ರಾಜ್ಯಗಳ ಜನಸಂಖ್ಯೆ ಆಧಾರದಲ್ಲಿ ನೇಮಕಾತಿ

•23,956 ಅಭ್ಯರ್ಥಿಗಳ ನೋಂದಣಿ•ಮುಂದಿನ ರ್ಯಾಲಿ ಕೊಪ್ಪಳದಲ್ಲಿ •ಸೇನೆ ಸೇರಲು ಪ್ರೋತ್ಸಾಹ

Team Udayavani, May 31, 2019, 11:48 AM IST

gadaga-tdy-2…

ಗದಗ: ನಗರದಲ್ಲಿ ಭೂ ಸೇನಾ ನೇಮಕಾತಿಯ ರಾಜ್ಯದ ಹೆಚ್ಚುವರಿ ಮಹಾನಿರ್ದೇಶಕ ಮೇಜರ್‌ ಜನರಲ್ ವಿಜಯ ಪಿಂಗಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಗದಗ: ರಾಜ್ಯಗಳ ಜನಸಂಖ್ಯೆ ಆಧಾರದಲ್ಲಿ ಸೇನಾ ನೇಮಕಾತಿ ನಡೆಸಲಾಗುತ್ತದೆ. ಸೇನೆಯಲ್ಲಿ ನೇಮಕಗೊಳ್ಳಲು ಓಟ ಹಾಗೂ ದೈಹಿಕ ಸದೃಢತೆ ಮುಖ್ಯವಾಗಲಿದ್ದು, ಆಸಕ್ತರು ನಿರಂತರ ಅಭ್ಯಾಸ ಮಾಡಬೇಕು. ಸದ್ಯ ಸೇನೆಯಲ್ಲಿ ಜನರಲ್ ಡ್ಯೂಟಿಗೆ ಸೇರ್ಪಡೆಗೊಂಡವರಿಗೆ ಕನಿಷ್ಠ 40 ಸಾವಿರ ರೂ. ಮಾಸಿಕ ಸಂಬಳ ದೊರೆಯುತ್ತದೆ. ಈ ಹಿನ್ನೆಲೆಯಲ್ಲಿ ತಮ್ಮ ಮಕ್ಕಳು ಭಾರತೀಯ ಸೇನೆಯಲ್ಲಿ ಭರ್ತಿಯಾಗಲು ಪೋಷಕರು ಪ್ರೋತ್ಸಾಹಿಸಬೇಕು ಎಂದು ಭೂ ಸೇನಾ ನೇಮಕಾತಿಯ ರಾಜ್ಯದ ಹೆಚ್ಚುವರಿ ಮಹಾನಿರ್ದೇಶಕ ಮೇಜರ್‌ ಜನರಲ್ ವಿಜಯ ಪಿಂಗಳೆ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗದುಗಿನಲ್ಲಿ ಮೇ 28ರಿಂದ ಜೂನ್‌ 6ರ ವರೆಗೆ ರಾಜ್ಯದ 11 ಜಿಲ್ಲೆಗಳ ನೋಂದಾಯಿತ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ಭಾಗದ ತರುಣರು ದೈಹಿಕ ಸಾಮರ್ಥ್ಯ ಹೊಂದಿದ್ದರೂ ಓಟ ಹಾಗೂ ಲಿಖೀತ ಪರೀಕ್ಷೆಗೆ ಪೂರ್ವ ಸಿದ್ಧತೆ ಇಲ್ಲದೇ ನೇಮಕಾತಿ ರ್ಯಾಲಿಯಲ್ಲಿ ಭರ್ತಿಯಾಗುತ್ತಿದ್ದಾರೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಪಾಲಕರೇ ಮಕ್ಕಳಿಗೆ ಸೇನೆಗೆ ಹೋಗುವುದು ಬೇಡ ಎನ್ನುವ ಕಾರಣಗಳಿಂದ ಕಡಿಮೆ ಸಂಖ್ಯೆಯಲ್ಲಿ ನೇಮಕಾತಿ ಆಗುತ್ತಿದೆ.

