ರಸ್ತೆ ಸುಧಾರಣೆಗೆ ಆಗ್ರಹಿಸಿ ಮನವಿ
Team Udayavani, Sep 29, 2019, 11:43 AM IST
ರೋಣ: ತಾಲೂಕಿನ ಹಿರೇಮಣ್ಣೂರದಿಂದ ಬಾಸಲಾಪುರ ಮಾರ್ಗವಾಗಿ ರೋಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೆ ದುರಸ್ತಿಗೊಳಿಸಬೇಕು ಎಂದು ಜಯ ಕರ್ನಾಟಕ ರೋಣ ಶಹರ ಘಟಕ ವತಿಯಿಂದ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಜಯ ಕರ್ನಾಟಕ ರೋಣ ಶಹರ ಘಟಕ ಅಧ್ಯಕ್ಷ ಬಾಲಚಂದ್ರ ಕುರಿ ಮಾತನಾಡಿ, ಹಿರೇಮಣ್ಣೂರಿ ಗ್ರಾಮದಿಂದ ಬಾಸಲಾಪುರ ಮಾರ್ಗವಾಗಿ ರೋಣಕ್ಕೆ ತೆರಳಲು ಸಂಪರ್ಕ ಕಲ್ಪಿಸುವ ಒಳ ರಸ್ತೆ ಸಂಪೂರ್ಣ ಹದಗೆಟ್ಟಿ ವರ್ಷ ಕಳೆಯುತ್ತಾ ಬಂದಿದೆ. ಇದರಿಂದಾಗಿ ಈ ಮಾರ್ಗವಾಗಿ ರೋಣಕ್ಕೆ ಹೋಗಿ ಬರಲು ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.
ಜೊತೆಗೆ ಅಲ್ಲಲ್ಲಿ ನಿರ್ಮಿಸಲಾದ ಸಿಡಿ (ಮಿನಿ ಸೇತುವೆ)ಗಳು ಕಿತ್ತೂಗಿವೆ. ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ರೋಣಕ್ಕೆ ಬರಲು ಚಿಕ್ಕಮಣ್ಣೂರ ಮಾರ್ಗವಾಗಿ ಸುತ್ತುವರೆದು ಬರಬೇಕಾದ ಪರಿಸ್ಥಿತಿ ಬಂದೊದಗಿದೆ. ರಸ್ತೆ ಅಭಿವೃದ್ಧಿಗಾಗಿ ಈಗಾಗಲೇ ಅನೇಕ ಬಾರಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಲಿಖೀತ ಮತ್ತು ಮೌಖೀಕವಾಗಿ ತಿಳಿಸುತ್ತಾ ಬರಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದ ಇಲಾಖೆಗೆ ಸೂಚನೆ ನೀಡಬೇಕು. ವಿಳಂಬವಾದಲ್ಲಿ ಹಿರೇಮಣ್ಣೂರ, ಬಾಸಲಾಪುರ ಗ್ರಾಮಸ್ಥರೊಂದಿಗೆ ಜಯ ಕರ್ನಾಟಕ ಸಂಘಟನೆ ಬೀದಿಗಿಳಿದು ಉಗ್ರ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಸಿದರು.
ತಹಶೀಲ್ದಾರ್ ಪರವಾಗಿ ಮನವಿ ಸ್ವೀಕರಿಸಿ ಶಿರಸ್ತೇದಾರ ಜೆ.ಎಸ್. ಪಾಟೀಲ ಮಾತನಾಡಿ, ಕೂಡಲೇ ಈ ಮನವಿಯನ್ನು ತಹಶೀಲ್ದಾರ್ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ಸಂಘಟನೆ ತಾಲೂಕು ಅಧ್ಯಕ್ಷ ಭೀಮಣ್ಣ ಇಂಗಳಿ, ಪ್ರಧಾನ ಕಾರ್ಯದರ್ಶಿ ಜಗದೀಶ ಮಡಿವಾಳರ, ಮುತ್ತುರಾಜ ಹನಸಿ, ಭಾಷಾಸಾಬ್ ನದಾಫ್, ಶ್ರೀಕಾಂತ ಕಂಬಳಿ, ಬಸವರಾಜ ಮಲ್ಲೂರ, ದೇವರಾಜ ಮಾದರ, ವಿಜಯಕುಮಾರ ತಹಶೀಲ್ದಾರ್, ಅಂದಾನಿ ಹುಲ್ಲೂರ,ಮಹಮ್ಮದ್ ರೋಣದ, ಬಸವರಾಜ ಮಾದರ, ಶರಣಪ್ಪಗೌಡ ಖ್ಯಾತನಗೌಡ್ರ, ಗುರು ಮಠಪತಿ, ಸಂಗಮೇಶ ಕಂಬಳಿ, ಮೈಲಾರಿ ಚಲವಾದಿ, ಮುತ್ತಣ್ಣ ಕುರಿ ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ
Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ
Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು
Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!
Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?