ಕೀಟಜನ್ಯ ರೋಗಗಳ ನಿಯಂತ್ರಣ ಜಾಗೃತಿಗೆ ಸೂಚನೆ

ಅಂತರ್‌ ಇಲಾಖಾ ಸಮನ್ವಯ ಸಮಿತಿಯ ಸಭೆ

Team Udayavani, May 17, 2022, 2:18 PM IST

16

ಗದಗ: ಡೆಂಘೀ ಜ್ವರ ನಿಯಂತ್ರಣ ಕ್ರಮಗಳ ಕುರಿತು ಶಾಲಾ ಮಕ್ಕಳ ಮೂಲಕ ಜಾಥಾ ಏರ್ಪಡಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಪಂ ಸಿಇಒ ಡಾ.| ಸುಶೀಲಾ ಬಿ. ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಪಂ ಸಿಇಒ ಕಚೇರಿಯಲ್ಲಿ ಆರೋಗ್ಯ ಇಲಾಖೆಯಿಂದ ಸೋಮವಾರ ಏರ್ಪಡಿಸಿದ್ದ ಕೀಟಜನ್ಯ ರೋಗಗಳ ಅಂತರ್‌ ಇಲಾಖಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡೆಂಘೀ ಜ್ವರ ನಿಯಂತ್ರಣಕ್ಕೆ ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ನಿರಂತರವಾಗಿ ಲಾರ್ವಾ ಸಮೀಕ್ಷೆ ಕೈಗೊಳ್ಳಬೇಕು. ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡಲು ಶಾಲಾ ಮಕ್ಕಳ ಜಾಥಾ ಮೂಲಕ ಅರಿವು ಮೂಡಿಸಬೇಕು. ಕೀಟಜನ್ಯ ರೋಗಗಳ ನಿಯಂತ್ರಣದಲ್ಲಿ ವಿವಿಧ ಇಲಾಖೆಗಳಿಗೆ ವಹಿಸಲಾದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ಆಯಾ ಇಲಾಖಾ ಧಿಕಾರಿಗಳು ನಿರ್ವಹಿಸಬೇಕು. ಈ ಕಾರ್ಯದಲ್ಲಿ ವಿಳಂಬ ಧೋರಣೆ ಸಹಿಸಲಾಗದು ಎಂದು ಎಚ್ಚರಿಕೆ ನೀಡಿದರು.

ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಚಿಕೂನ್‌ ಗುನ್ಯಾ, ಡೆಂಘೀ ಜ್ವರ ಹಾಗೂ ಮಲೇರಿಯಾ ರೋಗಗಳ ಲಕ್ಷಣಗಳು ಹಾಗೂ ನಿಯಂತ್ರಣ ಕ್ರಮಗಳ ಕುರಿತು ಸಮೀಕ್ಷೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸ್ಥಳೀಯ ಸಂಸ್ಥೆ ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ ತೆರೆದ ಚರಂಡಿ ಹಾಗೂ ಗುಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಸೊಳ್ಳೆ ಉತ್ತತ್ತಿ ತಾಣಗಳನ್ನು ನಿರ್ಮೂಲನೆ ಮಾಡಬೇಕು. ವಾರಕ್ಕೊಮ್ಮೆ ಸೊಳ್ಳೆ ನಾಶಕ ದ್ರಾವಣಗಳು ಸಿಂಪಡಣೆ ಮಾಡಬೇಕು. ಅಂಗನವಾಡಿ ಹಾಗೂ ಶಾಲೆಗಳ ಆವರಣ, ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡಲು ಸೂಚಿಸಬೇಕು ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ| ಜಗದೀಶ ನುಚ್ಚಿನ್‌ ಮಾತನಾಡಿ, ಏಪ್ರಿಲ್‌ ಅಂತ್ಯದವರೆಗೆ 17 ಡೆಂಘೀ, 6 ಚಿಕೂನ್‌ಗುನ್ಯಾ ಪ್ರಕರಣಗಳು ಖಚಿತಪಟ್ಟಿದ್ದು, ಚಿಕಿತ್ಸೆಯಿಂದ ಎಲ್ಲರೂ ಗುಣಮುಖರಾಗಿದ್ದಾರೆ. ಪ್ರಕರಣಗಳು ಕಂಡುಬಂದ ಗ್ರಾಮಗಳಲ್ಲಿ ಸೊಳ್ಳೆ ನಿಯಂತ್ರಣಕ್ಕಾಗಿ ಕ್ರಮ ವಹಿಸಲಾಗಿದೆ. ಸಮುದಾಯಕ್ಕೆ ಲಾರ್ವಾಹಾರಿ ಮೀನುಗಳ ಬಗ್ಗೆ, ಕೀಟಜನ್ಯ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳ ಕುರಿತು ಆರೋಗ್ಯ ಶಿಕ್ಷಣ ನೀಡಲಾಗುತ್ತಿದೆ. ಮಲೇರಿಯಾ ನಿಯಂತ್ರಣಕ್ಕಾಗಿ ಎಪಿಐ 2 ಮತ್ತು ಅದಕ್ಕಿಂತ ಹೆಚ್ಚು ಇರುವ 11 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ 19 ಗ್ರಾಮಗಳಲ್ಲಿ 2022ನೇ ಸಾಲಿನ ಮೊದಲನೇ ಸುತ್ತಿನ ಡಿಡಿಟಿ ಶೇ.50 ಸಿಂಪಡಣೆ ಪೂರ್ಣಗೊಳಿಸಬೇಕು ಎಂದರು.