ಗದುಗಿನಲ್ಲಿ ನಡೆಯುತ್ತಿರುವ ರ್ಯಾಲಿಯಲ್ಲಿ ದಿನವೂ 2,500 ಅಭ್ಯರ್ಥಿಗಳಿಗೆ ಅವಕಾಶ ನೀಡುತ್ತಿದ್ದು, ಅವರ ದೈಹಿಕ ಸಾಮರ್ಥ್ಯ ಆರೋಗ್ಯ ಹಾಗೂ ಲಿಖೀತ ಪರೀಕ್ಷೆಗಳ ಪೂರ್ವ ಸಿದ್ಧತೆ ಕೊರತೆಯಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಆಗುತ್ತಿಲ್ಲ. ಇದನ್ನು ಅಭ್ಯರ್ಥಿಗಳು ಪಾಲಕರು ಗಮನಿಸಿ ಮುಂಬರುವ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಆಗುವಂತೆ ಪೂರ್ವ ಸಿದ್ಧತೆಗೆ ಮುಂದಾಗಬೇಕೆಂದು ತಿಳಿಸಿದರು. ಮುಂದಿನ ರ್ಯಾಲಿ ಕೊಪ್ಪಳದಲ್ಲಿ ನಡೆಸಲಾಗುವುದು ಎಂದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಸೇನಾ ನೇಮಕಾತಿ ಜರುಗಿಸಿ, ಈ ಭಾಗದ ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶ ನೀಡುವ ಉದ್ದೇಶದಿಂದ ಈ ಬಾರಿ ಗದುಗಿನಲ್ಲಿ ರ್ಯಾಲಿ ಆಯೋಜಿಸಿದೆ. ಗದಗ ಭೂ ಸೇನಾ ನೇಮಕಾತಿಗೆ 23,956 ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ನೋಂದಾಯಿಸಿದ್ದಾರೆ. ನೇಮಕಾತಿ ಪ್ರಕ್ರಿಯೆ ನಿರ್ವಹಿಸಲು ಜಿಲ್ಲಾ ಕ್ರೀಡಾಂಗಣ, ಅಭ್ಯರ್ಥಿಗಳಿಗೆ ವಿವಿಧ ಸಮುದಾಯ ಭವನಗಳಲ್ಲಿ ವಸತಿ ಸೌಕರ್ಯ ಒದಗಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಭೂಸೇನಾ ನೇಮಕಾತಿ ಮಹಾನಿರ್ದೇಶಕ ಬ್ರಿಗೇಡಿಯರ್‌ ದೀಪೇಂದ್ರ ರಾವತ್‌ ಮಾತನಾಡಿ, ಸೇನಾ ಭರ್ತಿ ರ್ಯಾಲಿ ಸಂಪೂರ್ಣ ಪಾರದರ್ಶಕವಾಗಿ ನಡೆಯಲಿದೆ. ನೇಮಕಾತಿಯಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ. ಅಭ್ಯರ್ಥಿಯ ಆಯ್ಕೆಗೆ ಅಗತ್ಯದ ಓಟ, ಹೈ ಜಂಪ್‌, ಲಾಂಗ್‌ ಜಂಪ್‌, ದೈಹಿಕ ಸಾಮರ್ಥ್ಯ, ದೈಹಿಕ ಅರ್ಹತೆ, ಲಿಖೀತ ಪರೀಕ್ಷೆ ಎದುರಿಸುವ ಕುರಿತು ಪೂರ್ವ ತಯಾರಿ ಮಾಡಿಕೊಳ್ಳಬೇಕು. ಇದಕ್ಕಾಗಿ ಭಾರತೀಯ ಸೇನೆ ವೆಬ್‌ಸೈಟ್‌ನಲ್ಲಿ ಅಗತ್ಯ ಮಾಹಿತಿ ನೀಡಲಾಗಿದೆ. ಇಂಗ್ಲಿಷ್‌ ಹಾಗೂ ಹಿಂದಿ ಭಾಷೆಗಳನ್ನು ಉತ್ತಮ ಪರಿಣಿತಿಯನ್ನು ಹೊಂದಬೇಕು. ಸೇನೆ ನೇಮಕಾತಿಗೆ ಯಾವುದೇ ವ್ಯಕ್ತಿಗೆ ಲಂಚ ನೀಡುವ ಅಗತ್ಯವಿಲ್ಲ. ಈ ಕುರಿತು ಅಭ್ಯರ್ಥಿಗಳಲ್ಲಿ ಜಾಗೃತರಾಗಬೇಕು ಎಂದು ಹೇಳಿದರು.

ಮಂಗಳೂರು ಭೂ ಸೇನಾ ನೇಮಕಾತಿ ಕೇಂದ್ರದ ನಿರ್ದೇಶಕ ಕರ್ನಲ್ ಎಂ.ಎ. ರಾಜಮನ್ನಾರ್‌, ಭೂ ಸೇನೆ ಅಧಿಕಾರಿಗಳಾದ ಪಿ. ರಂಗವಾಲ್, ರೋಹಿತ ಠಾಕೂರ, ರಿತೇಶ ಸಿಂಗ್‌, ಸಮೀತ ನವಾನಿ, ರಾಣೆ, ಹಾಗೂ ಸೈನಿಕ ಕಲ್ಯಾಣ ಹಾಗೂ ಪುನರ್ವಸತಿ ಧಾರವಾಡ ಕೇಂದ್ರದ ಉಪನಿರ್ದೇಶಕ ನಿವೃತ್ತ ವಿಂಗ್‌ ಕಮಾಂಡರ್‌ ಈಶ್ವರ ಕಡೊಳ್ಳಿ ಇದ್ದರು.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Gadag; ಮನೆ ಮಗನಿಂದಲೇ ಸುಪಾರಿ; ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು; 8 ಜನರ ಬಂಧನ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.