21ರಂದು ಮಹದಾಯಿಗಾಗಿ ಬೆಂಗಳೂರು ಚಲೋ
ಧಾರವಾಡದಿಂದ ರೈಲಿನಲ್ಲಿ ಹೋರಾಟಗಾರರ ಪ್ರಯಾಣ-ಅಂದು ರಾತ್ರಿಯಿಂದಲೇ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ
Team Udayavani, Jun 17, 2022, 2:18 PM IST
ನರಗುಂದ: ಮಹದಾಯಿ ಮತ್ತು ಕಳಸಾ- ಬಂಡೂರಿ ಯೋಜನೆಗೆ ಚಾಲನೆ ಸೇರಿದಂತೆ ರೈತರು ಎದುರಿಸುತ್ತಿರುವ ಹಲವಾರು ಸಮಸ್ಯೆ ಗಳ ಪರಿಹಾರಕ್ಕೆ ಒತ್ತಾಯಿಸಿ ಮಹದಾಯಿ ಹೋರಾಟಗಾರರು ಜೂ.21ರಂದು ಬೆಂಗ ಳೂರು ಚಲೋಗೆ ನಿರ್ಧರಿಸಿದ್ದಾರೆ.
ಗುರುವಾರ ಮಹದಾಯಿ ಮತ್ತು ಕಳಸಾ- ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ 2527ನೇ ದಿನ ನಿರಂತರ ಸತ್ಯಾಗ್ರಹ ವೇದಿಕೆಯಲ್ಲಿ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ 4 ಜಿಲ್ಲೆ, 11 ತಾಲೂಕುಗಳ ರೈತರ ಸಭೆಯ ಬಳಿಕ ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ, ವೇದಿಕೆಯಲ್ಲಿ ಪಾಲ್ಗೊಂಡಿದ್ದ ನೂರಾರು ಸಂಖ್ಯೆಯ ಮಹದಾಯಿ ಹೋರಾಟ ಗಾರರನ್ನುದ್ದೇಶಿಸಿ ಮಾತನಾಡುತ್ತ ಈ ವಿಷಯ ಘೋಷಿಸಿದರು.
ರೈತರಿಗೆ ಸೂಚನೆ: ಜೂ.21ರಂದು ಬೆಂಗಳೂರು ಚಲೋನಲ್ಲಿ ಪಾಲ್ಗೊಳ್ಳುವ ರೈತರು ಅಗತ್ಯ ಬಟ್ಟೆ, ಎರಡು ದಿನಕ್ಕೆ ಬೇಕಾಗುವಷ್ಟು ರೊಟ್ಟಿ ಬುತ್ತಿಯೊಂದಿಗೆ ಅಂದು ಮ.12 ಗಂಟೆಯೊಳಗೆ ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಸೇರಬೇಕು. ಅಂದು ಮ.12.45ಕ್ಕೆ ಹೊರಡುವ ರೈಲ್ವೆ ಮೂಲಕ ಬೆಂಗಳೂರಿಗೆ ತೆರಳಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಬೆಂಗಳೂರಲ್ಲಿ ರಾತ್ರಿಯಿಂದಲೇ ಧರಣಿ: ಜೂ.21ರಂದು ತಡರಾತ್ರಿ 12 ಗಂಟೆಗೆ ಬೆಂಗಳೂರು ತಲುಪಲಿದ್ದು, ಅಲ್ಲಿನ ರೈಲ್ವೆ ನಿಲ್ದಾಣದಿಂದ ಪಾದಯಾತ್ರೆ ಮೂಲಕ ಬೆಂಗಳೂರಿನ ನೀರಾವರಿ ಮುಖ್ಯ ಕಚೇರಿವರೆಗೆ ತೆರಳಿ ಅಂದು ರಾತ್ರಿಯಿಂದಲೇ ಧರಣಿ ಪ್ರಾರಂಭಿಸಲಾಗುವುದು. ಸುಮಾರು 1 