ಕೀಟಜನ್ಯ ನಿಯಂತ್ರಣಾಧಿಕಾರಿ ಡಾ| ಎಸ್‌.ಎಸ್‌. ನೀಲಗುಂದ ಮಾಹಿತಿ ನೀಡಿ, 2020ರಲ್ಲಿ 2,80,062 ಜನರಿಂದ ರಕ್ತ ಲೇಪನ ಪಡೆದು, ಪರೀಕ್ಷೆಗೆ ಒಳಪಡಿಸಲಾಗಿದ್ದು 5 ಪ್ರಕರಣಗಳು ಖಚಿತಪಟ್ಟಿವೆ. 2021ರಲ್ಲಿ 313871 ರಕ್ತ ಲೇಪನ ಪರೀಕ್ಷೆಯಾಗಿ 6 ಪ್ರಕರಣಗಳು ಖಚಿತಪಟ್ಟಿವೆ. 2021ರಲ್ಲಿ 111286 ರಕ್ತ ಲೇಪನ ಪರೀಕ್ಷೆಗೊಳಪಡಿಸಲಾಗಿದ್ದು, ಯಾವುದೇ ಪ್ರಕರಣಗಳು ದೃಢಪಟ್ಟಿಲ್ಲ. 2022ರ ಏಪ್ರಿಲ್‌ ಅಂತ್ಯದವರೆಗೆ 106895 ರಕ್ತ ಲೇಪನ ಪರೀಕ್ಷೆಗೊಳಪಡಿಸಲಾಗಿದ್ದು, 1 ಪ್ರಕರಣ ಮಾತ್ರ ದೃಢವಾಗಿದೆ ಎಂದು ತಿಳಿಸಿದರು.

ಡೆಂಘೀ ಜ್ವರ ನಿಯಂತ್ರಣ ಕುರಿತು ಬಿತ್ತಿಪತ್ರ ಬಿಡುಗಡೆ ಮಾಡಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್‌ ಎ., ಆರೋಗ್ಯ ಇಲಾಖೆಯ ಶಿಕ್ಷಣಾಧಿಕಾರಿ ರೂಪಸೇನ ಚವ್ಹಾಣ, ಆರ್‌ಸಿಎಚ್‌ ಅಧಿಕಾರಿ ಡಾ| ಬಿ.ಎಂ. ಗೊಜನೂರ ಇನ್ನಿತರರಿದ್ದರು.

ಡೆಂಗ್ಯೂ ಜ್ವರ ಅಂಕಿ-ಅಂಶ: 2020ರಲ್ಲಿ 1105 ರಕ್ತ ಮಾದರಿ ಸಂಗ್ರಹಿಸಲಾಗಿತ್ತು. ಅದರಲ್ಲಿ 199 ಪ್ರಕರಣಗಳು ಖಚಿತಪಟ್ಟಿವೆ. 2021ರಲ್ಲಿ 2207 ರಕ್ತ ಮಾದರಿ ಪೈಕಿ 239 ಪ್ರಕರಣಗಳು ಖಚಿತಪಟ್ಟಿವೆ. 2022ರಲ್ಲಿ ಈವರೆಗೆ 382 ರಕ್ತ ಮಾದರಿಗಳ ಪೈಕಿ 17 ಪ್ರಕರಣಗಳು ದೃಢವಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ.

ಚಿಕೂನ್‌ಗುನ್ಯ ಲೆಕ್ಕಾಚಾರ: 2020ರಲ್ಲಿ 463 ರಕ್ತ ಮಾದರಿ ಸಂಗ್ರಹಿಸಲಾಗಿತ್ತು. ಇದರಲ್ಲಿ 94 ಪ್ರಕರಣಗಳು ಖಚಿತಪಟ್ಟಿವೆ. 2021 ರಲ್ಲಿ 585 ರಕ್ತ ಮಾದರಿ ಪೈಕಿ 53 ಪ್ರಕರಣಗಳು ಖಚಿತಪಟ್ಟಿವೆ. 2022 ರಲ್ಲಿ ಈವರೆಗೆ 142 ರಕ್ತ ಮಾದರಿಗಳ ಪೈಕಿ 6 ಪ್ರಕರಣಗಳು ದೃಢವಾಗಿದ್ದು, ಯಾವುದೇ ರೋಗಿಯು ಮೃತಪಟ್ಟಿಲ್ಲ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.