ಈ ಗ್ರಾಮ ಪಂಚಾಯಿತಿಗೂ ನೀಡಲಾಗುತ್ತದೆ. ಇದರಿಂದ ಗ್ರಾಮದ ಅಭಿವೃದ್ಧಿ ಮಾಡಲು ಅನುದಾನ ಸಾಲುತ್ತಿಲ್ಲ ಎಂದು ಗ್ರಾಪಂ ಸದಸ್ಯರು ಆರೋಪಿಸುತ್ತಿದ್ದಾರೆ.

ಈ ಹಿಂದೆ ವಿಜಯಕುಮಾರ ಸೊರಕೆ ಅವರು ನಗರಾಭಿವೃದ್ಧಿ ಸಚಿವರಾಗಿದ್ದಾಗ 160 ಗ್ರಾಮ ಪಂಚಾಯತಿಗಳನ್ನು ಪಟ್ಟಣ
ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾಪ ಪರಿಶೀಲನೆಯಲ್ಲಿದೆ ಎಂದು ಹೇಳಿದ್ದರು. ಈ 160 ರಲ್ಲಿ ಡಂಬಳ ಗ್ರಾಮ
ಪಂಚಾಯಿತಿ ಕೂಡ ಒಂದು. ಹೀಗಾಗಿ, ಡಂಬಳ ಗ್ರಾಪಂ ಅನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವಂತೆ ಕಳೆದ ಐದಾರು ವರ್ಷಗಳಿಂದ ಗ್ರಾಮ ಸಭೆ, ವಾರ್ಡ್‌ ಸಭೆಗಳಲ್ಲಿ ಸದಸ್ಯರು ಒತ್ತಾಯಿಸುತ್ತಲೇ ಬಂದಿದ್ದಾರೆ.

ಡಂಬಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂರು ಗ್ರಾಮಗಳಿದ್ದು, 11 ವಾರ್ಡ್‌ಗಳಿವೆ ಎಲ್ಲ ವಾರ್ಡ್‌ಗಳ ಅಭಿವೃದ್ಧಿಗೆ ಅನುದಾನ ಕೊರತೆಯಾಗುತ್ತಿದೆ. ಗ್ರಾಪಂಗೆ ಬರುವ ಅನುದಾನ ಯಾವುದಕ್ಕೂ ಸಾಲುತ್ತಿಲ್ಲ. ಆದ್ದರಿಂದ ಕುಡಿಯುವ ನೀರು, ಸಮುದಾಯ ಶೌಚಾಲಯ, ಬೀದಿ ದೀಪ, ಚರಂಡಿ ವುವಸ್ಥೆ, ರಸ್ತೆ ಅಭಿವೃದ್ಧಿ ನನೆಗುದಿಗೆ ಬಿದ್ದಿವೆ.

ಪಟ್ಟಣ ಪಂಚಾಯತಿ ಮೇಲ್ದರ್ಜೆಗೇರಿದರೆ ಹೆಚ್ಚು ಅನುದಾನ ಬರುತ್ತದೆ. ಗ್ರಾಮವನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಮುಖ್ಯವಾಗಿ ಮೂಲಭೂತ ಸೌಲಭ್ಯಗಳಾದ ರಸ್ತೆ, ಒಳಚರಂಡಿ, ಕುಡಿಯುವ ನೀರಿನ ವ್ಯವಸ್ಥೆ ಸುಧಾರಿಸುತ್ತದೆ. ಹಣಕಾಸಿನ ಯೋಜನೆ, ಬಡತನ ನಿರ್ಮೂಲನೆ, ಕೌಶಲ್ಯ ತರಬೇತಿ ಯೋಜನೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗಾಗಿ ವಿಶೇಷ ಯೋಜನೆಯಡಿ ಹೆಚ್ಚಿನ ಅನುದಾನ ಸಿಗುತ್ತದೆ ಎಂಬುದು ಸಾರ್ವಜನಿಕರ ಆಶಾವಾದ.

ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಹೆಚ್ಚುತ್ತಿರುವುದರಿಂದ ಗ್ರಾಮದ ಜನರಿಗೆ ಸಮರ್ಪಕವಾಗಿ ಮೂಲ ಸೌಲಭ್ಯಗಳು ಸಿಗುತ್ತಿಲ್ಲ. ಸಮಗ್ರ ಅಭಿವೃದ್ಧಿಗಾಗಿ ಡಂಬಳ ಗ್ರಾಪಂ ಅನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮಾಡಲು ಈ ಭಾಗದ ಜನಪ್ರತಿನಿಧಿಗಳು
ಮುಂದಾಗಬೇಕು.
ಈರಣ್ಣ ನಂಜಪ್ಪನವರ, ಸಾಮಾಜಿಕ ಕಾರ್ಯಕರ್ತ, ಡಂಬಳ

ಡಂಬಳ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಸರ್ಕಾರದ ಆದೇಶ ಬಂದ ತಕ್ಷಣ ಕಾರ್ಯನ್ಮಖರಾಗಿ ಪಟ್ಟಣ ಪಂಚಾಯಿತಿ ಆಗಿ ಮೇಲ್ದರ್ಜೆಗೇರಿಸಲಾಗುವುದು.
ಯುವರಾಜ ಮುಂಡರಗಿ, ತಾಪಂ ಇಒ

ವಿಜಯ ಸೊರಟೂರ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.