ಆಟೋ ಚಾಲಕರ ಮುಷ್ಕರ

•ಆರಕ್ಕಿಂತ ಹೆಚ್ಚು ಶಾಲಾ ಮಕ್ಕಳನ್ನು ಕರೆದೊಯ್ಯುವಂತಿಲ್ಲ ಆದೇಶಕ್ಕೆ ವಿರೋಧ

Team Udayavani, Jun 25, 2019, 8:11 AM IST

gadaga-tdy-1..

ಗದಗ: ಶಾಲಾ ಆಟೋ ಚಾಲಕರ ಮುಷ್ಕರದ ಹಿನ್ನೆಲೆಯಲ್ಲಿ ಮಕ್ಕಳನ್ನು ಕರೆದೊಯ್ಯಲು ಶಾಲೆಯೊಂದರ ಬಳಿ ಪೋಷಕರು ಕಾದು ನಿಂತಿರುವುದು.

ಗದಗ: ಆಟೋಗಳಲ್ಲಿ ಆರಕ್ಕಿಂತ ಹೆಚ್ಚಿನ ಶಾಲಾ ಮಕ್ಕಳನ್ನು ಕರೆದೊಯ್ಯುವಂತ್ತಿಲ್ಲ ಎಂಬ ಜಿಲ್ಲಾ ಪೊಲೀಸ್‌ ಇಲಾಖೆ ಆದೇಶವನ್ನು ಖಂಡಿಸಿ ಗದಗ-ಬೆಟಗೇರಿ ಅವಳಿ ನಗರದ ವಿವಿಧ ಆಟೋ ಚಾಲಕರ ಸಂಘಟನೆಗಳು ಕರೆ ನೀಡಿದ್ದ ಮುಷ್ಕರದಿಂದಾಗಿ ಸೋಮವಾರ ವಿದ್ಯಾರ್ಥಿಗಳ ಪೋಷಕರು ಪರದಾಡಿದರು.

ಅವಳಿ ನಗರದಲ್ಲಿ ಸುಗಮ ಸಂಚಾರಕ್ಕೆ ಅನುವು ಒತ್ತು ನೀಡುವುದರೊಂದಿಗೆ ವಾಹನ ಸಂಚಾರಿ ನಿಮಯಗಳನ್ನು ಅನುಷ್ಠಾನಗೊಳಿಸಲು ಜಿಲ್ಲಾ ಪೊಲೀಸ್‌ ಇಲಾಖೆ ಪ್ರಯತ್ನಿಸುತ್ತಿದೆ. ಅದರ ಭಾಗವಾಗಿ ಆಟೋಗಳಲ್ಲಿ ಕುರಿ ಹಿಂಡಿನಂತೆ 10-20 ಮಕ್ಕಳನ್ನು ತುಂಬು ಆಟೋ ಚಾಲಕರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿತ್ತು. ಆದರೂ, ಪರಿಸ್ಥಿತಿ ಸುಧಾರಿಸದ ಹಿನ್ನೆಲೆಯಲ್ಲಿ ಇತ್ತೀಚೆಗೆ ರಾಜೀವಗಾಂಧಿ ನಗರ ಪೊಲೀಸ್‌ ಠಾಣೆ, ಶಹರ ಪೊಲೀಸ್‌ ಠಾಣೆ ಹಾಗೂ ಸಂಚಾರಿ ಠಾಣೆ ಪೊಲೀಸರು ಕೆಲ ಆಟೋಗಳನ್ನು ವಶಕ್ಕೆ ಪಡೆದಿದ್ದಾರೆ.

ಅಲ್ಲದೇ, 6ಕ್ಕಿಂತ ಹೆಚ್ಚಿನ ಶಾಲಾ ಮಕ್ಕಳನ್ನು ಸಾಗಿಸುವ ಆಟೋಗಳನ್ನು ವಶಕ್ಕೆ ಪಡೆಯುವುದಾಗಿ ಪೊಲೀಸರ ಕಟ್ಟುನಿಟ್ಟಿನ ಎಚ್ಚರಿಕೆ ಹಿನ್ನೆಲೆಯಲ್ಲಿ ಸೋಮವಾರ ಶಾಲಾ ಮಕ್ಕಳನ್ನು ಕರೆದೊಯ್ಯದೇ ಆಟೋ ಚಾಲಕರು ಮುಷ್ಕರ ನಡೆಸಿದರು. ಪರಿಣಾಮ ಮಕ್ಕಳ ಪೋಷಕರೇ ತಮ್ಮ ವಾಹನಗಳಲ್ಲಿ ಶಾಲೆಗೆ ಬಿಟ್ಟು ಬರುವಂತಾಯಿತು.

