ಮಹಿಳೆಯರಿಂದ ಮಹಿಳೆಯರಿಗಿರುವ ಬ್ಯಾಂಕ್‌


Team Udayavani, Mar 8, 2020, 3:39 PM IST

gadaga-tdy-1

ಗದಗ: ಇತ್ತೀಚಿನ ದಿನಗಳಲ್ಲಿ ನಾನಾ ಕಾರಣಗಳಿಂದಾಗಿ ಅನೇಕ ಸಹಕಾರಿ ಸಂಘಗಳು ಸೇರಿದಂತೆ ರಾಷ್ಟ್ರೀಕೃತ ಬ್ಯಾಂಕ್‌ ಗಳು ನಷ್ಟದ ಹಾದಿಯಲ್ಲಿ ಸಾಗುತ್ತಿವೆ. ಆದರೆ, ಮಹಿಳೆಯರೇ ಕಟ್ಟಿದ ಸೌಭಾಗ್ಯ ಮಹಿಳಾ ಸೌಹಾರ್ದ ಸಹಕಾರಿ ಬ್ಯಾಂಕ್‌ ಇಂದು ಹೆಮ್ಮರವಾಗಿ ಬೆಳೆದಿದೆ. ವಾರ್ಷಿಕ ಕೋಟ್ಯಂತರ ರೂ. ವಹಿವಾಟು ನಡೆಸುವುದರೊಂದಿಗೆ ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಬೆನ್ನೆಲುಬಾಗಿ ನಿಂತಿದಿದೆ.

ನಗರದ ಚಾರ್ಟೆಡ್‌ ಅಕೌಂಟೆಂಟ್‌ ಆನಂದ ಪೋತ್ನೀಸ್ ಅವರ ಪತ್ನಿ ವೀಣಾ ಎ. ಪೋತ್ನೀಸ್ ಜಾನಕಿ ಮಲ್ಲಾಪುರ, ನಂದಾ ಬಿ. ಹುಲಕೋಟಿ ಹಾಗೂ ಮತ್ತಿತರರ ಪ್ರಯತ್ನದಿಂದ 1998ರಲ್ಲಿ ಸೌಭಾಗ್ಯ ಮಹಿಳಾ ಸೌಹಾರ್ದ ಸಹಕಾರಿ ಬ್ಯಾಂಕ್‌ ನಿಯಮಿಯತ ಸ್ಥಾಪನೆಗೊಂಡಿದ್ದು, ಕಳೆದ ಎರಡು ದಶಕಗಳಿಂದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಕೋಟ್ಯಂತರ ರೂ. ವಹಿವಾಟು: 1998ರಲ್ಲಿ 2 ಸಾವಿರ ಶೇರುಗಳಿಂದ ಆರಂಭಗೊಂಡ ಸೌಭಾಗ್ಯ ಮಹಿಳಾ ಬ್ಯಾಂಕ್‌ ಇದೀಗ 4,500 ಶೇರುದಾರರನ್ನು ಹೊಂದಿದೆ. ಬ್ಯಾಂಕ್‌ ಆರಂಭದಲ್ಲಿದ್ದ 100 ರೂ. ಇದ್ದ ಒಂದು ಶೇರಿನ ಬೆಲೆ ಈಗ 500 ರೂ.ಗೆ ತಲುಪಿದೆ. 4000 ಎಸ್‌ಬಿ ಖಾತೆಗಳನ್ನು ಹೊಂದಿದೆ. ಆರ್‌ಡಿ, ಎಫ್‌ಡಿ, ಸಿಎ ಸೇರಿದಂತೆ ಮತ್ತಿತರೆ ಪ್ರಕಾರದ ಖಾತೆಗಳು ಹೊಂದಿದೆ. ಸಾಮಾನ್ಯವಾಗಿ ಸೌಹಾರ್ದ ಬ್ಯಾಂಕ್‌ಗಳು ನೀಡುವ ಸೇವೆಗಳನ್ನೇ ಗ್ರಾಹಕರಿಗೆ ಒದಗಿಸುತ್ತಿದೆ. ಗದಗ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ವೇತನ, ಅನೇಕ ಸರಕಾರಿ ನಿವೃತ್ತ ಹಿರಿಯ ನಾಗರಿಕರು ಪಿಂಚಣಿಯನ್ನೂ ಇದೇ ಬ್ಯಾಂಕ್‌ ನಿಂದ ಪಡೆದುಕೊಳ್ಳುತ್ತಿದ್ದಾರೆ.

