ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಇಬ್ಬರು ನಾಯಕರ ಪೈಪೋಟಿ : ಸಚಿವ ಬಿ ಶ್ರೀರಾಮುಲು ಲೇವಡಿ

ಬಿಜೆಪಿ ಇರುವವರೆಗೆ ಕುರ್ಚಿ ಖಾಲಿಯಿಲ್ಲ

Team Udayavani, Jul 5, 2022, 5:22 PM IST

ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಇಬ್ಬರು ನಾಯಕರ ಪೈಪೋಟಿ : ಸಚಿವ ಬಿ ಶ್ರೀರಾಮುಲು ಲೇವಡಿ

ಗದಗ : ಕಾಂಗ್ರೆಸ್ ನಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಮಧ್ಯೆ ಪೈಪೋಟಿ ರಾಜಕಾರಣ ನಡೆಯುತ್ತಿದ್ದು, ಕೆಜಿಎಫ್ ಚಾಪ್ಟರ್1, ಚಾಪ್ಟರ್ 2ರ ಮಾದರಿಯಲ್ಲಿ ರಾಕಿ ವರ್ಸಸ್ ರಾಕಿ ಫೈಟ್ ಜೋರಾಗಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಲೇವಡಿ ಮಾಡಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬರು ಸಾಮೂಹಿಕ ನಾಯಕತ್ವ ಎಂದು ಹೇಳುತ್ತಿದ್ದರೆ, ಮತ್ತೊಬ್ಬರು ಶಕ್ತಿ ಪ್ರದರ್ಶನ ಎನ್ನುತ್ತಿದ್ದಾರೆ, ಮತ್ತೆ ಕೆಲವರು ಸಿದ್ದರಾಮ ಉತ್ಸವ ಮಾಡುತ್ತೇನೆ ಅಂತಿದ್ದಾರೆ. ಬಹುಶಃ ಇಂತಹ ರಾಜಕೀಯ ಪಕ್ಷಗಳಿಗೆ ರಾಷ್ಟ್ರ ಹಾಗೂ ರಾಜ್ಯದಲ್ಲಿ ಉತ್ತಮ ಭವಿಷ್ಯವಿಲ್ಲ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಇಬ್ಬರು ನಾಯಕರು ಹೋರಾಟ ಮಾಡುತ್ತಿದ್ದಾರೆ, ಆದರೆ, ಭಾರತೀಯ ಜನತಾ ಪಕ್ಷ ಇರುವವರೆಗೆ ಆ ಕುರ್ಚಿಯಂತೂ ಸಿಗೋದಿಲ್ಲ. ಅವರು ಹಗಲು ಕನಸು ಕಾಣುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸಕಾರವು ಅಭಿವೃದ್ಧಿ ಹಾಗೂ ಪ್ರಗತಿ ಪರ ಕೆಲಸ ಮಾಡುತ್ತಿದ್ದಾರೆ. ಎಲ್ಲ ಸಚಿವರು ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ರಾಜ್ಯಾದ್ಯಂತ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. 2023ರ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಬಸವರಾಜ ಬೊಮ್ಮಾಯಿ ಅವರೆ ಮತ್ತೆ ಸಿಎಂ ಆಗಿ ಮುಂದುವರಿಲಿದ್ದಾರೆ ಎಂದರು.

ಇದನ್ನೂ ಓದಿ : ಜುಲೈ 8ರವರೆಗೂ ಮುಂಬೈನಲ್ಲಿ ಧಾರಾಕಾರ ಮಳೆ, ತಗ್ಗು ಪ್ರದೇಶ ಜಲಾವೃತ; NDRF ರವಾನೆ

ರಾಜ್ಯಾದ್ಯಂತ ವಿವಿಧೆಡೆ ಎಸಿಬಿ ದಾಳಿ ನಡೆಯುತ್ತಿರುವುದು ಹೊಸತೇನಲ್ಲ. ಅದರಂತೆ ಶಾಸಕ ಜಮೀರ ಅಹ್ಮದ್ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿರುವುದು ಸಹಜ ಪ್ರಕ್ರಿಯೆ. ಇದರಲ್ಲೇನು ವಿಶೇಷತೆ ಇಲ್ಲ. ಅಧಿಕಾರಿಗಳು ತಮ್ಮ ಕೆಲಸ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆೆ ನಡೆಸಿದ ವೇಳೆ ದೇಶಾದ್ಯಂತ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ ಬಿಜೆಪಿ ಮೇಲೆ ಆರೋಪಗಳ ಮಳೆ ಸುರಿಸಿದರು. ಇಂತಹ ಆರೋಪಗಳು ವಿರೋಧ ಪಕ್ಷಗಳಿಗೆ ಶೋಭೆ ತರುವಂತಹುದಲ್ಲ ಎಂದು ಹೇಳಿದರು.

ಪಿಎಸ್‌ಐ ಅಕ್ರಮ ನೇಮಕಾತಿ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸ್ವತಃ ಮುತುವರ್ಜಿ ವಹಿಸಿ ಪ್ರಕರಣಗಳನ್ನು ತನಿಖೆ ನಡೆಸಿ ಬಯಲಿಗೆಳೆದು ಅಪರಾಧಿಗಳನ್ನು ಜೈಲಿಗೆ ಕಳುಹಿಸುವ ಕೆಲಸ ಮಾಡಿದ್ದಾರೆ. ಅಕ್ರಮಕ್ಕೆ ಅವಕಾಶವಿಲ್ಲ. ಇದರಲ್ಲಿ ಎಷ್ಟೆ ಪ್ರಭಾವಿಗಳಿದ್ದರೂ ಕೈಬಿಡುವ ಮಾತೇ ಇಲ್ಲ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುತ್ತದೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.