ಜಗಜೀವನರಾಂ ತತ್ವಾದರ್ಶ ಪಾಲಿಸಿ: ಸುಂದರೇಶ
Team Udayavani, Apr 6, 2021, 5:11 PM IST
ಗದಗ: ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಜಿಲ್ಲೆಯ ವಿವಿಧದಲಿತ ಸಂಘಟನೆಗಳ ಆಶ್ರಯದಲ್ಲಿ ಹಸಿರುಕ್ರಾಂತಿ ಹರಿಕಾರ ಮತ್ತು ಮಾಜಿ ಉಪ ಪ್ರಧಾನಿ ಡಾ|ಬಾಬು ಜಗಜೀವನರಾಂ ಅವರ 114ನೇ ಜಯಂತಿಯನ್ನು ಜಿಲ್ಲಾಡಳಿತ ಭವನದಮುಖ್ಯ ಸಭಾಂಗಣದಲ್ಲಿ ಸೋಮವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಜಗಜೀವನರಾಂ ಅವರ ಭಾವಚಿತ್ರಕ್ಕೆಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿ, ಜಗಜೀವನರಾಂ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಮಹಾನ್ ನಾಯಕ. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸದೃಢ ದೇಶದ ನಿರ್ಮಾಣ ಸಾಧ್ಯ ಎಂದರು.
ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಎಂ., ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಪೌರಾಯುಕ್ತ ರಮೇಶ ಜಾಧವ, ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತವರಗಪ್ಪನವರ, ಪ್ರೊ| ಕೆ.ಎಚ್.ಬೇಲೂರ, ಎಸ್.ಎನ್. ಬಳ್ಳಾರಿ ಮೊದಲಾದವರಿದ್ದರು.
ಸಮಾಜ ಸುಧಾರಣೆಯ ಹರಿಕಾರ: ಪ್ರೊ| ಚಟಪಲ್ಲಿ :
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿಯ ಸಾಬರಮತಿ ಆಶ್ರಮದಲ್ಲಿಡಾ|ಬಾಬು ಜಗಜೀವನರಾಂ ಅವರ ಜನ್ಮದಿನ ಆಚರಿಸಲಾಯಿತು. ಕುಲಪತಿಪ್ರೊ| ವಿಷ್ಣುಕಾಂತ ಎಸ್. ಚಟಪಲ್ಲಿ ಮಾತನಾಡಿ, ಜಗಜೀವನರಾಮ್ಅವರು ಸಮಾಜ ಸುಧಾರಣೆಯ ಹರಿಕಾರರು. ಸಾಮಾಜಿಕ ಸಮಸ್ಯೆಗಳನ್ನು ಎದುರಿಸಿ, ಸಾಮಾಜಿಕ ಸಾಮರಸ್ಯಕ್ಕಾಗಿ ಹೋರಾಡಿ, ದೇಶದ ಉನ್ನತ ಸ್ಥಾನಕ್ಕೆ ತಲುಪಿದ ಧೀಮಂತ ನಾಯಕ ಎಂದರು.
ಶ್ರೀಧರ ದೀಕ್ಷಿತ್ ಉಪನ್ಯಾಸ ನೀಡಿದರು. ಕುಲಸಚಿವ ಪ್ರೊ| ಬಸವರಾಜ ಲಕ್ಕಣ್ಣವರ,ಡಾ| ಅಬ್ದುಲ್ ಅಜೀಜ್, ಗಿರೀಶ ದೀಕ್ಷಿತ್,ವಿಶೇಷಾಧಿಕಾರಿ ಉಮೇಶ ಬಾರಕೇರ,ಸಾಬರಮತಿ ಆಶ್ರಮದ ಸಂಚಾಲಕ ಪ್ರಕಾಶಮಾಚೇನಹಳ್ಳಿ, ಡಾ| ಶ್ರೀಧರ ಹಾದಿಮನಿ, ದೇವರಾಜ ದೊಡ್ಡಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