ಶೇ. 95ರಷ್ಟು ಮಹಿಳೆಯರಿಗೆ ಸಾಲ!: ಇದು ಮಹಿಳೆಯರಿಂದಲೇ ಆರಂಭಗೊಂಡಿರುವ ಬ್ಯಾಂಕ್‌ ಇದಾಗಿದ್ದರಿಂದ ಸಾಲ ಸೌಲಭ್ಯದಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರತೀ ವರ್ಷ ಸರಾಸರಿ 9 ಕೋಟಿ ರೂ. ಗಳಷ್ಟು ಸಾಲ ನೀಡುತ್ತಿದೆ. ಇದರಲ್ಲಿ ಶೇ. 95ರಷ್ಟು ಮಹಿಳಾ ಗ್ರಾಹಕರಿಗೆ ಸಾಲ ನಿಡಲಾಗುತ್ತಿದ್ದು, ಶೇ. 5ರಷ್ಟು ಮಾತ್ರ ಪುರುಷರಿಗೆ ಸಾಲ ನೀಡಲಾಗುತ್ತಿದೆ. ಮಹಿಳೆಯರಿಗೆ ಸಾಲ ನೀಡುವುದರಿಂದ ಅವರು ಸಣ್ಣ- ಪುಟ್ಟ ವ್ಯಾಪಾರ ಆರಂಭಿಸುತ್ತಾರೆ. ಅವರ ಕುಟುಂಬದ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದ್ದು, ನೀಡಿದ ಸಾಲ ಸದ್ವಿನಿಯೋಗವಾಗುತ್ತದೆ ಎಂಬುದು ಬ್ಯಾಂಕಿನ ಆಡಳಿತ ಮಂಡಳಿಯ ಬಲವಾದ ನಂಬಿಕೆ.

ಹೀಗಾಗಿ ಬ್ಯಾಂಕ್‌ ಸ್ಥಾಪನೆಯಾದಾಗಿನಿಂದ ಈ ವರೆಗೆ ಯಾವ ವರ್ಷವೂ ಸಾಲ ಮಂಜೂರಾತಿಯಲ್ಲಿ ಶೇ. 5ಕ್ಕಿಂತ ಹೆಚ್ಚು ಪುರುಷರಿಗೆ ಸಾಲ ನೀಡಿಲ್ಲ. ಬ್ಯಾಂಕ್‌ನ ನಿರೀಕ್ಷೆಯಂತೆ ಸಾಲ ಪಡೆದಿರುವ ಮಹಿಳೆಯರಲ್ಲಿ ಬಹುತೇಕರು ಹಣ್ಣು ಮತ್ತು ತರಕಾರಿ ಅಂಗಡಿ, ಚಹ ಅಂಗಡಿ, ಕಿರಣಿ ಅಂಗಡಿಗಳನ್ನು ನಡೆಸುತ್ತಿದ್ದಾರೆ. ಇನ್ನೂ ಕೆಲವರು ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಮತ್ತಿತರೆ ಕಾರಣಗಳಿಗೆ ಸಾಲ ಪಡೆದಿದ್ದರೂ ಶೇ. 90ರಷ್ಟು ಸಾಲ ಮರುಪಾವತಿಯಾಗುತ್ತಿದೆ ಎನ್ನುತ್ತಾರೆ ಬ್ಯಾಂಕಿನ ಅಧಿಕಾರಿಗಳು.

