ಚಿನ್ನದ ಪದಕಕ್ಕೆ ಮುತ್ತಿಕ್ಕಿದ ಅಥ್ಲೆಟಿಕ್ ಪ್ರಶಾಂತ್
ಬಾಲ್ಯದಿಂದಲೇ ಕ್ರೀಡೆಯಲ್ಲಿ ಅದಮ್ಯ ಆಸಕ್ತಿ. ಬಿಡದೇ ಸಾಧಿಸುವ ಛಲ.
Team Udayavani, Aug 3, 2022, 5:05 PM IST
ಗಜೇಂದ್ರಗಡ: ನೇಪಾಳದಲ್ಲಿ ನಡೆದ ಏಳನೇ ಇಂಡೊ-ನೇಪಾಳ ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ನಲ್ಲಿ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ದಿಂಡೂರ ಗ್ರಾಮದ ಯುವಕ ಪ್ರಶಾಂತ್ ಬಿದ್ನಾಳ ಚಿನ್ನದ ಪದಕಕ್ಕೆ ಮುತ್ತಿಟ್ಟು, ಭಾರತದ ಬಾವುಟ ಹಾರಿಸಿದ್ದಾರೆ.
ನೇಪಾಳದ ಪೊಖ್ರಾ ನಗರದ ರಂಗಶಾಲಾ ಕ್ರೀಡಾಂಗಣದಲ್ಲಿ ನಡೆದ ಇಂಡೊ-ನೇಪಾಳ ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 25 ವರ್ಷದೊಳಗಿನ
ವಿಭಾಗದ ತ್ರಿವಿಧ ಜಿಗಿತದಲ್ಲಿ 13.02 ಮೀ. ಜಿಗಿದು ದಾಖಲೆ ನಿರ್ಮಿಸುವ ಮೂಲಕ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಪ್ರಶಾಂತ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
ಗ್ರಾಮೀಣ ಪ್ರತಿಭೆ: ಬಾಲ್ಯದಿಂದಲೇ ಕ್ರೀಡೆಯಲ್ಲಿ ಅದಮ್ಯ ಆಸಕ್ತಿ. ಬಿಡದೇ ಸಾಧಿಸುವ ಛಲ. ಬಡತನದ ನಡುವೆಯೂ ಆಸಕ್ತಿಗೆ ಪೋಷಕರು ನೀರೆರೆದು ಬೆಳೆಸಿ, ಹತ್ತು ಹಲವಾರು ಸವಾಲುಗಳ ಮಧ್ಯೆಯೂ ನಿರಂತರ ಶ್ರಮದ ಫಲವಾಗಿ ಇಂದು ಇಡೀ ದೇಶವೇ ಮೆಚ್ಚುವಂತಹ ಸಾಧನೆ ಮಾಡಿ, ಗ್ರಾಮೀಣ ಪ್ರತಿಭೆಯಾಗಿ ಹೊರಹೊಮ್ಮಿದ್ದಾರೆ. ಮೂಲತಃ ಕೃಷಿ ಕುಟುಂಬದಿಂದ ಬಂದಿರುವ ಪ್ರಶಾಂತ ಬಿದ್ನಾಳ ಅವರ ತಂದೆ ನಾಗಪ್ಪ ಅವರು ಕೃಷಿ ವೃತ್ತಿ ಮಾಡಿಕೊಂಡಿದ್ದಾರೆ.
ಪ್ರೋತ್ಸಾಹ ಬೇಕು: ಬಡತನದ ಮಧ್ಯೆಯೇ ಸಾಧನೆಯ ಶಿಖರ ಏರಲು ಹಂಬಲಿಸುತ್ತಿರುವ ಪ್ರಶಾಂತ್ ಮುಂದಿನ ಕನಸು ಏಷ್ಯನ್ ಗೇಮ್ಸ್ನಲ್ಲಿ ರಾಷ್ಟ್ರ ಪ್ರತಿನಿ
ಧಿಸುವುದಾಗಿದೆ. ಆದರೆ ಈ ಪ್ರತಿಭೆಗೆ ಆರ್ಥಿಕ ಹೊರೆ ಜತೆಗೆ ಸಮರ್ಪಕ ತರಬೇತಿ ಕೊರತೆ ಕಾಡುತ್ತಿದೆ. ಸೂಕ್ತ ಸೌಲಭ್ಯಗಳು ದೊರೆತಲ್ಲಿ ತಾಲೂಕಿನ ಕೀರ್ತಿ, ದೇಶದ ವಿಜಯ ಪತಾಕೆ ಹಾರಿಸುವುದರಲ್ಲಿ ಯಾವುದೇ ಸಂದೇಹವಿಲ್ಲ.
ಅಥ್ಲೆಟಿಕ್ನಲ್ಲಿ ಇನ್ನು ಹೆಚ್ಚಿನ ಸಾಧನೆ ಮಾಡಬೇಕೆಂದು ಕೊಂಡಿದ್ದೇನೆ. ಮುಂಬರುವ ಏಷ್ಯನ್ ಗೇಮ್ಸ್ನಲ್ಲಿ ಅವಕಾಶ ಪಡೆಯಲು ನನಗೆ ಸೂಕ್ತ ತರಬೇತಿ ಅವಶ್ಯಕತೆ ಇದೆ. ಆದರೆ ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿದ್ದೇನೆ. ದೇಶವನ್ನು ಪ್ರತಿನಿಧಿಸುವುದೇ ನನ್ನ ಗುರಿ ಹಾಗೂ ಕನಸಾಗಿದೆ.
ಪ್ರಶಾಂತ್ ಬಿದ್ನಾಳ, ಚಿನ್ನದ ಪದಕ ವಿಜೇತ ಕ್ರೀಡಾಪಟು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್