ಸಾವಿರಕ್ಕೂ ಹೆಚ್ಚು ರೈತರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು. ಮೇ 30ರಂದು ಬೆಂಗಳೂರಿಗೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ಮಹದಾಯಿ ಯೋಜನೆಗೆ ಶೀಘ್ರ ಚಾಲನೆ ನೀಡಬೇಕೆಂಬ ಬೇಡಿಕೆಯೊಂದಿಗೆ 10 ದಿನಗಳ ಗಡುವು ನೀಡಲಾಗಿತ್ತು. ತಪ್ಪಿದಲ್ಲಿ ಬೆಂಗಳೂರಿನ ನೀರಾವರಿ ಕಚೇರಿ ಎದುರು ಧರಣಿ ನಡೆಸುವುದಾಗಿ ಅಂದೇ ಮನವಿ ಪತ್ರದಲ್ಲಿ ತಿಳಿಸಿದಂತೆ ಇದೀಗ ಬೆಂಗಳೂರು ಚಲೋ ನಡೆಸಲಾಗುತ್ತಿದೆ ಎಂದು ವೀರೇಶ ಸೊಬರದಮಠ ಸ್ವಾಮೀಜಿ ತಿಳಿಸಿದರು. ಕಷ್ಟದ ಕಾಲದಲ್ಲಿ ಕಣ್ಣೀರು ಸುರಿಸುವ ರೈತರ ಸಂಕಷ್ಟಗಳ ಪರಿಹಾರಕ್ಕೆ ನಾವು ಮುಂದಾಗಿದ್ದೇವೆ. ಸುದೀರ್ಘ ಏಳನೇ ವರ್ಷದಲ್ಲಿ ಸಾಗಿಬಂದ ಈ ಹೋರಾಟ ನಮಗೆ ಎಲ್ಲವನ್ನೂ ಕಲಿಸಿದೆ. 1976ರಲ್ಲಿ ಹುಟ್ಟಿಕೊಂಡ ಮಹದಾಯಿ ಯೋಜನೆಗೆ ಇಂದು ನ್ಯಾಯಾಧಿಕರಣವೇ 4 ಟಿಎಂಸಿ ನೀರು ಹಂಚಿಕೆ ಮಾಡಿದ್ದರೂ, ಅದನ್ನು ಮಲಪ್ರಭೆಗೆ ಕೂಡಿಸುವ ಪ್ರಯತ್ನ ನಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಶಿವಪ್ಪ ಹೊರಕೇರಿ, ಪಂಚಪ್ಪ ಹನಸಿ, ಗಿರಿಯಪ್ಪ ಹಂಜಿ, ಅಶೋಕ ಸಾತಣ್ಣವರ, ಮುತ್ತಣ್ಣ ಪಾಟೀಲ, ಮಲ್ಲಣ್ಣ ಆಲೇಕರ, ಗುರು ರಾಯನಗೌಡ್ರ, ಶೇಖಣ್ಣ ಹುಲಿಕಟ್ಟಿ, ಬಸವರಾಜ ಗುಡಿ, ಯಲ್ಲಪ್ಪ ಶಿವಪ್ಪನವರ, ಮಹೇಶ ನಾವಳ್ಳಿ, ಬಿಷ್ಠನಗೌಡ ಹೊಸಮನಿ, ಮೃತ್ಯುಂಜಯ ಅರವಟಗಿಮಠ, ಉಮೇಶ ಹಳ್ಯಾಳ, ಶರೀಫ ಕಲಬುರ್ಗಿ, ಅಲ್ಲಿಸಾಬ ದಿಲಾವರಸಾಬ, ಚಿದಾನಂದ ಹರ್ತಿ, ಹೇಮಕ್ಕ ಗಾಳಿ, ಶಿವಪ್ಪ ಕಡಿಯವರ, ವೆಂಕನಗೌಡ ಪಾಟೀಲ, ಲಚ್ಚಮ್ಮ ಜೋತೆಣ್ಣವರ, ಮಲಪ್ರಭೆ ಸಮನ್ವಯ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ, ಕಾರ್ಯದರ್ಶಿ ಎಸ್.ಬಿ.ಜೋಗಣ್ಣವರ, ವಾಸು ಚವ್ಹಾಣ, ಹನಮಂತ ಸರನಾಯ್ಕರ, ವೆಂಕಪ್ಪ ಹುಜರತ್ತಿ, ಅರ್ಜುನ ಮಾನೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?