ಬಹುತೇಕ ಮಹಿಳಾ ಸಿಬ್ಬಂದಿ: ಸೌಭಾಗ್ಯ ಮಹಿಳಾ ಸೌಹಾರ್ದ ಸಹಕಾರಿ ಬ್ಯಾಂಕ್‌ನಲ್ಲಿ ಹೆಸರೇ ಸೂಚಿಸುವಂತೆ ಬಹುತೇಕ ಎಲ್ಲ ಹುದ್ದೆಗಳಿಗೆ ಮಹಿಳೆಯರಿಗೆ ಮೀಸಲಾಗಿವೆ. ಬ್ಯಾಂಕ್‌ನ ಒಟ್ಟು ಏಳು ಹುದ್ದೆಗಳ ಪೈಕಿ ಪರಿಚಾರಕ ಹಾಗೂ ತಾಂತ್ರಿಕ ಹುದ್ದೆಗಳನ್ನು ಹೊರತು ಪಡಿಸಿದರೆ, ವ್ಯವಸ್ಥಾಪಕರು, ಕ್ಯಾಷಿಯರ್‌, ಕ್ಲರ್ಕ್‌ ಸೇರಿದಂತೆ ಐದು ಹುದ್ದೆಗಳನ್ನೇ ಮಹಿಳೆಯರೇ ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ. ಹೀಗಾಗಿ 22 ವರ್ಷಗಳ ಹಿಂದೆ 25 ಲಕ್ಷ ರೂ.ಗಳೊಂದಿಗೆ ಆರಂಭಗೊಂಡಿದ್ದ ಸೌಭಾಗ್ಯ ಮಹಿಳಾ ಸೌಹಾರ್ದ ಬ್ಯಾಂಕ್‌ ಇದೀಗ 50 ರೂ. ಆರ್‌.ಡಿ. ಠೇವಣಿ, ಎಪ್‌ಡಿ ಇತರೆ ಠೇವಣಿಳು ಸೇರಿದಂತೆ 20 ಕೋಟಿ ರೂ. ಹೊಂದಿದ್ದು, 11 ಕೋಟಿ ರೂ. ಸಾಲ ನೀಡಿದ್ದು, ಪ್ರತಿನಿತ್ಯ 10ರಿಂದ 15 ಲಕ್ಷ ರೂ. ವ್ಯವಹಾರ ಸೇರಿದಂತೆ ವಾರ್ಷಿಕ 24 ಕೋಟಿ ರೂ. ವಹಿವಾಟು ನಡೆಸುತ್ತಿರುವುದು ಶ್ಲಾಘನೀಯ. ಉತ್ತಮ ಆಡಳಿತ, ಪ್ರಾಮಾಣಿಕ ಸೇವೆಯೊಂದಿಗೆ ಯಶಸ್ಸಿನ ಹಾದಿಯನ್ನು ಮುನ್ನಡೆಯುವ ಮೂಲಕ ಸೌಭಾಗ್ಯ ಮಹಿಳಾ ಬ್ಯಾಂಕ್‌ ಇತರೆ ಸಹಕಾರಿ ಬ್ಯಾಂಕ್‌ಗಳಿಗೆ ಮಾದರಿಯಾಗಿದೆ.

ಈ ಬ್ಯಾಂಕ್‌ ಆರಂಭದಿಂದ ಇಲ್ಲೇ ಕೆಲಸ ಮಾಡುತ್ತಿದ್ದೇನೆ. ಆರಂಭದಲ್ಲಿ ಕ್ಲರ್ಕ್‌ ಆಗಿದ್ದ ನಾನು ಕಳೆದ ಐದಾರು ವರ್ಷಗಳಿಂದ ವ್ಯವಸ್ಥಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಆಡಳಿತ ಮಂಡಳಿಯಲ್ಲಿ ಸಂಪೂರ್ಣ ಮಹಿಳೆಯರೇ ಇರುವುದರಿಂದ ಮಹಿಳಾ ಗ್ರಾಹಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದು ಮಹಿಳೆಯರಿಂದ ಮಹಿಳೆಯರೆಗಾಗಿಯೇ ಇರುವ ಬ್ಯಾಂಕ್‌.  –ಬಿ.ಎಂ. ಹಂಡಿ, ಸೌಭಾಗ್ಯ ಮಹಿಳಾ ಸೌಹಾರ್ದ ಸಹಕಾರಿ ಬ್ಯಾಂಕ್‌

 

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.