ಪೋಷಕರ ಪರದಾಟ: ವಿವಿಧ ಆಟೋ ಚಾಲಕರು ಮತ್ತು ಮಾಲೀಕರ ಸಂಘಟನೆಗಳ ಕರೆ ಮೇರೆಗೆ ಸೋಮವಾರ ಶಾಲಾ ಮಕ್ಕಳನ್ನು ಕೊರೆದೊಯ್ಯುವ ಆಟೋಗಳು ಸೇವೆ ಒದಗಿಸಲಿಲ್ಲ. ಈ ಕುರಿತು ಪೂರ್ವ ಪರ ಮಾಹಿತಿಯಿದ್ದ ಪೋಷಕರು, ಮುಂಜಾಗ್ರತೆಯಿಂದ ತಾವೇ ಖುದ್ದಾಗಿ ಶಾಲೆಗಳಿಗೆ ತಲುಪಿಸಿದರು. ಇನ್ನೂ, ಕೆಲವರು ನೆರೆ-ಹೊರೆಯರ ದ್ವಿಚಕ್ರ ವಾಹನಗಳ ಮೂಲಕ ಮಕ್ಕಳನ್ನು ಶಾಲೆಗೆ ಕಳುಹಿಸಿದರು. ಆಟೋ ಚಾಲಕರು ಮುಷ್ಕರ ನಡೆಸಿದ್ದರಿಂದ ಕೆಲವರು ಒಂದೇ ಬೈಕ್‌ನಲ್ಲಿ ಗರಿಷ್ಠ 6 ಮಕ್ಕಳು, ಅವರ ಊಟದ ಡಬ್ಬಿಗಳೊಂದಿಗೆ ಬೈಕ್‌ ಚಲಾಯಿಸಲಾಗದೇ ಹೈರಾಣಾದರು.

ಇನ್ನುಳಿದಂತೆ ಒಂದೇ ಬೈಕ್‌ನಲ್ಲಿ ಇಬ್ಬರು, ಮೂವರು ಮಕ್ಕಳನ್ನು ಕರೆದೊಯ್ಯುತ್ತಿರುವುದು ಎಲ್ಲೆಡೆ ಸಾಮಾನ್ಯವಾಗಿತ್ತು. ಸ್ವಂತ ವಾಹನದ ಸೌಲಭ್ಯ ಇಲ್ಲದ ಹಾಗೂ ಅನತಿ ದೂರದಲ್ಲಿ ಮನೆ ಇರುವ ಮಕ್ಕಳು ಅಜ್ಜಿ, ಚಿಕ್ಕಮ್ಮ, ಅತ್ತೆ, ಅದೇ ಮಾರ್ಗದಲ್ಲಿ ಸಾಗುವ ಶಿಕ್ಷಕಿಯರೊಂದಿಗೆ ಶಾಲೆಗಳತ್ತ ಹೆಜ್ಜೆ ಹಾಕಿದರು.

ಅನಿರೀಕ್ಷಿತವಾಗಿ ಆಟೋ ಚಾಲಕರು ಮುಷ್ಕರ ನಡೆಸಿದ್ದರಿಂದ ಕೆಲ ಪೋಷಕರು ಪೇಚಿಗೆ ಸಿಲುಕಿದರು. ಮಕ್ಕಳನ್ನು ದೂರದ ಶಾಲೆಗಳಿಗೆ ತಲುಪಿಸಿ, ಎದ್ದೂ ಬಿದ್ದು ತಮ್ಮ ಕೆಲಸ ಕಾರ್ಯಗಳತ್ತ ಓಡಿದರು. ಸಂಜೆ ಶಾಲೆಯಿಂದ ಮಕ್ಕಳನ್ನು ಮನೆಗೆ ಕರೆ ತರುವಾಗಗಲೂ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿರಲಿಲ್ಲ. ಶಾಲೆ ಬಿಡುವುದಕ್ಕೂ ಮುನ್ನವೇ ಅನೇಕರು ತಮ್ಮ ಬೈಕ್‌, ಕಾರುಗಳಲ್ಲಿ ಬಂದು ತಮ್ಮ ಮಕ್ಕಳಿಗಾಗಿ ಕಾದು ನಿಲ್ಲುವಂತಾಯಿತು.

ಜೀವನ ನಡೆಸೋದು ಕಷ್ಟ:

ಅವಳಿ ನಗರದಲ್ಲಿ 30ಕ್ಕೂ ಹೆಚ್ಚು ಖಾಸಗಿ ಶಾಲೆಗಳಿದ್ದು, ಸುಮಾರು 300 ಆಟೋಗಳು ಮಕ್ಕಳನ್ನು ಶಾಲೆಗೆ ತಲುಪಿಸುತ್ತವೆ. ಶಾಲೆಯ ದೂರಕ್ಕೆ ಅನುಗುಣವಾಗಿ ಒಂದು ಮಗುವಿಗೆ 250ರಿಂದ 400 ರೂ. ನೀಡುತ್ತಾರೆ. ಅದಕ್ಕಿಂತ ಹೆಚ್ಚಿನ ಹಣ ಕೊಡುವುದಿಲ್ಲ. ಹೀಗಾಗಿ ಒಂದು ಆಟೋದಲ್ಲಿ 8-9 ಮಕ್ಕಳನ್ನು ಕೂರಿಸಿಕೊಳ್ಳುತ್ತೇವೆ. ಆದರೆ, ಆರೇ ಮಕ್ಕಳನ್ನು ಕೂರಿಸಿಕೊಳ್ಳಬೇಕು ಎಂದರೆ ನಮ್ಮ ಜೀವನ ನಡೆಯುವುದು ಹೇಗೆ ಎಂಬುದು ಹಲವು ಆಟೋ ಚಾಲಕರ ಪ್ರಶ್ನೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.