ಎಪಿಎಂಸಿ ವಹಿವಾಟು ಆರಂಭ
Team Udayavani, Apr 18, 2020, 4:32 PM IST
ಸಾಂದರ್ಭಿಕ ಚಿತ್ರ
ಗಜೇಂದ್ರಗಡ: ಕೋವಿಡ್ 19 ತಡೆಗಟ್ಟಲು ಕೇಂದ್ರ ಸರ್ಕಾರ ಮತ್ತೂಮ್ಮೆ ಲಾಕ್ಡೌನ್ ಮುಂದುವರಿಸಿದೆ. ಇದರ ಮಧ್ಯೆಯೇ ಪಟ್ಟಣದ ಎಪಿಎಂಸಿಯಲ್ಲಿ ಶುಕ್ರವಾರದಿಂದ ವಹಿವಾಟು ಕಾರ್ಯ ಆರಂಭಗೊಂಡಿದೆ.
ರಾಜ್ಯ ಸರ್ಕಾರ ಕೃಷಿ ಚಟುವಟಿಕೆಗಳಿಗೆ ವಿನಾಯತಿ ಮತ್ತು ಎಪಿಎಂಸಿ ವಹಿವಾಟಿಗೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಎಪಿಎಂಸಿ ವಾರದಲ್ಲಿ ಸೋಮವಾರ, ಗುರುವಾರ ಮತ್ತು ಶನಿವಾರ ಸೇರಿ ಮೂರು ದಿನಗಳ ಕಾಲ ತೆರೆಯಲಿದೆ. ಬೆಳಗ್ಗೆ 6ರಿಂದ ಮಧ್ಯಾಹ್ನ 3 ಗಂಟೆವರೆಗೆ ರೈತರಿಂದ ಬೆಳೆ ಪಡೆದುಕೊಳ್ಳಬಹುದು. ಬೆಳಗ್ಗೆ 11ರಿಂದ 12 ಗಂಟೆವರೆಗೆ ಟೆಂಡರ್ ಪ್ರಕ್ರಿಯೆ ನಡೆಯಲಿದೆ.
ಎಪಿಎಂಸಿ ವಹಿವಾಟು ಶುಕ್ರವಾರದಿಂದ ಆರಂಭವಾಗಿರುವ ಹಿನ್ನೆಲೆಯಲ್ಲಿ ಶೇಂಗಾ ಆವಕ ಹೆಚ್ಚಾಗಿ ಬಂದಿದ್ದು, ವರ್ತಕರು ಖರೀದಿಸುವಲ್ಲಿ ತಲ್ಲೀನರಾಗಿದ್ದಾರೆ. ಆದರೆ ಎಪಿಎಂಸಿ ಆವರಣದಲ್ಲಿ ಬಹುತೇಕ ಅಂಗಡಿಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಆತಂಕ ಸೃಷ್ಟಿಸಿದೆ.
ಪಕ್ಕದ ಜಿಲ್ಲೆ ಬಾಗಲಕೋಟೆಯಲ್ಲಿ ಕೋವಿಡ್ 19 ತೀವ್ರ ಸ್ವರೂಪ ಪಡೆದಿದೆ. ಆ ಜಿಲ್ಲೆಯ ಹಲವಾರು ಗ್ರಾಮಗಳ ರೈತರು ಪಟ್ಟಣದ ಎಪಿಎಂಸಿಗೆ ಬೆಳೆ ಮಾರಾಟಕ್ಕೆ ತರುತ್ತಾರೆ. ಹೀಗಾಗಿ ಇಲ್ಲಿನ ವರ್ತಕರು ಮತ್ತು ಶ್ರಮಿಕರು ಅಗತ್ಯ ಮಾಸ್ಕ್ ಧರಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್
Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